Karnataka Polls: ಗದಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ-ಮುಖಂಡರ ಜತೆ ಚರ್ಚೆ


Team Udayavani, Apr 30, 2023, 10:55 AM IST

Karnataka Polls: ಗದಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ-ಮುಖಂಡರ ಜತೆ ಚರ್ಚೆ

ಗದಗ: ಸಿಎಂ ಬಸವರಾಜ ಬಿಮ್ಮಾಯಿ ಅವರು ಗದುಗಿಗೆ ಭೇಟಿ ನೀಡಿ ಗದಗ ಕ್ಷೇತ್ರದ ಅಭ್ಯರ್ಥಿ ಅನೀಲ ಮೆಣಸಿನಕಾಯಿ ಸೇರಿ ಸ್ಥಳೀಯ ಮುಖಂಡರ ಜತೆ ಚುನಾವಣೆ ತಯಾರಿ ಬಗ್ಗೆ ಚರ್ಚಿಸಿದ್ದಾರೆ.

ಶನಿವಾರ ವಿಜಯನಗರ ಜಿಲ್ಲೆಯಲ್ಲಿ ಪ್ರಚಾರ ಮುಗಿಸಿಕೊಂಡು, ಮಾರ್ಗ ಮಧ್ಯೆ ಶಿರಹಟ್ಟಿ ಕ್ಷೇತ್ರ ವ್ಯಾಪ್ತಿಯ ಮುಂಡರಗಿಯಲ್ಲಿ ಅಲ್ಲಿನ ಬಿಜೆಪಿ ಮುಖಂಡರ ಜತೆ ಚರ್ಚೆ ನಡೆಸಿ, ಅಲ್ಲಿಂದ ತಡರಾತ್ರಿ ಗದಗಗೆ ಆಗಮಿಸಿ ಸ್ಥಳೀಯ ಮುಖಂಡರ ಜತೆ ಚರ್ಚಿಸಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಧಾನಿಗಳ ಕಾರ್ಯಕ್ರಮ ಮುಗಿಸಿ ಬೀದರ್ ನಿಂದ ಬಳ್ಳಾರಿ ಜಿಲ್ಲೆಯಲ್ಲಿದ್ದೆ‌‌. ವಿಜಯನಗರ ಜಿಲ್ಲೆಯಲ್ಲಿ ಪ್ರಚಾರ ಮುಗಿಸಿ ಹುಬ್ಬಳ್ಳಿಗೆ ಹೊರಟಿದ್ದೆ. ಮಾರ್ಗ ಮಧ್ಯೆ ಮುಂಡರಗಿ, ಗದಗ ಸ್ನೇಹಿತರನ್ನು ಭೇಟಿಯಾಗಲು ಬಂದಿದ್ದೇನೆ. ಈ ಭೇಟಿಗೆ ವಿಶೇಷ ಅರ್ಥ ಏನಿಲ್ಲ.

ಶಿರಹಟ್ಟಿ, ಗದಗ ಕ್ಷೇತ್ರದ ಏನೆಲ್ಲ ನಡೆದಿದೆ ಎಂದು ತಿಳಿದುಕೊಂಡು, ಸಲಹೆ ಸೂಚನೆ ಕೊಡಲು ಬಂದಿದ್ದೇನೆ. ರಾಜ್ಯದ ಮುಖ್ಯಮಂತ್ರಿಯಾಗಿ 224 ಕ್ಷೇತ್ರ ಕಾಳಜಿ ಮಾಡುತ್ತೇನೆ. ಅದರಂತೆ ಗದಗನ್ನೂ ಕಾಳಜಿ ಮಾಡುತ್ತೇನೆ ಎಂದರು.

ಭ್ರಷ್ಟಾಚಾರ ಆರೋಪ ಮಾಡುವ ಕಾಂಗ್ರೆಸ್, ಒಂದು ಕೇಸ್ ತೋರಿಸಲಿ ಎಂದು ಸವಾಲು ಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕಾಂಗ್ರೆಸ್ ತನ್ನ ಮೇಲಿನ 60 ಕೇಸ್ ಗಳನ್ನು ಎಸಿಬಿಯಲ್ಲಿ ಮುಚ್ಚಿಹಾಕಿದ್ದರು. ಇದರಲ್ಲಿ ಸಿದ್ದರಾಮಯ್ಯನವರದೂ ಇದೆ. ತನಿಖೆ ಮಾಡದೇ ಬಿ-ರಿಪೋರ್ಟ್ ಕೊಟ್ಟು ಮುಚ್ಚಿಹಾಕಿದ್ದರು. ಆ ಎಲ್ಲ ಕೇಸ್ ಗಳನ್ನು ಲೋಕಾಯುಕ್ತಕ್ಕೆ ಕೊಟ್ಟಿದ್ದೇನೆ.

ಎಸಿಬಿ ಮಾಡಿದ್ದೇ ಕೇಸ್ ಮುಚ್ಚಿಹಾಕುಲು ಅಂತಾ ಸ್ವತಃ ಹೈಕೋರ್ಟ್ ಹೇಳಿದೆ ಎಂದ ಅವರು, ಲೋಕಾಯುಕ್ತವನ್ನು ದುರ್ಬಲಗೊಳಿಸಿದ ಕುಖ್ಯಾತಿ, ವಿಲನ್ ಸಿದ್ದರಾಮಯ್ಯನವರಿಗೆ ಮತ್ತು ಅಂದಿನ ಅವರ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಟಾಂಗ್ ನೀಡಿದರು.

ಕಾಂಗ್ರೆಸ್ ಐದು ಬಿಟ್ಟು 50 ಗ್ಯಾರಂಟಿ ಘೋಷಣೆ ಮಾಡಲಿ. ಕಾಂಗ್ರೆಸ್ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಮೇ 10 ರವರೆಗೆ ಮಾತ್ರ ಗ್ಯಾರಂಟಿ.

ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಮೇಲೆ ಕಲ್ಲು ಎಸೆದ ಪ್ರಕರಣದ ಬಗ್ಗೆ ತನಿಖೆಯಾಗಲಿ. ಚುನಾವಣೆ ಆಯೋಗವೂ ಗಮನಿಸುತ್ತದೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಯಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಈ ಸಂದರ್ಭದಲ್ಲಿ ಗದಗ ವಿಧಾನ ಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಲ ಮೆಣಸಿನಕಾಯಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.