Karnataka Election; ಕಚೇರಿಯಲ್ಲಿನ ಮೋದಿ ಮತ್ತು ಶಾ ಫೋಟೋ ತೆಗೆಯುವುದಿಲ್ಲ: ಶೆಟ್ಟರ್

ಇದು ನನ್ನ ಕೊನೆಯ ವಿಧಾನಸಭಾ ಚುನಾವಣೆ

Team Udayavani, May 3, 2023, 8:45 PM IST

1-csasadsa

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೋಟೋಗಳು ತಮ್ಮ ಮನೆ-ಕಚೇರಿಯಲ್ಲಿ ಗೋಡೆಯ ಮೇಲಿದ್ದು ಅವುಗಳನ್ನು ತೆಗೆದುಹಾಕುವುದು ಸರಿಯಲ್ಲ ಎಂದು ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

1994 ರಿಂದ ಬಿಜೆಪಿ ಟಿಕೆಟ್‌ನಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಅನ್ನು ಪ್ರತಿನಿಧಿಸಿರುವ ಶೆಟ್ಟರ್, ಬಿಜೆಪಿಯೊಂದಿಗೆ ದಶಕಗಳ ಹಳೆಯ ಸಂಬಂಧವನ್ನು ಕಡಿದುಕೊಂಡ ನಂತರ, ತಮ್ಮ ರಾಜಕೀಯ ಜೀವನದ ಕೊನೆಯ ಹಂತದಲ್ಲಿ ತಮ್ಮ ಕಾರಿನ ಮೇಲೆ ಕಾಂಗ್ರೆಸ್ ಧ್ವಜವನ್ನು ಹಾಕಿಕೊಂಡು ಪಕ್ಷದ ಕಾರ್ಯಕರ್ತರೊಂದಿಗೆ ಪ್ರಚಾರಕ್ಕೆ ಹೊರಟಿದ್ದಾರೆ.

ಶೆಟ್ಟರ್ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ಬಿಜೆಪಿಯಿಂದ ಹೊರಬಂದ ನಂತರ ಫೋಟೋಗಳನ್ನು ಏಕೆ ತೆಗೆದುಹಾಕಿಲ್ಲ ಎಂದು ಪ್ರಶ್ನಿಸಿದಾಗ, “ಇದರಲ್ಲಿ ಆಶ್ಚರ್ಯವೇನು. ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬದಲಾದ ತಕ್ಷಣ ಹಿಂದಿನ ನಾಯಕರ ಫೋಟೋ ತೆಗೆಯುವುದು ಒಳ್ಳೆಯದಲ್ಲ. ನಾನು ಅದನ್ನು ಮಾಡಲು ಸಾಧ್ಯವಿಲ್ಲ ” ಎಂದಿದ್ದಾರೆ.

ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶೆಟ್ಟರ್ , ಇದು ನನ್ನ ಕೊನೆಯ ವಿಧಾನಸಭಾ ಚುನಾವಣೆ ಎಂದಿದ್ದಾರೆ. ಚುನಾವಣೆ ನನ್ನ ಸ್ವಾಭಿಮಾನದ ಹೋರಾಟವಾಗಿದೆ, ರಾಜಕೀಯ ಆಕಾಂಕ್ಷೆಗಾಗಿ ಅಲ್ಲ. ನನ್ನ ಆತ್ಮಗೌರವಕ್ಕೆ ಧಕ್ಕೆಯಾದ ಕಾರಣ ಷರತ್ತನ್ನು ಹಾಕದೆ ನನ್ನ ನೆಮ್ಮದಿಗಾಗಿ ಕಾಂಗ್ರೆಸ್‌ ಸೇರಿದ್ದೇನೆ ಎಂದಿದ್ದಾರೆ.

“ಜನಪ್ರಿಯತೆ, ವಯಸ್ಸು, ಕ್ರಿಮಿನಲ್ ಹಿನ್ನೆಲೆ ಮತ್ತು ಭ್ರಷ್ಟಾಚಾರ/ಸಿಡಿ ಇಲ್ಲದಿದ್ದರೂ ನನಗೆ ಏಕೆ ಟಿಕೆಟ್ ನಿರಾಕರಿಸಲಾಗಿದೆ ಎಂಬುದು ಯಾರಿಗೂ ತಿಳಿದಿಲ್ಲ. ಆದರೆ ಬಿಜೆಪಿ 75 ವರ್ಷ ವಯಸ್ಸಿನವರು, ಕುಟುಂಬ ಸದಸ್ಯರು ಮತ್ತು ಕ್ರಿಮಿನಲ್ ಹಿನ್ನೆಲೆ ಹೊಂದಿರುವವರಿಗೆ ಟಿಕೆಟ್ ನೀಡಿದೆ”ಎಂದರು.

“ಅಭಿವೃದ್ಧಿ ಪರ ಕೆಲಸಗಳಿಂದಾಗಿ ನಾನು ಇನ್ನೂ ಜನಪ್ರಿಯತೆಯನ್ನು ಉಳಿಸಿಕೊಂಡಿದ್ದೇನೆ. ಯಾವುದೇ ವಿರೋಧಿ ಅಲೆಯಿಲ್ಲ. ಈ ಬಾರಿ ಅತ್ಯಧಿಕ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ. ಕಳೆದ ಆರು ಸತತ ಚುನಾವಣೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮರಾಠರ ಬೆಂಬಲದಿಂದ ಗೆದ್ದಿದ್ದೇನೆ ಎಂಬ ತಪ್ಪು ಸಂವಹನ ಇದೆ ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.