karnataka election 2023: ಚುನಾವಣೆ ಪ್ರತಿಷ್ಠೆಯಾಗಿ ಪರಿಗಣಿಸಿ: ಎಚ್.ಡಿ.ಕುಮಾರಸ್ವಾಮಿ
ಜೆಡಿಎಸ್ ಅಭ್ಯರ್ಥಿಗಳ ಜತೆ ಸಮಾಲೋಚನೆ
Team Udayavani, Apr 29, 2023, 6:30 AM IST
ಬೆಂಗಳೂರು: ವಿಧಾನಸಭೆ ಚುನಾವಣೆ ಈ ಬಾರಿ ಜೆಡಿಎಸ್ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು ಅಭ್ಯರ್ಥಿಗಳು ಮೈ ಮರೆಯಬಾರದು. ಧೈರ್ಯದಿಂದ ಹೋರಾಟ ನಡೆಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭ್ಯರ್ಥಿಗಳಿಗೆ ಸೂಚಿಸಿದ್ದಾರೆ.
ಪಕ್ಷದ ಅಭ್ಯರ್ಥಿಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಎಷ್ಟೇ ಪ್ರಬಲರಿದ್ದರೂ ನಮ್ಮ ಪಕ್ಷದ ಕಾರ್ಯಕ್ರಮ ಹಾಗೂ ನಾಯಕತ್ವದಿಂದ ನಮಗೆ ಯಶಸ್ಸು ಸಿಗಲಿದೆ. ಎರಡೂ ಪಕ್ಷಗಳ ಅಬ್ಬರದಿಂದ ಯಾರೂ ಧೃತಿಗೆಡುವುದು ಬೇಡ. ನಿಮ್ಮ ಜತೆ ನಾನಿದ್ದೇನೆಂದು ಧೈರ್ಯ ತುಂಬಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿ ಇರುವ ಕೆಲವೆಡೆ ಕಾಂಗ್ರೆಸ್ ಮತ್ತು ಬಿಜೆಪಿಯವರು ಆಮಿಷವೊಡ್ಡಿ ನಿವೃತ್ತಿಯಾಗುವಂತೆ ಒತ್ತಡ ಹೇರುತ್ತಿರುವುದು, ಪ್ರಚಾರ ಮಾಡದೆ ತಟಸ್ಥರಾಗಿ ಎಂದು ಒತ್ತಡ ಹೇರುತ್ತಿರುವುದು ಸೇರಿ ಪ್ರಚಾರಕ್ಕೆ ಅಡ್ಡಿಪಡಿಸುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಜತೆ ಖುದ್ದಾಗಿ ಕುಮಾರಸ್ವಾಮಿ ಮಾತನಾಡಿದ್ದಾರೆಂದು ತಿಳಿದು ಬಂದಿದೆ.
ಜಲಧಾರೆ ಹಾಗೂ ಪಂಚರತ್ನ ಯಾತ್ರೆ ವೇಳೆ 224 ಕ್ಷೇತ್ರಗಳಲ್ಲಿ ಸಂಚಾರ ಮಾಡಿದ್ದೇನೆ. ಎಲ್ಲ ಕ್ಷೇತ್ರಕ್ಕೂ ಮತ್ತೆ ಪ್ರಚಾರಕ್ಕೆ ಬರಲು ಆಗುವುದಿಲ್ಲ. ದೇವೇಗೌಡರು ಆರೋಗ್ಯ ದೃಷ್ಟಿಯಿಂದ ಸೀಮಿತ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಅಭ್ಯರ್ಥಿಗಳು ಪಕ್ಷದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಲುಪಿಸಿ ಪ್ರಚಾರ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ.
ಕೆಸಿಆರ್-ಮಮತಾ ಆಗಮನ
ಜೆಡಿಎಸ್ ಪರ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ ರಾವ್ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಚಾರಕ್ಕೆ ಬರಲಿದ್ದು ಒಟ್ಟು ಐದು ಕಡೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಚಂದ್ರಶೇಖರರಾವ್ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ, ಮಮತಾ ಬ್ಯಾನರ್ಜಿ ಅವರು ಹಳೇ ಮೈಸೂರು ಭಾಗದಲ್ಲಿ ಪ್ರಚಾರಕ್ಕೆ ಬರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.