Jiah Khan case: ನಟ ಸೂರಜ್ ಪಾಂಚೋಲಿ ಖುಲಾಸೆ: ಮುಂಬೈ ಸಿಬಿಐ ಕೋರ್ಟ್ ಆದೇಶ
Team Udayavani, Apr 28, 2023, 2:46 PM IST
ಮುಂಬಯಿ: ಸುಮಾರು 10 ವರ್ಷಗಳ ಹಿಂದೆ ನಡೆದ ನಟಿ ಜಿಯಾ ಖಾನ್ ಆತ್ಮಹತ್ಯೆ ಪ್ರಕರಣದಲ್ಲಿ ನಟ ಸೂರಜ್ ಪಾಂಚೋಲಿ (32) ಅವರನ್ನು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ.
ನಟಿ ಜಿಯಾ ಖಾನ್ ಅವರು 2013ರ ಜೂನ್ 3ರಂದು ಮುಂಬೈನ ಜುಹುನಲ್ಲಿರುವ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು. ಜಿಯಾ ಬರೆದಿದ್ದಾಳೆ ಎನ್ನಲಾದ ಆರು ಪುಟಗಳ ಡೆತ್ನೋಟ್ ಆಧಾರದ ಮೇಲೆ ಸೂರಜ್ ಪಾಂಚೋಲಿಯನ್ನು ಬಂಧಿಸಿದ್ದರು. ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆಗಾಗಿ ಪ್ರಕರಣ ದಾಖಲಿಸಿದರು.
ಸಿಬಿಐನ ವಿಶೇಷ ತನಿಖಾ ದಳಕ್ಕೆ ಪ್ರಕರಣವನ್ನು ವರ್ಗಾಯಿಸಬೇಕು ಜಿಯಾ ಖಾನ್ ಅವರ ತಾಯಿ ರಬಿಯಾ ಮಾಡಿದ ಮನವಿಯನ್ನು ಮುಂಬೈ ಹೈಕೋರ್ಟ್ ತಿರಸ್ಕರಿಸಿತು.
ಜಿಯಾ ಖಾನ್ ಅವರ ತಾಯಿ ರಬಿಯಾ ಅವರ ನಿರಂತರ ಮನವಿ ಹಾಗೂ ಪ್ರಕರಣ ಸಂಬಂಧ ಮುಂಬೈ ಹೈಕೋರ್ಟ್ 2014ರ ಜು. 3ರಂದು ನೀಡಿದ್ದ ನಿರ್ದೇಶನದಂತೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ಎ. 20ರಂದು ಅಂತಿಮ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.
ಇದೀಗ ಮುಂಬೈನ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಎಸ್ ಸಯ್ಯದ್, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಸೂರಜ್ ಪಾಂಚೋಲಿ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.