ತಮಿಳಿನ ಜನಪ್ರಿಯ ನಟ, ನಿರ್ದೇಶಕ ಮನೋಬಾಲಾ ನಿಧನ
Team Udayavani, May 3, 2023, 2:13 PM IST
ಚೆನ್ನೈ: ಕಾಲಿವುಡ್ ನಲ್ಲಿ ನಟ, ನಿರ್ದೇಶಕರಾಗಿ ಅಪಾರ ಖ್ಯಾತಿಯನ್ನು ಗಳಸಿದ್ದ ಮನೋಬಾಲಾ (69) ಬುಧವಾರ (ಮೇ 3 ರಂದು) ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲ ಸಮಯದಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚೆನ್ನೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ವರದಿ ತಿಳಿಸಿದೆ.
ಅವರ ನಿಧನದ ಸುದ್ದಿಯನ್ನು ನಟ-ನಿರ್ದೇಶಕ ಜಿಎಂ ಕುಮಾರ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
1979 ರಲ್ಲಿ ಭಾರತಿರಾಜ ಅವರ ʼಪುತಿಯ ವಾರ್ಪುಗಳ್ʼ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ನೂರಕ್ಕೂ ಅಧಿಕ ಸಿನಿಮಾದಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರಗಳಲ್ಲಿ ನಟಿಸಿ ಅಪಾರ ಮೆಚ್ಚುಗೆ ಪಡೆದುಕೊಂಡಿದ್ದರು.
ಕಮಲ್ ಹಾಸನ್ ಅವರ ಸಲಹೆಯ ಮೇರೆಗೆ ಭಾರತಿರಾಜ ಅವರಡಿಯಲ್ಲಿ ಸಹಾಯಕ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು. ಇದಾದ ಬಳಿಕ 1982 ರಲ್ಲಿ ʼಆಗಾಯ ಗಂಗೈʼ ಚಿತ್ರದ ಮೂಲಕ ಮೊದಲ ಬಾರಿ ತಮ್ಮ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದರು.
ʼಪಿಳ್ಳೈ ನಿಲಾʼ, ʼಊರ್ಕಾವಲನ್ʼ, ʼಎನ್ ಪುರುಷಾನ್ತನ್ ಎನಕ್ಕು ಮಟ್ಟುಮ್ತಾನ್ʼ, ʼಕರುಪ್ಪು ವೆಳ್ಳೈʼ, ʼಮಲ್ಲು ವೆಟ್ಟಿ ಮೈನರ್ʼ ʼಪಾರಂಬರಿಯಂʼ.. ಹೀಗೆ 25 ಸಿನಿಮಾಗಳನ್ನು ನಿರ್ದೇಶನ ಮಾಡಿ ಮಿಂಚಿದ್ದರು. ಸಿನಿಮಾ ಮಾತ್ರವಲ್ಲದೆ ಧಾರಾವಾಹಿಗಳಲ್ಲೂ ನಟಿಸಿ, ಕಿರುತೆರೆಯ ಕೆಲ ಧಾರಾವಾಹಿಗಳನ್ನೂ ನಿರ್ದೇಶಿಸಿದ್ದರು. ನಿರ್ಮಾಪಕರಾಗಿಯೂ ಇಂಡಸ್ಟ್ರಿಯಲ್ಲಿ ಹೆಸರು ಮಾಡಿದ್ದರು.
2022 ರಲ್ಲಿ ʼಕುಕು ವಿತ್ ಕೊಮಾಲಿʼ ಕಾರ್ಯಕ್ರಮದ ಸ್ಪರ್ಧಿಗಳಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದರು.
35 ವರ್ಷಗಳ ಸಿನಿ ಜರ್ನಿಯಲ್ಲಿ ಸುಮಾರು 450 ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿರುವ ಅವರು,ಕಾಜಲ್ ಅಗರ್ವಾಲ್ ಅವರ ʼಘೋಸ್ಟಿʼ ಚಿತ್ರದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು.
ಪತ್ನಿ ಮತ್ತು ಮಗನನ್ನು ಅವರು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tumbbad 2: ಪ್ರಳಯ್ ಆಯೇಗಾ.. ಹಾರಾರ್ ಥ್ರಿಲ್ಲರ್ ‘ತುಂಬಾಡ್ʼ ಸೀಕ್ವೆಲ್ ಅನೌನ್ಸ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.