ಸಮಗ್ರ ಅಭಿವೃದ್ಧಿ ಹೊಣೆ ನನ್ನದು: ಪ್ರಿಯಕೃಷ್ಣ
Team Udayavani, May 3, 2023, 9:43 AM IST
ಬೆಂಗಳೂರು: “ನೀರಿನ ಪೈಪ್ಗಳಿವೆ; ಆದರೆ, ಅದರಲ್ಲಿ ನೀರೇ ಬರುತ್ತಿಲ್ಲ. ರಸ್ತೆಗಳಿದ್ದರೂ ಸದಾ ಕಾಮಗಾರಿ ಪ್ರಗತಿಯಲ್ಲಿರುತ್ತದೆ. ನೀವು ಗೆದ್ದುಬಂದರೆ ಈ ಸಮಸ್ಯೆಗಳೇ ಇರುವುದಿಲ್ಲ…’ – ಗೋವಿಂದರಾಜನಗರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಮಂಗಳವಾರ ಶಿವಾನಂದನಗರಕ್ಕೆ ಭೇಟಿ ನೀಡಿದಾಗ, ಅಲ್ಲಿನ ಮತದಾರರಿಂದ ಕೇಳಿಬಂದ ಹಾರೈಕೆಗಳಿವು.
ಪ್ರಿಯದರ್ಶಿನಿ, ದಾಸರಹಳ್ಳಿ, ರಾಜಾಜಿನಗರ 6ನೇ ಬ್ಲಾಕ್ ಸೇರಿದಂತೆ ಹಲವು ಕಡೆಗಳಲ್ಲಿ ಮತದಾರರು ನೀರು, ರಸ್ತೆ ಮತ್ತಿತರ ಸಮಸ್ಯೆಗಳನ್ನು ಪ್ರಿಯಕೃಷ್ಣ ಅವರ ಮುಂದೆ ಹೇಳಿಕೊಂಡರು. ವರ್ಷಗಳಿಂದ ಈ ತೊಂದರೆ ಎದುರಿಸು ತ್ತಿದ್ದು, ಇವುಗಳಿಗೆ ತಾವು (ಪ್ರಿಯಕೃಷ್ಣ ಅವರನ್ನು ಉದ್ದೇಶಿಸಿ) ಪರಿಹಾರ ಕಲ್ಪಿಸು ತ್ತೀರಿ ಎಂಬ ನಂಬಿಕೆ ಇದೆ. ಹಾಗಾಗಿ, ತಮ್ಮನ್ನೇ ಬೆಂಬಲಿಸುವುದಾಗಿ ಹೇಳುತ್ತಿರುವುದು ಕಂಡುಬಂತು. ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಶಾಸಕ ಪ್ರಿಯಕೃಷ್ಣ, “ಕ್ಷೇತ್ರದ ಸಮಗ್ರ ಅಭಿವೃದ್ಧಿ ಹೊಣೆ ನನ್ನದು. ನೀರು, ರಸ್ತೆ ಮಾತ್ರವಲ್ಲ; ಅಂಡರ್ಪಾಸ್, ಸಿಸಿ ಕ್ಯಾಮೆರಾ ಅಳವಡಿಕೆ, ಗ್ರಂಥಾಲಯ ನಿರ್ಮಾಣ, ಪಂಚಶೀಲನಗರದ ಖಾತಾ ನೀಡುವಿಕೆ ಮತ್ತಿತರ ಪ್ರಮುಖ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕಿದೆ. ತಾವು ಕೈಜೋಡಿಸಿದರೆ ಮಾತ್ರ ಇದೆಲ್ಲವೂ ಸಾಧ್ಯವಾಗುತ್ತದೆ’ ಎಂದು ಮನವಿ ಮಾಡಿದರು.
ಅಭಿವೃದ್ಧಿ ಎನ್ನುವುದು ಕೆಲವೆಡೆ ಮರೀಚಿಕೆಯಾಗಿದೆ. ಒಂದು ಕಣ್ಣಿಗೆ ಬೆಣ್ಣೆ ಮತ್ತೂಂದು ಕಣ್ಣಿಗೆ ಸುಣ್ಣ ಬಳಿಯಲಾಗಿದೆ. ಮುಂಬರುವ ದಿನಗಳಲ್ಲಿ ಇದಾವುದಕ್ಕೂ ಅವಕಾಶ ಇರುವುದಿಲ್ಲ. ಸಮಗ್ರ ಅಭಿವೃದ್ಧಿ ಮೂಲಮಂತ್ರ ಆಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಇದರಿಂದ ಸಾಕಷ್ಟು ಅನುದಾನ ಕೂಡ ಕ್ಷೇತ್ರಕ್ಕೆ ದೊರೆಯುವ ವಿಶ್ವಾಸ ಇದೆ ಎಂದೂ ಪ್ರಿಯಕೃಷ್ಣ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.