![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 29, 2023, 10:42 PM IST
ಕಲಬುರಗಿ: ತಾನು ಪ್ರೀತಿ ಮಾಡಿದ್ದ ವಿದೇಶಿ ಹುಡುಗಿಯೊಂದಿಗೆ ಸಣ್ಣದಾಗಿ ಮನಸ್ತಾಪ ಮಾಡಿಕೊಂಡು ಜಗಳವಾಡಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ನಗರದ ಕುಸನೂರು ರಸ್ತೆಯ ಜ್ಯೋತಿ ಬಾಪುಲೆ ನಗರ, ಬಾಪುರೇ ಲೇಔಟ್ ನಿವಾಸಿ ಶಶಾಂಕ ಕಟ್ಟಿಮನಿ (22) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಗುಲ್ಬರ್ಗ ವಿವಿಯ ಆವರಣದ ಕುಲಪತಿಗಳ ಮನೆ ಹಿಂದುಗಡೆಯ ಹಾಳು ಬಿದ್ದ ಕೋಣೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗೊತ್ತಾಗಿದೆ.
ಬೆಳಗ್ಗೆ ಕುರಿಗಾಯಿ ಬಾಲಕ ಶವವನ್ನು ನೋಡಿ ವಿವಿ ಸಿಬ್ಬಂದಿಗೆ ತಿಳಿಸಿದ್ದ ಅವರು, ಕೂಡಲೇ ವಿವಿ ಆವರಣದಲ್ಲಯೇ ಇರುವ ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದರು. ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದಾಗ ವಿಷಯ ಬಹಿರಂಗವಾಗಿದೆ ಎಂದು ಮೂಲಗಳು ತಿಳಿಸಿವೆ.
ವಿವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದೇಶಿ ಹುಡುಗಿಯ ಪ್ರೇಮ
ಆತ್ಮಹತ್ಯೆಗೆ ಶರಣಾದ ಶಶಾಂಕ ಕಟ್ಟಿಮನಿ ಫಿಲಿಫೈನ್ಸ್ ದೇಶದ ಯುವತಿಯೊಂದಿಗೆ ಸಲುಗೆಯಿಂದ ಇದ್ದ. ಅದನ್ನು ಪ್ರೇಮವೆಂದೂ ತಿಳಿದಿದ್ದ. ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬರಲು ಯುವತಿ ಮನೆಯವರಿಗೆ ನೀಡಿದ ಮಾಹಿತಿಯೇ ಕಾರಣ ಎನ್ನಲಾಗುತ್ತಿದೆ. ಈ ಅಂಶವನ್ನು ಪೊಲೀಸರು ದೂರಿನಲ್ಲೂ ದಾಖಲಿಸಿದ್ದಾರೆ.
ಬೆಳಗ್ಗೆಯಿಂದ ಮಗ ಕಾಣುತ್ತಿರಲಿಲ್ಲ, ಯುವತಿಯೂ ಶಶಾಂಕ ಅವರ ಸಹೋದರಿಗೆ ಕರೆ ಮಾಡಿ ನಿಮ್ಮ ತಮ್ಮ ಎಲ್ಲಿದ್ದಾನೆ ಎಂದು ಕೇಳಿದ್ದಾಳೆ. ನಂತರ ಪಾಲಕರು ಆತನ ಹುಡುಕಾಟದಲ್ಲಿ ತೊಡಗಿದ್ದಾಗ ವಿವಿ ಆವರಣದಲ್ಲಿ ಶವ ಪತ್ತೆಯಾಗಿದೆ.ಈ ಎಲ್ಲ ಬೆಳವಣಿಗೆಯಿಂದ ಇದೊಂದು ಪ್ರೇಮ ಪ್ರಕರಣ ಎಂದು ಪೊಲೀಸರು ಅಂದಾಜಿಸಿದ್ದಾರೆ. ಈ ಕುರಿತು ವಿವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.