ಮೋದಿ ದೇಶ ಕಾಯುವ ನೀಲಕಂಠ: ಮುರುಗೇಶ ನಿರಾಣಿ

ಭಾರತದ ಅಸ್ಮಿತೆಯ ಸಂಕೇತ ನರೇಂದ್ರ ಮೋದಿ ; ಬಾದಾಮಿ ಭೂಮಿ ಪೂರ್ಣ ಹಸಿರಾಗಿಸುವ ಸಂಕಲ್ಪ

Team Udayavani, Apr 30, 2023, 9:08 AM IST

ಮೋದಿ ದೇಶ ಕಾಯುವ ನೀಲಕಂಠ: ಮುರುಗೇಶ ನಿರಾಣಿ

ಬಾಗಲಕೋಟೆ: ವಿಶ್ವ ನಾಯಕ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್‌, ತನ್ನ ಕೀಳು ಸಂಸ್ಕೃತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಅಂದು ಪರಶಿವ ಲೋಕದ ಹಿತ ಕಾಯಲು ವಿಷ ಕುಡಿದು ವಿಷಕಂಠನಾದರೆ, ಇಂದು ನರೇಂದ್ರ ಮೋದಿಜಿ ಈ ದೇಶವನ್ನು ಭಯೋತ್ಪಾದನೆಯ ಅಪತ್ತಿನಿಂದ ಪಾರು ಮಾಡಿದ ನೀಲಕಂಠ ಎಂದು ಕೈಗಾರಿಕೆ ಸಚಿವರೂ ಆಗಿರುವ ಬೀಳಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುರುಗೇಶ ನಿರಾಣಿ ಹೇಳಿದರು.

ಬೀಳಗಿ ಕ್ಷೇತ್ರದ ಹಲಕುರ್ಕಿ, ಹಣಮನೇರಿ,ಚಿಚಂಚಲಕಟ್ಟಿ ಗ್ರಾಮಗಳಲ್ಲಿ ನಡೆದ ರೊಡ್‌ ಶೋ ನಂತರ ಪ್ರಚಾರ ಸಭೆಯಲ್ಲಿ ನರೇಂದ್ರ ಮೋದಿ ವಿಷಸರ್ಪ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಖಂಡಿಸಿ ಅವರು ಮಾತನಾಡಿದರು.

ಖರ್ಗೆ ಹಿರಿಯ ರಾಜಕಾರಣಿ, ಅವರ ವಯಸ್ಸಿಗೆ ಹಿರಿತನಕ್ಕೆ ತಕ್ಕದಾಗಿ ಮಾತನಾಡಬೇಕು. ನರೇಂದ್ರ ಮೋದಿ
ಬಗ್ಗೆ ಮಾತನಾಡಿದರೆ ಕೇವಲ ಬಿಜೆಪಿ ಕಾರ್ಯಕರ್ತರು ಮಾತ್ರವಲ್ಲ, ಇಡೀ ದೇಶವೇ ಸಹಿಸಲ್ಲ. 10 ವರ್ಷಗಳ ಹಿಂದೆ ದೇಶದಲ್ಲಿ ಕಾಂಗ್ರೆಸ್‌ ಮಾಡಿದ ದುರಾಡಳಿತದಿಂದ ಎಂತಹ ಪರಿಸ್ಥಿತಿ ಇತ್ತು. ಗಡಿಯಲ್ಲಿ ಸೈನಿಕರು, ದೇಶದಲ್ಲಿ
ನಾಗರಿಕರು ಇಬ್ಬರೂ ಸುರಕ್ಷಿತರಾಗಿರಲಿಲ್ಲ. ಭಯೋತ್ಪಾದಕರ ಅಟ್ಟಹಾಸ ಮಿತಿ ಮೀರಿತ್ತು. ಆಗ ನರೇಂದ್ರ ಮೋದಿ ಆಗಮನ ಭಾರತಕ್ಕೆ ಹೊಸ ಭರವಸೆ ಮೂಡಿಸಿತು. ದೇಶದ ವಿಷಜಂತುಗಳಾಗಿದ್ದ ಭಯೋತ್ಪಾದಕರು,
ಮೂಲಭೂತವಾದಿಗಳನ್ನು ಮೆಟ್ಟಿ ನಿಂತು ಸುಭದ್ರ ರಾಷ್ಟ್ರ ಕಟ್ಟಿದ ಮೋದಿಜಿ ಭಾರತದ ಅಸ್ಮಿತೆಯ ಸಂಕೇತ ಎಂದರು.

ಬಾದಾಮಿ ತಾಲೂಕಿನ ಹಳ್ಳಿಗಳಿಗೆ ನೀರು ಒದಗಿಸಲು ನೀಡಲು 2008-13ರ ಅವಧಿಯಲ್ಲಿ ಹೆರಕಲ್‌ ಬ್ಯಾರೇಜ್‌ ನಿರ್ಮಿಸಲಾಗಿದೆ. ಇಂದು ಅದೇ ಬ್ಯಾರೇಜ್‌ ಮೂಲಕ 9 ಏತ ನೀರಾವರಿ ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ. ಮುಂದಿನ 18 ತಿಂಗಳಲ್ಲಿ ಬೀಳಗಿ ಮತಕ್ಷೇತ್ರ ವ್ಯಾಪ್ತಿಯ ಬಾದಾಮಿ ತಾಲೂಕಿನ ಎಲ್ಲ ಗ್ರಾಮಗಳು ಸಂಪೂರ್ಣ ನೀರಾವರಿಗೆ ಒಳಪಡುವ ಮೂಲಕ ರೈತರ ಭೂಮಿ ಹಸಿರಾಗಲಿದೆ ಎಂದು ಹೇಳಿದರು.

ಮುಖಂಡರಾದ ಹೂವಪ್ಪ ರಾಠೊಡ, ಪ್ರಕಾಶ ನಾಯ್ಕರ, ಸಂಗಯ್ಯ ಸರಗಣಾಚಾರಿ, ವೆಂಕನಗೌಡ ಗೌಡರ, ಹಣಮಂತಗೌಡ ಗೌಡರ್‌, ಮಾಗುಂಡೆಪ್ಪ ಕಟಗೇರಿ, ಡಾ|ರವಿ ಅಡಗಲ್‌, ಪರಪ್ಪ ಹೂಲಗೇರಿ, ಅಯ್ಯಪ್ಪ
ತಾಳಿ, ಪರಪ್ಪ ಬಂಡಿ, ಪಾರಪ್ಪ ಹೂಲಗೇರಿ, ಶಾಂತಪ್ಪ ಹೂಲಗೇರಿ, ಕೆಲೂಡೆಪ್ಪ ಹೂಲಗೇರಿ ಮುಂತಾದವರು ಪಾಲ್ಗೊಂಡಿದ್ದರು.

ಬಿಜೆಪಿ ಅಧಿಕಾರದಿಂದ ಭಾರತ ಸುಭದ್ರ: ದೇಶದ ಭದ್ರತೆ, ಸಮೃದ್ಧತೆ ಕೇವಲ ಬಿಜೆಪಿಯಿಂದ ಮಾತ್ರ ಸಾಧ್ಯ. 65 ವರ್ಷ ಆಳಿದ ಕಾಂಗ್ರೆಸ್‌ ಭಾರತದಲ್ಲಿ ಸಮಸ್ಯೆಗಳನ್ನು ಜಿವಂತವಾಗಿಟ್ಟು ರಾಜಕಾರಣ ಮಾಡಿದೆ.
ಬಿಜೆಪಿ ಸಮಸ್ಯೆಗಳಿಗೆ ಪರಿಹಾರ ನೀಡಿ ಜನರ ಪರವಾಗಿ ನಿಂತಿದೆ ಎಂದು ವಿಧಾನಪರಿಷತ್‌
ಸದಸ್ಯ ಪಿ. ಎಚ್‌. ಪೂಜಾರ ಹೇಳಿದರು.

ತುಳಸಿಗೇರಿ, ಕಲಾದಗಿ, ಗೋವಿನಕೊಪ್ಪ ಗ್ರಾಮಗಳಲ್ಲಿ ಬೀಳಗಿ ಬಿಜೆಪಿ ಅಭ್ಯರ್ಥಿ ಮುರುಗೇಶ ನಿರಾಣಿಯವರ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.

ದೇಶ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರ ಇರುವುದರಿಂದ ಅಭಿವೃದ್ಧಿಗೆ ವೇಗ ದೊರೆಯುತ್ತದೆ. ಮುರುಗೇಶ ನಿರಾಣಿ
ಕಳೆದ ಮೂರು ಅವಧಿಯಲ್ಲಿ ಮಾಡಿದ ಕಾರ್ಯಗಳು ಬೀಳಗಿ ಮತಕ್ಷೇತ್ರವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯುತ್ತಿವೆ.

ಜನರ ನಾಡಿಮಿಡಿತ ಅರಿತು ಕೆಲಸ ಮಾಡುವ ಶಕ್ತಿ ಮುರುಗೇಶ ನಿರಾಣಿಯವರಿಗಿದೆ. ರಾಜ್ಯದಲ್ಲಿ ಡಬಲ್‌ ಇಂಜಿನ್‌ ಸರ್ಕಾರ ಮತ್ತೊಮ್ಮೆ ಸ್ಥಾಪನೆಯಾಗಬೇಕು. ಬೀಳಗಿಯಲ್ಲಿ ಅಭಿವೃದ್ಧಿ ಕೆಲಸಗಳು ಮುಂದುವರೆದು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಬೇಕಾದರೆ ಅದು ಮುರುಗೇಶ ನಿರಾಣಿಯವರಿಂದ ಮಾತ್ರ ಸಾಧ್ಯ. ಹೀಗಾಗಿ ಅವರಿಗೆ ಮತ್ತೊಮ್ಮೆ ಆಶೀರ್ವದಿಸಿ ಎಂದು ಹೇಳಿದರು.

ತುಳಸಿಗೇರಿ, ಕಲಾದಗಿ, ಗೋವಿನಕೊಪ್ಪ ಗ್ರಾಮದ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.ಖರ್ಗೆ ಹಿರಿಯ ರಾಜಕಾರಣಿ,ವಯಸ್ಸಿಗೆ ತಕ್ಕಂತೆ ಮಾತನಾಡಬೇಕು. ನರೇಂದ್ರ ಮೋದಿ ಬಗ್ಗೆ ಮಾತನಾಡಿದರೆ ಕೇವಲ ಬಿಜೆಪಿ ಕಾರ್ಯಕರ್ತರು ಮಾತ್ರವಲ್ಲ, ಇಡೀ ದೇಶವೇ ಸಹಿಸಲ್ಲ. ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದ ದೇಶದಲ್ಲಿ ಎಂತಹ ಪರಿಸ್ಥಿತಿ ಇತ್ತು. ಗಡಿಯಲ್ಲಿ ಸೈನಿಕರು, ದೇಶದಲ್ಲಿ ನಾಗರಿಕರು ಸುರಕ್ಷಿತರಾಗಿರಲಿಲ್ಲ. ಭಯೋತ್ಪಾದಕರ ಅಟ್ಟಹಾಸ ಮಿತಿ ಮೀರಿತ್ತು. ಆಗ ನರೇಂದ್ರ ಮೋದಿ ಆಗಮನ ಭಾರತಕ್ಕೆ ಹೊಸ ಭರವಸೆ ಮೂಡಿಸಿತು. ದೇಶದ ವಿಷಜಂತುಗಳಾಗಿದ್ದ ಭಯೋತ್ಪಾದಕರು, ಮೂಲಭೂತವಾದಿಗಳನ್ನು ಮೆಟ್ಟಿ ನಿಂತು ಸುಭದ್ರ ರಾಷ್ಟ್ರ ಕಟ್ಟಿದ ಹೆಮ್ಮೆ ಮೋದಿ ಅವರಿಗಿದೆ.
-ಮುರುಗೇಶ ನಿರಾಣಿ
ಬೀಳಗಿ ಬಿಜೆಪಿ ಅಭ್ಯರ್ಥಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.