ಸಚಿವ ಮಾಧುಸ್ವಾಮಿಗೆ ಆಪ್ತನಿಂದಲೇ ಠಕ್ಕರ್‌


Team Udayavani, May 4, 2023, 6:07 AM IST

bjp cong election fight

ತುಮಕೂರು: ಕಲ್ಪತರು ನಾಡಿನ ವಿಶಿಷ್ಟ ವಿಧಾನಸಭಾ ಕ್ಷೇತ್ರ ಚಿಕ್ಕನಾಯಕನಹಳ್ಳಿ. ಈ ಕ್ಷೇತ್ರದಿಂದ ರಾಜ್ಯ ಬಿಜೆಪಿ ಸರಕಾರದ ಪ್ರಭಾವಿ ಸಚಿವ ಎಂದು ಬಿಂಬಿತವಾಗಿರುವ ಜೆ.ಸಿ.ಮಾಧುಸ್ವಾಮಿ ಪ್ರತಿನಿಧಿಸುತ್ತಿದ್ದು ಸಹಜವಾಗಿಯೇ ಅಖಾಡ ರಂಗೇರಿದೆ.

ಈ ಮೊದಲು ಒಮ್ಮೆ ಗೆದ್ದರೆ ಈ ಕ್ಷೇತ್ರದಿಂದ ಮತ್ತೆ ಗೆಲ್ಲುವುದಿಲ್ಲ ಎನ್ನುವು ದಾಗಿತ್ತು. ಆದರೆ ಕ್ಷೇತ್ರ ಪುನರ್‌ವಿಂಗಡಣೆ ಅನಂತರ ಹುಳಿಯಾರು, ಬುಕ್ಕಾ ಪಟ್ಟಣ ಹೋಬಳಿ ಸೇರಿದ ಅನಂತರ, ನಡೆದ 2008 ಮತ್ತು 2013ರ  ಚುನಾ ವಣೆಯಲ್ಲೂ ಜೆಡಿಎಸ್‌ನಿಂದ ಅಂದಿನ ಶಾಸಕ ಸಿ.ಬಿ.ಸುರೇಶ್‌ ಬಾಬು ನಿರಂತರ ಗೆಲುವು ಸಾಧಿಸಿದ್ದರು. 2018ರ ಚುನಾವಣೆಯಲ್ಲಿ ಬಿಜೆಪಿಯ ಹಾಲಿ ಸಚಿವ ಜೆ.ಸಿ.ಮಾಧುಸ್ವಾಮಿ ಗೆಲುವು ಸಾಧಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಆಗಿರುವ ಮಾಜಿ ಶಾಸಕ ಕೆ.ಎಸ್‌.ಕಿರಣ್‌ ಕುಮಾರ್‌ ಕಳೆದ 40 ವರ್ಷ ಬಿಜೆಪಿಯಲ್ಲಿ ಇದ್ದವರು. ಬಿಜೆಪಿಯಲ್ಲಿ ಟಿಕೆಟ್‌ ಸಿಗಲಿಲ್ಲ ಎನ್ನುವ ಅನುಕಂಪವನ್ನು ಅಸ್ತ್ರ ಮಾಡಿಕೊಂಡು ಮತಯಾಚನೆ ಮಾಡುತ್ತಿದ್ದಾರೆ. ಅಲ್ಲದೇ ಮಾಜಿ ಸಿಎಂ ಸಿದ್ಧರಾಮಯ್ಯ ಅವರನ್ನು ಸಿಎಂ ಮಾಡಬೇಕು ಎಂದು ಎಲ್ಲ ವರ್ಗದ ಜನ ಮತ ಹಾಕುತ್ತಾರೆ ಎನ್ನುವ ವಿಶ್ವಾಸ ಅವರದ್ದು. ಹಾಗೆಯೇ ಜೆಡಿಎಸ್‌ ಅಭ್ಯರ್ಥಿ ಹಾಗೂ ಮಾಜಿ ಶಾಸಕ  ಸಿ.ಬಿ.ಸುರೇಶ್‌ ಬಾಬು ಸ್ಪರ್ಧೆಗಿಳಿದಿದ್ದು ಜನರಿಂದ ಅನುಕಂಪ ಇದೆ. ಜನರೇ ಚುನಾವಣೆಗಾಗಿ ಹಣ ನೀಡುತ್ತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಸಿ.ಬಿ.ಸುರೇಶ್‌ ಬಾಬುರನ್ನು ಗೆಲ್ಲಿಸಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿ ಬಾಬಣ್ಣ ಅವರನ್ನು ಸಚಿವ ಮಾಡಬೇಕು ಎನ್ನುವ ಅಭಿಪ್ರಾಯ ಮತದಾರರಲ್ಲಿ ಇದೆ ಎಂದು ತಿಳಿಸಿದ್ದಾರೆ.

ಜೆ.ಸಿ.ಮಾಧುಸ್ವಾಮಿ ಅವರಿಗೆ ಇದು ಕೊನೇ ಚುನಾವಣೆಯಾಗಿದ್ದು, ಕ್ಷೇತ್ರದಲ್ಲಿ ಸಾವಿರಾರು ಕೋಟಿ ರೂ.,ಗಳ ಅನುದಾನ ತಂದು ಅಭಿವೃದ್ಧಿ ಪಡಿಸಿದ್ದಾರೆ. ನೀರಾವರಿ ಯೋಜನೆಗೆ ಒತ್ತು ನೀಡಿ ಕ್ಷೇತ್ರದ ಕೆರೆಗಳಿಗೆ ನೀರು ಹರಿಸಿದ್ದಾರೆ, ಪಂಚಾಯ ತ್‌ವಾರು ಕೆಲಸ ಮಾಡಿದ್ದಾರೆ, ನಾನು ಮಾಡಿರುವ ಕ್ಷೇತ್ರದ ಅಭಿವೃದ್ಧಿ ಕೆಲಸ ನನ್ನ ಕೈ ಹಿಡಿಯುತ್ತದೆ ಎನ್ನುವ ವಿಶ್ವಾಸ ಅವರದ್ದು.

ಮಾಧುಸ್ವಾಮಿ ಅವರು ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ-ರಾಜ್ಯ ಸರಕಾರ ದಿಂದ ಹೆಚ್ಚು ಅನುದಾನ ತಂದಿರುವುದು ಪ್ಲಸ್‌ ಆಗಿದ್ದರೆ, ಜನರೊಂದಿಗೆ ಬೆರೆಯುವುದಿಲ್ಲ, ಜನರ ಸಮಸ್ಯೆ ಆಲಿಸುವುದಿಲ್ಲ ಎಂಬ ದೂರುಗಳು ಇವೆ. ಸಿ.ಬಿ.ಸುರೇಶ್‌ ಬಾಬು ಅವರು ಜನರೊಂದಿಗೆ ಆತ್ಮೀಯವಾಗಿ ಬೆರೆಯು ವುದು, ಜನರ ಸಮಸ್ಯೆ ಆಲಿಸುತ್ತಾರೆ ಎಂಬ ಪ್ಲಸ್‌ ಪಾಯಿಂಟ್‌ಗಳಿವೆ. ಆದರೆ  ಅಭಿವೃದ್ಧಿಗೆ ಒತ್ತು ನೀಡಲ್ಲ, ಗೆದ್ದರೆ ಬೆಂಗಳೂರಿಗೆ ಹೋಗ್ತಾರೆ, ಎಂಬ ಭಾವನೆಗಳಿರುವುದು ಮೈನಸ್‌. ಕಿರಣ್‌ ಕುಮಾರ್‌ ಅವರಿಗೆ ಬಿಜೆಪಿ ಯಿಂದ ಟಿಕೆಟ್‌ ವಂಚನೆ ಎನ್ನುವ ಅನುಕಂಪ -ಜನರೊಂದಿಗೆ ಬೆರೆಯುವ ಗುಣ ಇದೆ ಎಂಬುದು ಪ್ಲಸ್‌ ಆಗಬಹುದು. ಆದರೆ ಕಾಂಗ್ರೆಸ್‌ ಕಾರ್ಯ ಕರ್ತರು ಒಟ್ಟಿಗೆ ಕೆಲಸ ಮಾಡದೇ ಇರುವುದು ಮೈನಸ್‌ ಆಗಬಹುದು.

~ ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.