ಈಗಲಾದರೂ ‘‘ಜನ್ ಕಿ ಬಾತ್” ಕೇಳುತ್ತಿರಾ? : ಪ್ರಧಾನಿಗೆ ಸಿದ್ದರಾಮಯ್ಯ ಪ್ರಶ್ನೆ
ಗುತ್ತಿಗೆದಾರರ ಸಂಘದ ಅಧ್ಯಕ್ಷರ ಪತ್ರಕ್ಕೆ ಉತ್ತರಿಸುವ ಧೈರ್ಯ ತೋರಿಲ್ಲ ಯಾಕೆ?
Team Udayavani, Apr 30, 2023, 4:39 PM IST
ಬೆಂಗಳೂರು : ಮನ್ ಕಿ ಬಾತ್ ಕಾರ್ಯಕ್ರಮ ನೂರು ಸಂಚಿಕೆಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಇನ್ನಾದರೂ ಜನಸಾಮಾನ್ಯರ ಮನದ ಮಾತುಗಳಿಗೆ ಉತ್ತರಿಸುತ್ತೀರಾ ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿ ಹಲವು ಪ್ರಶ್ನೆಗಳ ಮಳೆಯನ್ನು ಸುರಿಸಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 57 ಇತ್ತು, ಈಗ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 54.77 ಡಾಲರ್ ಇರುವಾಗ ಪೆಟ್ರೋಲ್ ಬೆಲೆ ರೂ. 102 ರೂಪಾಯಿ ಆಗಿರುವುದು ಯಾಕೆ? ನಾ ಖಾವುಂಗಾ, ನಾ ಖಾನೆದೂಂಗಾ’ ಎಂದು ನೀವು ಹೇಳಿದರೂ, ನಿಮ್ಮ ಪಕ್ಷದ ಸಚಿವರೇ ಕಮಿಷನ್ ಹಣ ತಿಂದು ಜೈಲಿಗೆ ಹೋಗುತ್ತಿರುವುದೇಕೆ? ರಾಜ್ಯದ ಸಚಿವರು ಸರ್ಕಾರಿ ಗುತ್ತಿಗೆಗಳಲ್ಲಿ 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ನಿಮಗೆ ಪತ್ರ ಬರೆದಿದ್ದರೂ ಅದಕ್ಕೆ ಉತ್ತರಿಸುವ ಧೈರ್ಯ ತೋರಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕುಗಳು ಸೇರಿದಂತೆ ಒಂದು ಲಕ್ಷದ ವರೆಗಿನ ರೈತರ ಸಾಲವನ್ನು ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿಯೇ ಮನ್ನಾ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದರೂ ಮನ್ನಾ ಮಾಡದೆ ಇರುವುದು ಯಾಕೆ?ರೈತರ ಸಾಲ ಮನ್ನಾ ಮಾಡಲು ನಿರಾಕರಿಸುತ್ತಿರುವ ನಿಮ್ಮ ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿರುವುದೇಕೆ? ಎಂದು ಪ್ರಶ್ನೆಗಳ ಸರಣಿ ಮುಂದಿಟ್ಟಿದ್ದಾರೆ.
ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ತೆರಿಗೆ ಮತ್ತು ಸುಂಕಗಳ ರೂಪದಲ್ಲಿ 4 ಲಕ್ಷದ 75 ಸಾವಿರ ಕೋಟಿ ರೂಪಾಯಿ ನೀಡಿದರೂ, ಕೇಂದ್ರ ಸರ್ಕಾರವು ತೆರಿಗೆ ಹಂಚಿಕೆ ರೂಪದಲ್ಲಿ ರೂ.50,257 ಕೋಟಿ ಮಾತ್ರ ಕರ್ನಾಟಕ ರಾಜ್ಯಕ್ಕೆ ನೀಡುತ್ತಿರುವುದು ಯಾಕೆ? ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಗಬೇಕಾಗಿರುವ ತೆರಿಗೆ ಹಂಚಿಕೆಯ ಪಾಲು ಶೇಕಡಾ 4.72ರಿಂದ ಶೇಕಡಾ 3.64ಕ್ಕೆ ಇಳಿದದ್ದು ಯಾಕೆ? ಕೇಂದ್ರ ಹಣಕಾಸು ಆಯೋಗ ಕರ್ನಾಟಕಕ್ಕೆ ಪರಿಹಾರ ರೂಪದಲ್ಲಿ ರೂ.5,495 ಕೋಟಿ ವಿಶೇಷ ಅನುದಾನ ನೀಡಬೇಕೆಂದು ಶಿಫಾರಸು ಮಾಡಿದ್ದರೂ ಕೇಂದ್ರ ಹಣಕಾಸು ಸಚಿವರು ನಿರಾಕರಿಸಿದ್ದು ಯಾಕೆ? 2013ರಲ್ಲಿ ಕೇಂದ್ರ ಅನುದಾನಿತ ಯೋಜನೆಗಳಲ್ಲಿ ಶೇಕಡಾ 25ರಷ್ಟು ಮಾತ್ರ ಇದ್ದ ರಾಜ್ಯದ ಪಾಲು 2021-22ರಲ್ಲಿ ಶೇಕಡಾ 55ಕ್ಕೆ ಹೆಚ್ಚಿದ್ದು ಯಾಕೆ? ಎಂದು ಕೇಳಿದ್ದಾರೆ.
ಮಳೆ ಹಾನಿಗಾಗಿ ರಾಜ್ಯ ಸರ್ಕಾರ ರೂ.35,000 ಕೋಟಿ ಪರಿಹಾರ ಕೇಳಿದ್ದರೂ ಡಬಲ್ ಎಂಜಿನ್ ಸರ್ಕಾರ ಕೇವಲ ರೂ.1,895 ಕೋಟಿ ನೀಡಿದ್ದು ಯಾಕೆ?ರೈತರ ಬೆಳೆಗಳ ಬೆಲೆ ಕುಸಿತ ತಡೆಯಲು ಬೆಂಬಲ ಬೆಲೆಯ ಮೂಲಕ ಮಾರುಕಟ್ಟೆ ಮಧ್ಯಪ್ರವೇಶಕ್ಕೆ ನೀಡಲಾಗುತ್ತಿದ್ದ ಅನುದಾನವನ್ನು ರೂ.1,500 ಕೋಟಿ ಗಳಿಂದ ಒಂದು ಲಕ್ಷ ರೂಪಾಯಿಗಳಿಗೆ ಇಳಿಸಿದ್ದು ಯಾಕೆ? ಪಿಎಸ್ಐ ನೇಮಕದಲ್ಲಿ ಅಂದಾಜು ರೂ.300 ಕೋಟಿಗೂ ಮೀರಿ ಲಂಚದ ಅವ್ಯವಹಾರ ನಡೆದು ಉದ್ಯೋಗದ ಅವಕಾಶ ಕಳೆದುಕೊಂಡಿರುವ ಸುಮಾರು 54 ಸಾವಿರ ಯುವಜನರ ಮನದ ಮಾತಿಗೆ ನೀವು ಪ್ರತಿಕ್ರಿಯಿಸದೆ ಮೌನವಾಗಿರುವುದು ಯಾಕೆ? ಪ್ರಧಾನಿ ಅವರೇ ನೀವು ರೋಡ್ ಶೋ ನಡೆಸಿರುವ ಬೆಂಗಳೂರು ರಸ್ತೆಗಳಲ್ಲಿರುವ 25,000 ಗುಂಡಿಗಳನ್ನು ಮುಚ್ಚಲು ರೂ.7,200 ಕೋಟಿ, ಅಂದರೆ ಒಂದು ಗುಂಡಿಗೆ ತಲಾ ರೂ.9.20 ಲಕ್ಷ ಖರ್ಚು ಮಾಡಿದರೂ ಗುಂಡಿಗಳು ಹಾಗೆಯೇ ಉಳಿದುಕೊಂಡಿರುವುದು ಯಾಕೆ? ಎಂದು ಪ್ರಶ್ನಿಸಿದ್ದಾರೆ.
ಗ್ರಾಮೀಣ ಭಾಗಗಳಲ್ಲಿ ಉದ್ಯೋಗ ಸಂಜೀವಿನಿಯಾಗಿರುವ ಯುಪಿಎ ಸರ್ಕಾರದ ಹೆಮ್ಮೆಯ ಕಾರ್ಯಕ್ರಮವಾಗಿರುವ ನರೇಗಾ ಯೋಜನೆಗೆ ಈ ಸಾಲಿನ ಬಜೆಟ್ ನಲ್ಲಿ ಶೇಕಡಾ 21.66ರಷ್ಟು ಅಂದರೆ ರೂ.60,000 ಕೋಟಿಯಷ್ಟು ಅನುದಾನವನ್ನು ಡಬಲ್ ಎಂಜಿನ್ ಸರ್ಕಾರ ಕಡಿತಗೊಳಿಸಿದ್ದು ಯಾಕೆ? ನಮ್ಮ ಸರ್ಕಾರದ ಐದು ವರ್ಷಗಳ ಆಡಳಿತದಲ್ಲಿ ಮಾಡಿದ್ದ ಒಟ್ಟು ಸಾಲ ರೂ.1,16,512 ಕೋಟಿ, ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಒಟ್ಟು ಸಾಲ ರೂ.3,22,000 ಕೋಟಿ. ಡಬಲ್ ಎಂಜಿನ್ ಸರ್ಕಾರ ಕರ್ನಾಟಕ ರಾಜ್ಯವನ್ನು ಸಾಲಗಾರ ರಾಜ್ಯ ಮಾಡಿದ್ದು ಯಾಕೆ?ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.