ಕಾಲೇಜು ಫೆಸ್ಟ್‌ನಲ್ಲಿ ಬಿಇ ವಿದ್ಯಾರ್ಥಿ ಹತ್ಯೆ


Team Udayavani, Apr 30, 2023, 12:28 PM IST

tdy-9

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಎರಡು ವಿದ್ಯಾರ್ಥಿಗಳ ಗುಂಪಿನ ನಡುವೆ ನಡೆದ ಜಗಳದಲ್ಲಿ ಒಬ್ಬ ಮೆಕಾನಿಕಲ್‌ ಎಂಜಿನಿಯರ್‌ ವಿದ್ಯಾರ್ಥಿ ಹತ್ಯೆಯಾಗಿರುವ ಘಟನೆ ಬಾಗಲೂರು ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಭಾಸ್ಕರ್‌ ಜೆಟ್ಟಿ (22) ಕೊಲೆಯಾದ ಯುವಕ.

ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಭಾಸ್ಕರ್‌ ಜೆಟ್ಟಿ ಗುಜರಾತ್‌ ಮೂಲದವರಾಗಿದ್ದು, ಮತ್ತಿಕೆರೆಯಲ್ಲಿ ವಾಸವಾಗಿದ್ದ. ಠಾಣೆ ವ್ಯಾಪ್ತಿಯಲ್ಲಿರುವ ಪ್ರತಿಷ್ಠಿತ ಕಾಲೇಜಿನಲ್ಲಿ 8ನೇ ಸೆಮಿಸ್ಟರ್‌ನ ಮೆಕಾನಿಕಲ್‌ ಎಂಜಿನಿಯರ್‌ ವಿದ್ಯಾರ್ಥಿಯಾಗಿದ್ದ. ಶುಕ್ರವಾರ ಸಂಜೆ ಕಾಲೇಜು ಆವರಣದಲ್ಲಿ ಕಾಲೇಜು ಫೆಸ್ಟ್‌ ನಡೆಯುತ್ತಿತ್ತು. ಭಾಸ್ಕರ್‌ ಜೆಟ್ಟಿ ಸ್ನೇಹಿತ ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದ. ಆಗ ಮತ್ತೂಂದು ಗುಂಪಿನ ಯುವಕ ಮಧ್ಯ ಪ್ರವೇಶಿಸಿದ್ದಾನೆ. ಅಲ್ಲದೆ, ಭಾಸ್ಕರ್‌ ಜೆಟ್ಟಿ ಸ್ನೇಹಿತ ಹಿಡಿದುಕೊಂಡಿದ್ದ ಧ್ವನಿವರ್ಧಕ(ಮೈಕ್‌) ಕಸಿದುಕೊಂಡಿದ್ದಾನೆ. ಈ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆಯುತ್ತಿತ್ತು. ಆಗ ಮಧ್ಯಪ್ರವೇಶಿಸಿದ ಭಾಸ್ಕರ್‌ ಜೆಟ್ಟಿ ಎದುರಾಳಿ ಗುಂಪಿನ ಯುವಕರ ಜತೆ ಹೊಡೆದಾಡಿಕೊಂಡಿದ್ದ. ಅದು ವಿಕೋಪಕ್ಕೆ ಹೋದಾಗ ಆರೋಪಿಗಳು ಚಾಕುವಿನಿಂದ ಭಾಸ್ಕರ್‌ ಜೆಟ್ಟಿ ಕೈ ಮತ್ತು ಎದೆ ಭಾಗಕ್ಕೆ ಇರಿದಿದ್ದಾರೆ.

ತೀವ್ರರಕ್ತಸ್ರಾವದಿಂದ ಕೆಳಗೆ ಬಿದ್ದ ಭಾಸ್ಕರ್‌ ಜೆಟ್ಟಿಯನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾನೆ. ಕೃತ್ಯ ಎಸಗಿದ ಆರೋಪಿಗಳು ಪರಾರಿಯಾಗಿದ್ದಾರೆ.

ಕಾಲೇಜಿನಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ಗಲಾಟೆ ದೃಶ್ಯ ಸೆರೆಯಾಗಿದ್ದು, ಆರೋಪಿಗಳ ಸುಳಿವು ಸಿಕ್ಕಿದೆ. ಸದ್ಯದಲ್ಲೇ ಬಂಧಿಸಲಾಗುತ್ತದೆ ಎಂದು ಪೊಲೀಸರು ಹೇಳಿದರು. ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

9–bng

Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

04

Kasaragod: ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

0023

Kasargod: ಅಪಹರಿಸಿ ಹಲ್ಲೆ ಪ್ರಕರಣ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.