![Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ](https://www.udayavani.com/wp-content/uploads/2024/07/akshata-415x229.jpg)
ರವಿಶಂಕರ್ ಗುರೂಜಿ ಆಶ್ರಮದ ಬೈಕ್ಗಳಿಗೆ ಬೆಂಕಿ
Team Udayavani, May 2, 2023, 3:12 PM IST
![ರವಿಶಂಕರ್ ಗುರೂಜಿ ಆಶ್ರಮದ ಬೈಕ್ಗಳಿಗೆ ಬೆಂಕಿ](https://www.udayavani.com/wp-content/uploads/2023/05/tdy-14-1-620x372.jpg)
ರಾಮನಗರ: ಕಾಂಪೌಂಡ್ ನಿರ್ಮಿಸುವ ವಿಚಾರಕ್ಕೆ ಸಂಬಂ ಧಿಸಿದಂತೆ ಸ್ಥಳೀಯ ಗ್ರಾಮಸ್ಥರು ಮತ್ತು ರವಿಶಂಕರ್ ಗುರೂಜಿ ಆಶ್ರಮದ ಕಡೆಯವರ ನಡುವೆ ಗಲಾಟೆ ನಡೆದು ಆಶ್ರಮಕ್ಕೆ ಸೇರಿದ್ದ ಬೈಕ್ ಮತ್ತು ಕಾರುಗಳನ್ನು ಹಾನಿಗೊಳಿಸಿರುವ ಘಟನೆ ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ರವಿಶಂಕರ್ ಗುರೂಜಿ ಆಶ್ರಮಕ್ಕೆ ಸೇರಿದ 7 ಬೈಕ್ಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, 5 ಬೈಕ್ಗಳು ಮತ್ತು ನಾಲ್ಕು ಕಾರುಗಳಿಗೆ ಹಾನಿಯಾಗಿದೆ. ಇನ್ನು ಆಶ್ರಮದ ಭದ್ರತಾ ಕೊಠಡಿಯ ಗಾಜುಗಳು ಪುಡಿಪುಡಿಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.
ಘಟನೆಯ ವಿವರ: ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಬಳಿ ಇರುವ ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲೀವಿಂಗ್ ಹಾಗೂ ಸ್ಥಳೀಯ ಗ್ರಾಮಸ್ಥರ ನಡುವೆ 36 ಗುಂಟೆ ಭೂಮಿಗೆ ಸಂಬಂಧಿಸಿದಂತೆ ವಿವಾದ ಇತ್ತು. ಈ ಭೂಮಿಗೆ ಆಶ್ರಮದ ಸಿಬ್ಬಂದಿ ಕಾಂಪೌಂಡ್ ನಿರ್ಮಿಸಲು ಮುಂದಾದ ಹಿನ್ನೆಲೆಯಲ್ಲಿ ಕುಪಿತಗೊಂಡ ಗ್ರಾಮಸ್ಥರು ಗಲಾಟೆ ಮಾಡಿ ಆಶ್ರಮದ ಆವರಣದಲ್ಲಿ ಇದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು.
ಟಾಪ್ ನ್ಯೂಸ್
![Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ](https://www.udayavani.com/wp-content/uploads/2024/07/akshata-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![HD-Kumaraswamy](https://www.udayavani.com/wp-content/uploads/2024/07/HD-Kumaraswamy-1-150x90.jpg)
Channapattana; ಯೋಗೇಶ್ವರ್ ಹೆಸರು ಅಂತಿಮ ಅಲ್ಲ: ಎಚ್ಡಿಕೆ ಸ್ಪಷ್ಟನೆ
![Channapatna Bypoll; I am the candidate of alliance party…: What did CP Yogeshwar say?](https://www.udayavani.com/wp-content/uploads/2024/07/channapatna-150x83.jpg)
Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?
![Magadi; A bear attacked a man on his way to the farm](https://www.udayavani.com/wp-content/uploads/2024/07/bear-150x83.jpg)
Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ
![DK-Shivakumar](https://www.udayavani.com/wp-content/uploads/2024/07/DK-Shivakumar-150x90.jpg)
Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ
![JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?](https://www.udayavani.com/wp-content/uploads/2024/07/bjp-jds-150x82.jpg)
JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?
MUST WATCH
ಹೊಸ ಸೇರ್ಪಡೆ
![Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ](https://www.udayavani.com/wp-content/uploads/2024/07/akshata-150x83.jpg)
Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ
![terror attack on Army camp in Jammu and Kashmir’s Rajouri](https://www.udayavani.com/wp-content/uploads/2024/07/rajuori-150x83.jpg)
Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ
![1](https://www.udayavani.com/wp-content/uploads/2024/07/1-5-150x90.jpg)
ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?
![Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!](https://www.udayavani.com/wp-content/uploads/2024/07/himachala-150x91.jpg)
Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!
![ಕಾರ್ಮಿಕರು ಚಹಾ ಕುಡಿಯಲು ಹೋಗಿದ್ದರಿಂದ ತಪ್ಪಿತು ದುರಂತ](https://www.udayavani.com/wp-content/uploads/2024/07/nandi-150x83.jpg)
Vijayapura; ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.