ಸಂತ್ರಸ್ತರಿಗಾಗಿ ಸ್ವಾಭಿಮಾನದ ಹೋರಾಟ: ಮಲ್ಲಿಕಾರ್ಜುನ ಚರಂತಿಮಠ


Team Udayavani, May 3, 2023, 9:15 AM IST

ಸಂತ್ರಸ್ತರಿಗಾಗಿ ಸ್ವಾಭಿಮಾನದ ಹೋರಾಟ: ಮಲ್ಲಿಕಾರ್ಜುನ ಚರಂತಿಮಠ

ಬಾಗಲಕೋಟೆ: ನಡುಗಡ್ಡೆ ಪ್ರದೇಶದ ಎಲ್ಲ ಮನೆಗಳಿಗೆ ಯೋಗ್ಯ ಪರಿಹಾರ ಹಾಗೂ ಸ್ಥಳಾಂತರ ಮಾಡುವ ಮೂಲಕ ಸಂತ್ರಸ್ತರಿಗೆ ನ್ಯಾಯ ದೊರಕಿಸಿಲು ನಿರಂತರ ಸ್ವಾಭಿಮಾನದ ಹೋರಾಟ ಮಾಡುತ್ತೇವೆ. ಈ ಬಾರಿ ಸಂತ್ರಸ್ತರು ತಮ್ಮ ಮತವನ್ನು ಆಟೋರಿಕ್ಷಾ ಚಿಹ್ನೆಗೆ ನೀಡುವ ಮೂಲಕ ತಮ್ಮ ಸೇವೆಗೆ ಅನುವು ಮಾಡಿಕೊಡಬೇಕು ಎಂದು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಚರಂತಿಮಠ ಮನವಿ ಮಾಡಿದರು.

ನಗರದ ಕಿಲ್ಲಾ ಓಣಿ ಸೇರಿದಂತೆ ವಿವಿಧ ನಗರಗಳಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ ಮತಯಾಚಿಸಿದರು. ನಡುಗಡ್ಡೆ ಸಂತ್ರಸ್ತರು ಹಲವು ವರ್ಷಗಳಿಂದ ನಮ್ಮನ್ನು ಸ್ಥಳಾಂತರಿಸಿ ಎಂದು ಸ್ಥಳೀಯ ಶಾಸಕರಿಗೆ ಮನವಿ ಮಾಡಿದರೂ ಸಂತ್ರಸ್ತರ ಕೂಗು ಮಾತ್ರ ಅವರಿಗೆ ಕೇಳುತ್ತಿಲ್ಲ. ಈ ಬೇಡಿಕೆ ಕಳೆದ 2004ರಿಂದಲೂ ಕೇಳಿ ಬರುತ್ತಿದೆ. ಇಲ್ಲಿನ ಜನರಿಗಾಗಿ ನಾನೂ ಹೋರಾಟ ಮಾಡಿ ಜೈಲಿಗೆ ಹೋಗಿದ್ದೆ. ನಡುಗಡ್ಡೆ ಸಂತ್ರಸ್ತರ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸವೇ ಆಗಿದೆ, ಹೊರತು ಅವರಿಗೆ ಸ್ಪಂದಿಸುವ ಕೆಲಸ ಯಾರೂ ಮಾಡಿಲ್ಲ ಎಂದರು.

ಕ್ಷೇತ್ರ ಎಲ್ಲೆಡೆ ಇಂತಹ ಹಲವಾರು ಸಮಸ್ಯೆಗಳು ಸಾಕಷ್ಟಿವೆ. ಜನರು ಸಮಸ್ಯೆಗಳಿಂದ ಹೊರಬಂದು ಬದುಕು ಸಾಗಿಸುವುದಕ್ಕೆ ಸಾಧ್ಯವಾಗಿಲ್ಲ. ಆದರೆ, ಸ್ವಾಭಿಮಾನಿ ಕಾರ್ಯಕರ್ತರು ಇದೆಲ್ಲವನ್ನು ಗಮನಿಸಿ ಈ ಬಾರಿ ಕ್ಷೇತ್ರಕ್ಕೆ ಬದಲಾವಣೆ ತರುವುದಕ್ಕೆ ಮುಂದಾಗಿದ್ದಾರೆ. ಸಾರ್ವಜನಿಕರು ಕೂಡ ಬೆಂಬಲ ವ್ಯಕ್ತಪಡಿಸುತ್ತಿದ್ದು, ಈ ಬಾರಿ ಕ್ಷೇತ್ರದಲ್ಲಿ ಹೊಸ ರಾಜಕೀಯಕ್ಕೆ ನಾಂದಿಹಾಡಲಿದ್ದಾರೆ ಎಂದು ಹೇಳಿದರು.

ಕ್ಷೇತ್ರಕ್ಕೆ ಬೇಕಾಗಿರುವ ಮೂಲಭೂತ ಸೌಲಭ್ಯಗಳು, ಕೈಗಾರಿಕೆ ಸ್ಥಾಪನೆ, ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಸೇರಿದಂತೆ ಹಲವು ಯೋಜನೆ ಜಾರಿಗೆ ತರುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡುವ ಉದ್ದೇಶ ಹೊಂದಿದ್ದೇವೆ. ಕ್ಷೇತ್ರದ ಎಲ್ಲೆಡೆ ಸ್ವಾಭಿಮಾನಿ ಕಾರ್ಯಕರ್ತರ ನಿರೀಕ್ಷೆಗೂ ಮೀರಿ ಜನ ಬೆಂಬಲ ವ್ಯಕ್ತವಾಗುತ್ತಿದೆ. ಇದರಿಂದ ವಿರೋಧಿಗಳು ಹತಾಶರಾಗಿದ್ದಾರೆ ಎಂದರು.

ಮುಖಂಡರಾದ ಸಂತೋಷ ಹೊಕ್ರಾಣಿ, ಬಸವರಾಜ ಕಟಗೇರಿ, ರವಿ ಕುಮಟಗಿ, ಅಶೋಕ ಮುತ್ತಿನಮಠ, ಅಶೋಕ ಮಹೇಂದ್ರಕರ, ನಾಗರಾಜ ಕೆರೂರ, ಸಚಿನ ಮರಿಶೆಟ್ಟಿ, ಸಂಜೀವ ಡಿಗ್ಗಿ, ಶ್ರೀಶೈಲ ಅಂಗಡಿ, ರಾಜು ಗೌಳಿ, ಅರುಣ ಲೋಕಾಪುರ, ಗುರು ಅನಗವಾಡಿ, ಶಂಕರ ಮಗಜಿ, ವಿಶಾಲ ಮಾಂಡಗಿ, ಅಶೋಕ ಸಾಳಿಂಕೆ, ವಿಜಯ ಮನಗೂಳಿ, ಶಂಕ್ರಯ್ಯಹಂಚಿನಮಠ, ವಿರೇಶ ಹಿರೇಮಠ, ಚರಣ ಜಾಧವ, ವಿಠ್ಠಲ ಕಾಳಬರ, ಈರಣ್ಣ ವಿಜಯಪುರ, ಹನಮಂತ ಕರಾಡೆ, ನಾಗರಾಜ ಕಾಂಬಳೆ, ಶಾಂತಾಬಾಯಿ ಗೋಣಿ, ವಿಜಲಕ್ಷ್ಮೀ ಅಂಗಡಿ, ಗಂಗಮ್ಮ ರಜಪೂತ, ಉಮಾ ಗವಿಮಠ, ಸುಭದ್ರಾ ದಶಮನಿ, ಸಂಗಮ್ಮ ನಾಶಿ, ರೇಖಾ ಮುರಡಿ ಮುಂತಾದವರು ಪಾಲ್ಗೊಂಡಿದ್ದರು.

ಬಾಗಲಕೋಟೆಯಲ್ಲಿ ಈ ಬಾರಿ ಬದಲಾವಣೆ ಗ್ಯಾರಂಟಿಯಾಗಿದೆ. ಮತದಾರರ ಬೆಂಬಲ ಸ್ವಾಭಿಮಾನಿ ಕಾರ್ಯಕರ್ತರಿಗಿದೆ. ಜನರು ನಮಗೆ ನೀಡುತ್ತಿರುವ ಬೆಂಬಲ ಕಂಡು ಕೆಲವರು ಹತಾಶರಾಗಿದ್ದಾರೆ. ಸೋಲಿನ ಭೀತಿಯಿಂದ ಕಾನೂನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಜನರು ಮೇ 10ರಂದು ಉತ್ತರ ಕೊಡುತ್ತಾರೆ. –ಮಲ್ಲಿಕಾರ್ಜುನ ಚರಂತಿಮಠ, ಪಕ್ಷೇತರ ಅಭ್ಯರ್ಥಿ

ಟಾಪ್ ನ್ಯೂಸ್

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

10-mudhol

Mudhol: ಉದಯವಾಣಿ ಫಲಶೃತಿ; ಭವನ ಸ್ವಚ್ಛತೆಗೆ ಮುಂದಾದ ಅಧಿಕಾರಿಗಳು

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.