ಉಡುಪಿಗೆ ವಿಶ್ವದ ಭೂಪಟದಲ್ಲೇ ವಿಶೇಷ ಸ್ಥಾನ ಒದಗಿಸುವುದೇ ನನ್ನ ಗುರಿ: Prasad Raj Kanchan


Team Udayavani, Apr 28, 2023, 12:44 PM IST

ಉಡುಪಿಗೆ ವಿಶ್ವದ ಭೂಪಟದಲ್ಲೇ ವಿಶೇಷ ಸ್ಥಾನ ಒದಗಿಸುವುದೇ ನನ್ನ ಗುರಿ: Prasad Raj Kanchan

ಉಡುಪಿ: ಉಡುಪಿಯಲ್ಲಿ ಪರಿಸರ ಸ್ನೇಹಿ ಉದ್ಯಮಗಳನ್ನು ಸ್ಥಾಪಿಸಿ ಯುವ ಜನತೆಗೆ ಇಲ್ಲೇ ಉದ್ಯೋಗ ದೊರಕಿಸಿಕೊಟ್ಟರೆ ಹೆತ್ತವರೂ ಬಹಳ ಸಂತೋಷದಿಂದ ಮಕ್ಕಳ ಜತೆಗೇನೆ ಬದುಕುತ್ತಾರೆ, ಈ ನಿಟ್ಟಿನಲ್ಲಿ ತಾನು ಶಾಸಕನಾದ ಬಳಿಕ ತೀವ್ರವಾಗಿ ಪ್ರಯತ್ನ ಮಾಡುವೆನು. ಉದ್ಯಮಗಳು ಬರಬೇಕಾದರೆ ಸುಸಜ್ಜಿತ ಮೂಲಭೂತ ಸೌಕರ್ಯಗಳೂ ಇರಬೇಕು ಅದಲ್ಲದೇ ಸಮಾಜದಲ್ಲಿ ಶಾಂತಿ ಸೌಹಾರ್ದತೆಯೂ ನೆಲೆಸಿರಬೇಕು, ಇವೆಲ್ಲವೂ ಸಾಧ್ಯ ಆಗಬೇಕಾದರೆ ಉಡುಪಿಯ ಜನ ತನಗೆ ಆಶೀರ್ವಾದ ಮಾಡಿ ಗೆಲ್ಲಿಸಬೇಕು ಎಂದು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ ಹೇಳಿದರು.

ಅವರು ಉಡುಪಿ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಹಳ ಮುಖ್ಯವಾಗಿ ಕುಡಿಯವ ನೀರಿನ ಸಮಸ್ಯೆ ಹಾಗೂ ಒಳ ಚರಂಡಿ ಸಮಸ್ಯೆ ಉಡುಪಿ ನಗರದಲ್ಲಿ ಮತದಾರರು ಎತ್ತುತ್ತಿದ್ದ ಸಮಸ್ಯೆ ಆಗಿದ್ದು ಇವುಗಳಿಗೆ ಒಂದು ವೈಜ್ಞಾನಿಕ ಪರಿಹಾರವನ್ನೂ ಹುಡುಕಿ ಅನುಷ್ಠಾನಕ್ಕೆ ತರುವ ಭರವಸೆ ನೀಡಿದರು.

ಶೋಭಕ್ಕ ಕ್ಷೇತ್ರದಲ್ಲಿ ಕಣ್ಮರೆ:
ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಕಾಂಚನ್‌ ರವರು ಮಾತನಾಡಿ, ಬಿಜೆಪಿಯ ಮುಖಂಡರುಗಳಾದ ಶೋಭಾ ಹಿಂದೆ ಗ್ಯಾಸ್‌ ಸಿಲಿಂಡರ್‌ಗೆ ಹತ್ತು ರೂ. ಜಾಸ್ತಿ ಮಾಡಿದಾಗಲೆಲ್ಲಾ ಬೀದಿಗಿಳಿದು ಸರಕಾರಕ್ಕೆ ಹಿಗ್ಗಾ ಮುಗ್ಗಾ ನಿಂದಿಸುತ್ತಿದ್ದರು, ಈಗ ಶೋಭಕ್ಕ ಕ್ಷೇತ್ರದಿಂದಲೇ ಕಣ್ಮರೆ ಆಗಿದ್ದಾರೆ, ಉಡುಪಿಯ ಎಲ್ಲಾ ಸರಕಾರಿ ಕಛೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ತಾಂಡವ ಆಡುತ್ತಿದ್ದು ಇನ್ನೊಮ್ಮೆ ಬಿಜೆಪಿ ಬಂದರೆ ದೇವರೇ ಬಂದರೂ ಪರಿಸ್ಥಿತಿ ಸರಿ ಪಡಿಸಲು ಸಾಧ್ಯವೇ ಇಲ್ಲ ಎಂಬ ಎಚ್ಚರಿಕೆಯನ್ನೂ ನೀಡಿದರು.

ಭಾವನಾತ್ಮಕ ವಿಚಾರಕ್ಕೆ ತಡೆ:

ಜಿಲ್ಲಾ ಕಾಂಗ್ರೆಸ್‌ ಮುಖಂಡ ಕುಶಲ್‌ ಶೆಟ್ಟಿ ಕಾಂಗ್ರೆಸ್‌ ಸರಕಾರಗಳ ಕೊಡುಗೆಯಿಂದ ಜನರ ಜೀವನ ಮಟ್ಟ ಸುಧಾರಣೆ ಆಗಿದೆ, ಆದರೂ ಜನರು ಭಾವನಾತ್ಮಕ ವಿಚಾರಗಳಿಗೆ ಬಲಿಯಾಗಿ ಕೆಲವೊಮ್ಮೆ ಬಿಜೆಪಿಯ ಕಡೆ ವಾಲುವುದು ದುರದೃಷ್ಟಕರ. ಇದನ್ನು ತಡೆಯಲು ಕಾಂಗ್ರೆಸ್‌ ಕಾರ್ಯಕರ್ತರು ಪೂರ್ಣ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಸುರೇಶ್‌ ಶೆಟ್ಟಿ ಬನ್ನಂಜೆ ಮಾತನಾಡಿ ಪ್ರಧಾನಿ ಮೋದಿಯವರು ದೇಶವನ್ನೇ ಮಾರಲಿದ್ದಾರೆ, ಈಗಾಗಲೇ ವಿಮಾನ ನಿಲ್ದಾಣ, ಸಾರ್ವಜನಿಕ ಬ್ಯಾಂಕ್‌ ಗಳಲ್ಲಿನ ಶೇರುಗಳು, ಎಲ್‌ಐಸಿ ಯ ಶೇರುಗಳು, ಸ್ಟೇಡಿಯಮ್‌ಗಳು, ಇನ್ನೂ ಅನೇಕ ಸರಕಾರಿ ಸಂಸ್ಥೆಗಳನ್ನು ತನ್ನ ಕೆಲವೇ ಕೆಲವು ಮಿತ್ರರಿಗೆ ಖಾಸಗೀಕರಣ ಮಾಡಿ ನೀಡಿ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರುಗಳಾದ ಮಹಾಬಲ ಕುಂದರ್‌, ದಿವಾಕರ ಕುಂದರ್‌, ಗಣೇಶ್‌ ನೆರ್ಗಿ, ಸುಕೇಶ್‌ ಕುಂದರ್‌, ಕೀರ್ತಿ ಶೆಟ್ಟಿ, ಪ್ರಶಾಂತ ಪೂಜಾರಿ, ಮಿಥುನ್‌ ಅಮೀನ್‌, ಯತೀಶ್‌ ಕರ್ಕೆರ, ನಾಸೀರ್‌, ರವಿರಾಜ್‌, ಹಮ್ಮದ್‌, ಸದಾಶಿವ ಅಮೀನ್‌ ಕಟ್ಟೆಗುಡ್ಡೆ, ಶರತ್‌ ಶೆಟ್ಟಿ, ಶಬರೀಶ್‌, ಮಮತಾ ಶೆಟ್ಟಿ, ವಿಶ್ವಾಸ್‌ ಅಮೀನ್‌, ಶ್ರೀನಿವಾಸ ಹೆಬ್ಟಾರ್‌, ಹಬೀಬ್‌ ಅಲಿ, ನಾಗೇಶ್‌ ಉದ್ಯಾವರ ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು.

ಅಜ್ಞಾನದ ಪರಮಾವಧಿ
ಕಾಂಗ್ರೆಸ್‌ ಸರಕಾರಗಳು ಕಟ್ಟಿದ ಆಸ್ಪತ್ರೆಯಲ್ಲಿ ಜನ್ಮ ತಾಳಿ ,ಕಾಂಗ್ರೆಸ್‌ ಸರಕಾರವೇ ನೀಡಿದ ನಿವೇಶನದಲ್ಲಿ ಕಟ್ಟಿದ ಮನೆಯಲ್ಲಿ ಬೆಳೆದು ಅದೇ ರೀತಿ ಕಾಂಗ್ರೆಸ್‌ ಅವಧಿಯಲ್ಲೇ ಆದ ಶಾಲೆ ಕಾಲೇಜುಗಳಲ್ಲಿ ಓದಿ, ಕಾಂಗ್ರೆಸ್‌ ಸರಕಾರಗಳು ನಿರ್ಮಾಣ ಮಾಡಿದ ರಸ್ತೆ ಸೇತುವೆಗಳಲ್ಲಿ ದಿನಾ ಸಂಚಾರ ಮಾಡುತ್ತಾ ಈಗಿನ ಪೀಳಿಗೆಯ ಕೆಲ ಯುವಕರು ಬಹಳ ತಾತ್ಸಾರವಾಗಿ ಕಾಂಗ್ರೆಸ್‌ ಅರವತ್ತು ವರ್ಷಗಳಲ್ಲಿ ಏನು ಮಾಡಿದೆ ಎಂದು ಕೇಳುವುದು ಅವರಲ್ಲಿದ್ದ ಅಜ್ಞಾನದ ಪರಮಾವಧಿ.
-ಅಮೃತ್‌ ಶೆಣೈ,
ಕೆಪಿಸಿಸಿ ಮಾಧ್ಯಮ ವಿಭಾಗದ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.