ಉಡುಪಿ: ವಿದೇಶದಲ್ಲಿರುವ ಮತದಾರರಿಗೂ ಬುಲಾವ್‌

ದೇಶದಲ್ಲಿರುವ ಗುಂಪುಗ ಳೊಂದಿಗೆ ಕೆಲವು ಅಭ್ಯರ್ಥಿಗಳು ಈಗಾಗಲೇ ಆನ್‌ಲೈನ್‌ ಮೂಲಕ ಸಭೆ ನಡೆಸಿದ್ದಾರೆ.

Team Udayavani, May 3, 2023, 12:40 PM IST

ಉಡುಪಿ: ವಿದೇಶದಲ್ಲಿರುವ ಮತದಾರರಿಗೂ ಬುಲಾವ್‌

ಉಡುಪಿ: ಜಿಲ್ಲಾದ್ಯಂತ ಚುನಾವಣ ಕಣ ರಂಗೇರಿದ್ದು, ಮೇ 10 ರಂದು ನಡೆಯುವ ಮತದಾನಕ್ಕೆ ವಿದೇಶಗಳಿಂದಲೂ ಊರಿಗೆ
ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಉದ್ಯೋಗ, ಉನ್ನತ ಶಿಕ್ಷಣ ಸಹಿತ ವಿವಿಧ ಕಾರಣಕ್ಕೆ ಹೊರ ದೇಶಗಳಲ್ಲಿ ನೆಲೆಸಿರುವ
ಜಿಲ್ಲೆಯವರಿಗೆ ವಿವಿಧ ಪಕ್ಷಗಳ ಕಾರ್ಯಕರ್ತರು ಹಾಗೂ ಅವರ ಕುಟುಂಬದ ಸದಸ್ಯರು ಕರೆ ಮಾಡಿ, ಚುನಾವಣೆಗೆ
ಬರುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಕೆಲವರು ಈಗಾಗಲೇ ರಜೆಯ ಮೇಲೆ ತವರಿಗೆ ಬಂದಿಳಿದ್ದಾರೆ. ಇನ್ನು ಕೆಲವರು ಈ ವಾರಾಂತ್ಯದೊಳಗೆ ಬರುವ ಸಾಧ್ಯತೆಯೂ
ಇದೆ ಎಂದು ಹೇಳಲಾಗುತ್ತಿದೆ. ಕೆಲವರು ತಮ್ಮ ಸ್ನೇಹಿತರು, ಪಕ್ಷದ ಸಾಮಾನ್ಯ ಕಾರ್ಯ ಕರ್ತರು ಸ್ಪರ್ಧೆಯಲ್ಲಿದ್ದಾರೆ ಎಂಬ ಕಾರಣಕ್ಕೆ ಸ್ವ ಇಚ್ಛೆಯಿಂದಲೇ ವಿದೇಶದಿಂದ ಮತದಾನಕ್ಕಾಗಿಯೇ ಊರಿಗೆ ವಾಪಸಾಗುತ್ತಿದ್ದಾರೆ. ಈಗಾಗಲೇ ಬಂದಿರುವ ಕೆಲವರು
ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಪ್ರಕ್ರಿಯೆ, ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡು ತಂತ್ರಗಾರಿಕೆಯ ತಂಡದಲ್ಲೂ
ಕೆಲಸ ಮಾಡುತ್ತಿದ್ದಾರೆ.

ವಿದೇಶದಲ್ಲಿರುವ ಗುಂಪುಗ ಳೊಂದಿಗೆ ಕೆಲವು ಅಭ್ಯರ್ಥಿಗಳು ಈಗಾಗಲೇ ಆನ್‌ಲೈನ್‌ ಮೂಲಕ ಸಭೆ ನಡೆಸಿದ್ದಾರೆ. ಅರಬ್‌ ದೇಶಗಳಲ್ಲಿ ಕರಾವಳಿಯ ಅನೇಕರು ಉದ್ಯೋಗದಲ್ಲಿದ್ದಾರೆ. ಅಂಥವರ ಮೇಲೂ ರಾಜಕೀಯ ಪಕ್ಷದ ಪ್ರಮುಖರು ಕಣ್ಣಿಟ್ಟಿದ್ದಾರೆ. ಒಂದು ದಿನದ ಮಟ್ಟಿಗಾದರೂ ಅವರನ್ನು ತವರಿಗೆ ಕರೆಸಿಕೊಳ್ಳುವ ಶತಪ್ರಯತ್ನ ಮಾಡುತ್ತಿದ್ದಾರೆ.

ಉದ್ಯೋಗ ಅರಸಿ ವಿದೇಶಗಳಿಗೆ ಹೋಗಿರುವ ಅನೇಕರು ಅಲ್ಲಿಯ ಪೌರತ್ವ ಪಡೆದಿರುವುದು ಕಡಿಮೆ. ತಮ್ಮ ಮತ ಊರಲ್ಲೇ
ಇರುವುದರಿಂದ ಕನಿಷ್ಠ ಐದು ವರ್ಷಕ್ಕೆ ಒಮ್ಮೆಯಾದರೂ ಊರಿಗೆ ಬಂದು ಮತ ಚಲಾಯಿಸಬೇಕು ಎಂಬ ಆಶಯ ವ್ಯಕ್ತ
ಪಡಿಸುವವರು ಕೆಲವರಿದ್ದಾರೆ. ವಿದೇಶದಲ್ಲಿರುವವರು ತಮ್ಮದೇ ಸಂಘಟನೆಗಳನ್ನು ಸ್ಥಾಪಿಸಿಕೊಂಡಿದ್ದಾರೆ.

ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಆ ಸಂಘಟನೆಗಳ ಪ್ರಮುಖರನ್ನು ಮಾತನಾಡಿಸಿ, ಮತ ಸೆಳೆಯುವ ಪ್ರಕ್ರಿಯೆಯನ್ನು ನಡೆಸುತ್ತಿದ್ದಾರೆ. ಒಟ್ಟಿನಲ್ಲಿ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಈ ಬಾರಿ ತಮಗೆ ಖಾತರಿ ಯಾಗಿರುವ ಯಾವ ಮತದಲ್ಲೂ ವ್ಯತ್ಯಾಸವಾಗಬಾರದು ಎಂಬ ನೆಲೆಯಲ್ಲಿ ಎಲ್ಲ ರೀತಿಯ ಪ್ರಯತ್ನವನ್ನು ಮಾಡುತ್ತಿದ್ದಾರೆ.

ಹಾಗೆಯೇ ಮತದಾರರ ಪಟ್ಟಿಯನ್ನು ಪರಿಶೀಲಿಸಿ, ಮನೆ ಮನೆಗೆ ಭೇಟಿ ಮಾಡಿದ ಸಂದರ್ಭ ಮತದಾರರ ಪಟ್ಟಿಯಲ್ಲಿ ಅರ್ಹ
ರೆಲ್ಲರ ಹೆಸರು ಇದೆಯೇ, ಅವರೆಲ್ಲರೂ ಮತದಾನ ದಿನದಂದು ಊರಿಗೆ ಬಂದು ಹಕ್ಕು ಚಲಾಯಿಸಲಿದ್ದಾರೆಯೇ? ಎಂಬು
ದನ್ನು ಖಾತರಿಪಡಿಸಿಕೊಂಡೇ ವಾಪಸ್‌ ಬರುತ್ತಿದ್ದಾರೆ. ಹೊರ ಜಿಲ್ಲೆ ಮತ್ತು ಹೊರ ರಾಜ್ಯದಲ್ಲಿ ಇರುವ ಮತದಾರರನ್ನು ಒಗ್ಗೂ
ಡಿಸುವ ಕೆಲಸವನ್ನು ಈಗಾಗಲೇ ಎಲ್ಲ ಪಕ್ಷಗಳು ಮಾಡಿವೆ. ಅಷ್ಟು ಮಾತ್ರವಲ್ಲದೆ ಮತದಾನ ದಿನಕ್ಕೂ ಮುನ್ನ ಊರಿಗೆ ಕರೆ
ತರುವ ವ್ಯವಸ್ಥೆಯನ್ನೂ ಮಾಡಿವೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.