ಚುನಾವಣ ಕಾವಿನ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಗಡಾಯಿಸಿದ ಮರಳು ಸಮಸ್ಯೆ!


Team Udayavani, May 3, 2023, 8:10 AM IST

ಚುನಾವಣ ಕಾವಿನ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಗಡಾಯಿಸಿದ ಮರಳು ಸಮಸ್ಯೆ!

ಮಂಗಳೂರು: ರಾಜ್ಯಾದ್ಯಂತ ಚುನಾವಣ ಕಾವು ಏರುತ್ತಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ಬಿಗಡಾಯಿಸಿದೆ. ನಿರ್ಮಾಣ ಕ್ಷೇತ್ರಕ್ಕೆ ಮರಳಿನ ಕೊರತೆ ಕಾಡುತ್ತಿದ್ದು, ದುಪ್ಪಟ್ಟು ಬೆಲೆ ನೀಡಿದರೆ ಮಾತ್ರ ಸಿಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕರಾವಳಿಯಲ್ಲಿ ಈಗಾಗಲೇ ಸಿಆರ್‌ ಝಡ್‌ನ‌ಡಿ ಮರಳುಗಾರಿಕೆಗೆ ನಿರ್ಬಂಧವಿದೆ. ಒಂದೆಡೆ ಚುನಾವಣೆ, ಅದು ಮುಗಿಯುತ್ತಿದ್ದಂತೆಯೇ ಮಳೆಗಾಲ ಆರಂಭವಾಗುವುದರಿಂದ ಮತ್ತೆ ಮರಳು ಸರಬರಾಜಿನಲ್ಲಿ ಬಹು ಕೊರತೆ ಎದುರಾಗುವ ಸಾಧ್ಯತೆಯಿದೆ. ಹೀಗಾಗಿ ಗೃಹ ನಿರ್ಮಾಣ ಸೇರಿದಂತೆ ನಿರ್ಮಾಣ ಕಾಮಗಾರಿಗೆ ಇನ್ನಷ್ಟು ತೊಂದರೆಯಾಗಲಿದೆ.

ಈ ಮಧ್ಯೆ ದ.ಕ. ಜಿಲ್ಲೆಯಲ್ಲಿ ಮರಳು ಗಾರಿಕೆ ನಡೆಸಲು ಅನುಮತಿ ಇಲ್ಲವಾದರೂ ದುಪ್ಪಟ್ಟು ಬೆಲೆ ತೆತ್ತರೆ ಮರಳು ಸಿಗುತ್ತಿದೆ ಎಂಬ ಅಪವಾದವೂ ಇದೆ. ಸಾಮಾನ್ಯವಾಗಿ 5ರಿಂದ 6 ಸಾವಿರ ರೂ. ಬೆಲೆಗೆ ದೊರೆಯುವ ಲೋಡ್‌ ಮರಳನ್ನು (2 ಯುನಿಟ್‌) 10 ಸಾವಿರದಿಂದ 12 ಸಾವಿರ ರೂ.ಗಳಿಗೆ ಮಾರಾಟ ಮಾಡುವ ದಂಧೆ ನಡೆಯುತ್ತಿದೆ. ನಿರ್ಮಾಣ ಕ್ಷೇತ್ರಕ್ಕೆ ಅಗತ್ಯವಿರುವವರು ದುಬಾರಿ ಬೆಲೆ ನೀಡಿ ಮರಳು ಪಡೆಯುವ ಪ್ರಮೇಯವಿದೆ.

ಸದ್ಯ ಚುನಾವಣೆ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ದಾಸ್ತಾನು ಇರುವ ಮರಳು ವಿತರಣೆಗೆ ಕ್ರಮ ಕೈಗೊಳ್ಳಲು ಆಗುತ್ತಿಲ್ಲವಾದ್ದ ರಿಂದ ಮರಳಿನ ಸಮಸ್ಯೆ ಎದುರಾಗಿದೆ.

ನಾನ್‌ ಸಿಆರ್‌ಝಡ್‌ ಮರಳು ಗಾತ್ರ ದಲ್ಲಿ ದಪ್ಪವಾಗಿರುವ ಕಾರಣ ಮನೆ ನಿರ್ಮಾಣದಲ್ಲಿ “ಪ್ಲಾಸ್ಟರಿಂಗ್‌’ಗೆ ಬಳಸು ವುದು ವಿರಳ. ಇದಲ್ಲದೆ ಇದರ ಸಾಗಾಟ ವೆಚ್ಚವೂ ಅಧಿಕ. ಕಳೆದ ವರ್ಷವೂ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ಹಲವು ತಿಂಗಳ ಕಾಲ ನಿಷೇಧವಿದ್ದ ಕಾರಣ ಕರಾವಳಿ ಯಲ್ಲಿ ಮರಳಿನ ಕೊರತೆ ಕಾಡಿತ್ತು. ಇದರಿಂದ ಕ್ಲಪ್ತ ಸಮಯದಲ್ಲಿ ಮನೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗದೆ ತೊಂದರೆ ಅನುಭವಿಸಬೇಕಾಗಿತ್ತು.

“ನಾನ್‌ ಸಿಆರ್‌ಝಡ್‌ಮರಳನ್ನು ಮರಳು ಮಿತ್ರ ಆ್ಯಪ್‌ ಮೂಲಕ ವಿತರಿಸುವ ಕಾರ್ಯವೂ ಸಮರ್ಪಕವಾಗಿ ನಡೆಯುತ್ತಿಲ್ಲ. ದ.ಕ. ಜಿಲ್ಲೆಯಲ್ಲಿ ಪೂರೈಕೆಯಾಗುವ ಎಂ ಸ್ಯಾಂಡ್‌ ಕೂಡ ತಾಂತ್ರಿಕ ನಿಯಮಾವಳಿಗೆ ತಕ್ಕಂತೆ ಇಲ್ಲ. ಕಾಂಕ್ರೀಟ್‌, ಪ್ಲಾಸ್ಟರಿಂಗ್‌, ಕಲ್ಲು ಕಟ್ಟಲು ಎಲ್ಲದಕ್ಕೂ ಮರಳು ಬೇಕು. ಸ್ಟಾಕ್‌ ಯಾರ್ಡ್‌ಗಳಲ್ಲಿ ದಾಸ್ತಾನು ಮಾಡಿರುವ ಹಾಗೂ ಇಲಾಖೆಯು ಕಾನೂನು ಮೂಲಕ ವಶಪಡಿಸಿಕೊಂಡಿರುವ ಮರಳನ್ನು ವಿತರಿಸುವಂತೆ ದ.ಕ. ಜಿಲ್ಲಾಧಿಕಾರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎನ್ನುತ್ತಾರೆ ಗುತ್ತಿಗೆದಾರರು. ಉಡುಪಿಯಲ್ಲಿ ಸದ್ಯಕ್ಕೆ ಮರಳಿನ ಸಮಸ್ಯೆ ಇಲ್ಲ. ಗ್ರಾ.ಪಂ. ಮಟ್ಟದಲ್ಲಿಯೇ ಮರಳು ಪೂರೈಕೆಯಾಗುತ್ತಿದೆ ಎನ್ನುತ್ತಾರೆ ಉಡುಪಿಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಸಂದೀಪ್‌.

ಮರಳಿಲ್ಲದೆ ನಿಗದಿತ ಸಮಯದಲ್ಲಿ ಕಾಮಗಾರಿಗಳನ್ನು ಪೂರೈಸಲು ತೊಂದರೆಯಾಗಿದೆ. ಕೆಲಸಗಾರರಿಗೆ ಸರಿಯಾಗಿ ಕೆಲಸ ನೀಡಲು ಸಾಧ್ಯವಾಗುತ್ತಿಲ್ಲ. ಜಿಲ್ಲಾಡಳಿತ ಸದ್ಯ ಚುನಾವಣೆಯಲ್ಲಿ ವ್ಯಸ್ತವಾಗಿರುವ ಕಾರಣ ನಿರ್ಧಾರ ಆಗಿಲ್ಲ. ಎರಡು ತಿಂಗಳ ಅವಧಿಗೆ 2 ಯುನಿಟ್‌ನ 1 ಸಾವಿರ ಲೋಡ್‌ ಮರಳು ದಕ್ಷಿಣ ಕನ್ನಡ ಜಿಲ್ಲೆಗೆ ಅಗತ್ಯ ಇರುವುದಾಗಿ ಜಿಲ್ಲಾಡಳಿತಕ್ಕೆ ಮನವಿಯಲ್ಲಿ ತಿಳಿಸಲಾಗಿದೆ.
– ಎಂ. ಮಹಾಬಲ ಕೊಟ್ಟಾರಿ, ಅಧ್ಯಕ್ಷರು, ಸಿವಿಲ್‌ ಗುತ್ತಿಗೆದಾರರ ಸಂಘ, ದ.ಕ.

ಸದ್ಯ ಜಿಲ್ಲೆಯಲ್ಲಿ ನಾವು ಚುನಾವಣೆಯ ಬಗ್ಗೆಯೇ ಬಹುಮುಖ್ಯವಾಗಿ ಗಮನ ಹರಿಸಲಾಗುತ್ತಿದೆ. ಕುಡಿಯುವ ನೀರು ಸೇರಿದಂತೆ ತುರ್ತು ಆವಶ್ಯಕತೆಗಳನ್ನು ಹೊರತುಪಡಿಸಿ ಇತರ ವಿಷಯಗಳ ಬಗ್ಗೆ ಮೇ 13ರ ಅನಂತರ ಜಿಲ್ಲಾಡಳಿತ ಗಮನ ಹರಿಸಲಿದೆ.
– ಎಂ.ಆರ್‌. ರವಿಕುಮಾರ್‌, ಜಿಲ್ಲಾಧಿಕಾರಿ. ದ.ಕ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.