GST ದಾಖಲೆ 1.87 ಲಕ್ಷ ಕೋಟಿ ರೂ. ಸಂಗ್ರಹ

ಕಳೆದ ಎಪ್ರಿಲ್‌ಗೆ ಹೋಲಿಸಿದರೆ ಈ ಎಪ್ರಿಲ್‌ನಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ ಶೇ.12 ಏರಿಕೆ

Team Udayavani, May 2, 2023, 8:10 AM IST

GST ದಾಖಲೆ 1.87 ಲಕ್ಷ ಕೋಟಿ ರೂ. ಸಂಗ್ರಹ

ಹೊಸದಿಲ್ಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಯಾದ ಬಳಿಕ ದಾಖಲೆ ಪ್ರಮಾಣದಲ್ಲಿ ಜಿಎಸ್‌ಟಿ ಸಂಗ್ರಹವಾಗಿದೆ. ಕಳೆದ ತಿಂಗಳಲ್ಲೇ 1.87 ಲಕ್ಷ ಕೋಟಿ ರೂ. ಮೊತ್ತದ ತೆರಿಗೆ ಜಮೆಯಾಗಿದೆ. ವಾರ್ಷಿಕವಾಗಿ ಹೇಳುವುದಿದ್ದರೆ ಶೇ.12 ಏರಿಕೆಯಾಗಿದೆ ಎಂದು ಸೋಮವಾರ ಹೊಸದಿಲ್ಲಿಯಲ್ಲಿ ಕೇಂದ್ರ ವಿತ್ತ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. 2022ರ ಎಪ್ರಿಲ್‌ನಲ್ಲಿ 1.68 ಲಕ್ಷ ಕೋಟಿ ರೂ. ಸಂಗ್ರಹವಾದದ್ದು ಇದುವರೆಗಿನ ದಾಖಲೆಯಾಗಿದೆ.

ದಾಖಲೆ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದು, ದೇಶದ ಅರ್ಥ ವ್ಯವಸ್ಥೆಗೆ ಸಂತೋಷ ತರುವ ವಿಚಾರ ಎಂದು ಬಣ್ಣಿಸಿದ್ದಾರೆ. 2022ರ ಮಾರ್ಚ್‌ನಲ್ಲಿ 1,42,095 ಲಕ್ಷ ಕೋಟಿ ರೂ., ಪ್ರಸಕ್ತ ವರ್ಷದ ಮಾರ್ಚ್‌ನಲ್ಲಿ 1,60, 122 ಲಕ್ಷ ಕೋಟಿ ರೂ., 2022ರ ಫೆಬ್ರವರಿಯಲ್ಲಿ 1,33, 025 ಲಕ್ಷ ಕೋಟಿ ರೂ., ಪ್ರಸಕ್ತ ವರ್ಷದ ಫೆಬ್ರವರಿಯಲ್ಲಿ 1,49, 577 ಲಕ್ಷ ಕೋಟಿ ರೂ., 2022ರ ಜನವರಿಯಲ್ಲಿ 1,40, 986 ಲಕ್ಷ ಕೋಟಿ ರೂ., ಪ್ರಸಕ್ತ ವರ್ಷದ ಜನವರಿಯಲ್ಲಿ 1,57, 554 ಲಕ್ಷ ಕೋಟಿ ರೂ. ಸಂಗ್ರಹವಾಗಿತ್ತು. 2017 ಜು.1ರಂದು ಜಿಎಸ್‌ಟಿಯನ್ನು ದೇಶಾದ್ಯಂತ ಜಾರಿ ಮಾಡಲಾಗಿತ್ತು. ಕೈಗಾರಿಕೆ ಮತ್ತು ಉದ್ದಿಮೆ ವಲಯದ ಪ್ರಮುಖರು ಕೂಡ ಜಿಎಸ್‌ಟಿ ಸಾಧನೆಗೆ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಅರ್ಥ ವ್ಯವಸ್ಥೆ ಬಿರುಸಾಗಿ ಬೆಳವಣಿಗೆ ಹೊಂದುತ್ತಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಕೊಂಡಾಡಿದ್ದಾರೆ.

ರಾಜ್ಯದ ಕೊಡುಗೆ ಶೇ.23 ಏರಿಕೆ
ಕಳೆದ ತಿಂಗಳು ಒಟ್ಟು ಜಿಎಸ್‌ಟಿ ಸಂಗ್ರಹಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಕೊಡುಗೆ ಶೇ.23ಕ್ಕೆ ಏರಿಕೆಯಾಗಿದೆ. 2022ರ ಎಪ್ರಿಲ್‌ನಲ್ಲಿ 11,820 ಕೋಟಿ ರೂ. ಸಂಗ್ರಹವಾಗಿದ್ದರೆ, ಕಳೆದ ತಿಂಗಳು 14,593 ಕೋಟಿ ರೂ. ಸಂಗ್ರಹವಾಗಿದೆ. ಈ ಮೂಲಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಮಹಾರಾಷ್ಟ್ರ ಮೊದಲ ಸ್ಥಾನ ಪಡೆದುಕೊಂಡಿದೆ. ಆ ರಾಜ್ಯದಿಂದ 27,495 ಕೋಟಿ ರೂ. ಸಂಗ್ರಹವಾಗಿದೆ.

ದೇಶದ ಅರ್ಥ ವ್ಯವಸ್ಥೆಗೆ ಇದು ಅತ್ಯಂತ ಸಂತಸ ತರುವ ವಿಚಾರ. ಕಡಿಮೆ ಪ್ರಮಾಣದ ತೆರಿಗೆ ವ್ಯವಸ್ಥೆ ಇದ್ದರೂ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ ಎಂದರೆ ಜಿಎಸ್‌ಟಿ ವ್ಯವಸ್ಥೆ ಯಶಸ್ಸು ಪಡೆದಿರುವುದಕ್ಕೆ ಸಾಕ್ಷಿ.
-ನರೇಂದ್ರ ಮೋದಿ, ಪ್ರಧಾನ ಮಂತ್ರಿ

 

ಟಾಪ್ ನ್ಯೂಸ್

Siddaramaih 3

Guarantee Schemes; ಸಂಪನ್ಮೂಲ ಕುಸಿತ:ಗ್ಯಾರಂಟಿಗೆ ಕತ್ತರಿ?

JK-Cab

JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್‌ ಸಂಪುಟ ಸಭೆ ನಿರ್ಣಯ

1–a-rcc

BPL; ದ.ಕ.- 54 ಸಾವಿರ, ಉಡುಪಿ- 39 ಸಾವಿರ ಬಿಪಿಎಲ್‌ ಕಾರ್ಡ್‌ ಪರಿಶೀಲನೆಗೆ ಸೂಚನೆ

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

1-a-antr-bg

Konkani Movie; ‘ಅಂತ್ಯಾರಂಭ’ ಚಿತ್ರೀಕರಣ ಪೂರ್ಣ

ನ. 23ರಂದು ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌, ಗ್ರಾ.ಪಂ. 641 ಸ್ಥಾನಕ್ಕೆ ಚುನಾವಣೆ

ನ. 23ರಂದು ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌, ಗ್ರಾ.ಪಂ. 641 ಸ್ಥಾನಕ್ಕೆ ಚುನಾವಣೆ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Siddaramaih 3

Guarantee Schemes; ಸಂಪನ್ಮೂಲ ಕುಸಿತ:ಗ್ಯಾರಂಟಿಗೆ ಕತ್ತರಿ?

JK-Cab

JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್‌ ಸಂಪುಟ ಸಭೆ ನಿರ್ಣಯ

1–a-rcc

BPL; ದ.ಕ.- 54 ಸಾವಿರ, ಉಡುಪಿ- 39 ಸಾವಿರ ಬಿಪಿಎಲ್‌ ಕಾರ್ಡ್‌ ಪರಿಶೀಲನೆಗೆ ಸೂಚನೆ

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

1-a-antr-bg

Konkani Movie; ‘ಅಂತ್ಯಾರಂಭ’ ಚಿತ್ರೀಕರಣ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.