IPL 2023 ಲಿಟ್ಟನ್ ದಾಸ್ ಬದಲಿಗೆ ವಿಂಡೀಸ್ ಸ್ಪೋಟಕ ಆಟಗಾರನ ಕರೆತಂದ ಕೋಲ್ಕತ್ತಾ
Team Udayavani, May 4, 2023, 10:47 AM IST
ಕೋಲ್ಕತ್ತಾ: ಅಂಕ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಇದೀಗ ತನ್ನ ಬತ್ತಳಿಕೆಗೆ ಹೊಸ ಅಸ್ತ್ರವೊಂದನ್ನು ಸೇರಿಸಿಕೊಂಡಿದೆ. ಬಾಂಗ್ಲಾ ಆಟಗಾರ ಲಿಟ್ಟನ್ ದಾಸ್ ಬದಲಿಗೆ ವಿಂಡೀಸ್ ಸ್ಫೋಟಕ ಆಟಗಾರನನ್ನು ಕೆಕೆಆರ್ ಕರೆತಂದಿದೆ.
ಎರಡು ಬಾರಿ ಟಿ20 ವಿಶ್ವಕಪ್ ಗೆದ್ದ ವಿಂಡೀಸ್ ತಂಡದ ಸದಸ್ಯನಾಗಿದ್ದ ಜಾನ್ಸನ್ ಚಾರ್ಲ್ಸ್ ಅವರು ಇದೀಗ ಕೆಕೆಆರ್ ಪಾಳಯ ಸೇರಿದ್ದಾರೆ. ಅವರು ತಮ್ಮ 219 ಟಿ20 ಇನ್ನಿಂಗ್ಸ್ಗಳಲ್ಲಿ 179 ರಲ್ಲಿ ಆರಂಭಿಕ ಆಟಗಾರನಾಗಿ ಆಡಿದ್ದಾರೆ. 25.47 ಸರಾಸರಿ ಮತ್ತು 125.72 ರಲ್ಲಿ ಸ್ಟ್ರೈಕ್ ರೇಟ್ ನಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.
ಲಿಟ್ಟನ್ ತನ್ನ ಕುಟುಂಬದಲ್ಲಿ ವೈದ್ಯಕೀಯ ತುರ್ತುಸ್ಥಿತಿಗೆ ಹಾಜರಾಗಲು ಈ ತಿಂಗಳ ಆರಂಭದಲ್ಲಿ ನೈಟ್ ರೈಡರ್ಸ್ ಶಿಬಿರವನ್ನು ತೊರೆದಿದ್ದರು. ಹರಾಜಿನಲ್ಲಿ 50 ಲಕ್ಷಕ್ಕೆ ಖರೀದಿಸಿದ ಅವರು ಐಪಿಎಲ್ 2023 ರಲ್ಲಿ ಕೇವಲ ಒಂದು ಪಂದ್ಯವನ್ನು ಆಡಿದರು. ಇದೀಗ ಚಾರ್ಲ್ಸ್ ಅವರು ಕೂಡಾ 50 ಲಕ್ಷ ರೂ ಗೆ ಕೆಕೆಆರ್ ಪಾಲಾಗಿದ್ದಾರೆ.
ಕೆಕೆಆರ್ ತಂಡವು ಈ ಋತುವಿನಲ್ಲಿ ಆರಂಭಿಕ ಕಾಂಬಿನೇಶನ್ ನಲ್ಲಿ ಸ್ಥಿರತೆಗಾಗಿ ಹೆಣಗಾಡುತ್ತಿದೆ. ಅವರು ಒಂಬತ್ತು ಪಂದ್ಯಗಳಲ್ಲಿ ಆರು ಆರಂಭಿಕ ಸಂಯೋಜನೆಗಳನ್ನು ಪ್ರಯತ್ನ ಮಾಡಿದೆ.
ಪ್ರಸ್ತುತ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿರುವ ನೈಟ್ ರೈಡರ್ಸ್ ಗುರುವಾರ ಸನ್ರೈಸರ್ಸ್ ಹೈದರಾಬಾದ್ ಅನ್ನು ಎದುರಿಸಲಿದೆ. ಪಂಜಾಬ್ ಕಿಂಗ್ಸ್ (ಮೇ 8), ರಾಜಸ್ಥಾನ ರಾಯಲ್ಸ್ (ಮೇ 11), ಚೆನ್ನೈ ಸೂಪರ್ ಕಿಂಗ್ಸ್ (ಮೇ 14) ಮತ್ತು ಲಕ್ನೋ ಸೂಪರ್ ಜೈಂಟ್ಸ್ (ಮೇ 20) ಜೊತೆ ಪಂದ್ಯಗಳನ್ನು ಆಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್: ದ.ಆಫ್ರಿಕಾಗೆ 177 ರನ್ ಅಂತರದ ಸೋಲು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.