ಕಾಂಗ್ರೆಸಿಗರಿಂದ ಕಾರ್ಕಳದ ಗೌರವ ಕೆಡಿಸುವ ಬೆಳವಣಿಗೆ ಒಳ್ಳೆಯದಲ್ಲ:ಸುನಿಲ್‌

ವೈಯಕ್ತಿಕ ಟೀಕೆ ಬಿಟ್ಟು ಕಾರ್ಕಳಕ್ಕೆ ಗೌರವ ತರುವಂತೆ ನಡೆದುಕೊಳ್ಳಲಿ

Team Udayavani, May 4, 2023, 6:04 PM IST

1-suni;

ಕಾರ್ಕಳ: ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಿರುವ ಬೆಂಬಲಿಗರು ಸಾರ್ವಜನಿಕ ಸಭೆ, ವೇದಿಕೆಗಳಲ್ಲಿ,ಸಾಮಾಜಿಕ ಜಾಲತಾಣಗಳಲ್ಲಿ ವಯಕ್ತಿಕ ಟೀಕೆಗಳನ್ನು ಮಾಡುವುದು, ಕೀಳು ಮಟ್ಟದ ಪದ ಪ್ರಯೋಗಿಸುತ್ತಿರುವುದನ್ನು ಮಾಡುತ್ತಿದ್ದಾರೆ. ಈ ಎಲ್ಲ ನಡವಳಿಕೆಗಳು ಅನಾಗರಿಕ ಸಂಸ್ಕೃತಿಯಾಗಿದೆ. ಇಂತಹ ಸಭ್ಯತೆ ಮೀರಿದ ವರ್ತನೆ ಕಾರ್ಕಳದ ಗೌರವ ಕೆಡಿಸುವ ಯತ್ನ ಎಂದು ಬಿಜೆಪಿ ಅಭ್ಯರ್ಥಿ ವಿ.ಸುನಿಲ್‌ಮಾರ್‌ ಹೇಳಿದ್ದಾರೆ.

ಕಾರ್ಕಳದ ಜನ ಗೌರವದಿಂದ ಬದುಕಿ ಬಾಳಿದವರು. ಇಂದಿಗೂ ಅದೇ ಬದುಕನ್ನುಮುಂದವರೆಸುತ್ತಿದ್ದಾರೆ. ಮುಂದೆಯೂ ಅದನ್ನೆ ಬಯಸುವರು. ಗೌರವದ ರಾಜಕಾರಣವನ್ನು ಹಿಂದಿನ ಎಲ್ಲ ಚುನಾವಣೆ ಹಾಗೂ ಕಾಲ ಘಟ್ಟದಲ್ಲಿ ನೋಡಿಕೊಂಡು ಬರಲಾಗಿದೆ. ಆದರೀಗ ಕಾಂಗ್ರೆಸ್ ಅಭ್ಯರ್ಥಿ ಪರವಿರುವ ಕೆಲ ಬೆಂಬಲಿಗರು ರಾಜಕೀಯ , ವಯಕ್ತಿಕ ಲಾಭಕ್ಕಾಗಿ ಸಾರ್ವಜನಿಕ ಸಭೆ ಹಾಗೂ ಸಾಮಾಜಿಕ ಜಾಲತಾಣ ಬಳಸಿಕೊಂಡು ತೀರಾ ಕೆಳ ಮಟ್ಟಕ್ಕೆ ಇಳಿದು ವಯಕ್ತಿಕ ಟೀಕೆ- ಟಿಪ್ಪಣಿಗಳಲ್ಲಿ ತೊಡಗಿಕೊಂಡಿದ್ದಾರೆ. ವಯಕ್ತಿಕ ವಿಚಾರ ಬಳಸಿಕೊಂಡು ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ. ಅಭ್ಯರ್ಥಿ ಬೆಂಬಲಿಗರ ಪದ ಬಳಕೆ, ಪ್ರಚೋದನಕಾರಿ ಹೇಳಿಕೆ, ಸಂದೇಶಗಳು ಎಲ್ಲೆ ಮೀರುತ್ತಿವೆ. ಅವುಗಳು ಕಾರ್ಕಳದ ಗೌರವ, ನಾಗರಿಕ ಸಮಾಜಕ್ಕೆ ಚ್ಯುತಿ ತರುವಂತಿದೆ. ಕಾರ್ಕಳದ ಜನ ಪ್ರೀತಿ ಮತ್ತು ಗೌರವದಿಂದ, ಸೌಹಾರ್ಧತೆಯಿಂದ ಜೀವನ ನಡೆಸಿಕೊಂಡು ಬಂದವರು. ಶಾಂತಿಯ ವಾತಾವರಣ ಇಲ್ಲಿ ಈ ಹಿಂದಿನ ಎಲ್ಲ ಚುನಾವಣೆಗಳಲ್ಲಿ ಮತ್ತು ಅನಂತರದಲ್ಲಿಯೂ ನೆಲೆಯೂರಿತ್ತು. ವಯಕ್ತಿಕ ಟೀಕೆ, ದ್ವೇಷದ ರಾಜಕಾರಣವನ್ನು ಕಾರ್ಕಳದ ನಾಗರಿಕ ಸಮಾಜ ಎಂದೂ ಬಯಸುವುದಿಲ್ಲ. ಇಷ್ಟಪಡುವುದೂ ಇಲ್ಲ. ಅದನ್ನು ಲೆಕ್ಕಕೆೆR ತೆಗೆದುಕೊಳ್ಳುವುದಿಲ್ಲ ಎನ್ನುವ ವಿಶ್ವಾಸವಿದೆ. ಇದರಿಂದ ರಾಜಕೀಯವಾಗಿ ಲಾಭ ಪಡೆಯಬಹುದು ಎನ್ನುವುದು ಕಾಂಗ್ರೆಸ್ಸಿನ ಅಭ್ಯರ್ಥಿ ಹಾಗೂ ಬೆಂಬಲಿಗರ ಹಗಲು ಕನಸು ಎಂದರು.

ಎಲ್ಲೆ ಹೋದರು ಕಾರ್ಕಳ ಹೆಸರು ಬ್ರಾಂಡ್‌ ಆಗಿ ಗೌರವದಿಂದ ಕಾಣುವಂತಾಗಿದೆ. ಕಾರ್ಕಳದ ಬಗ್ಗೆ ಕೇವಲ ಕರಾವಳಿಯಷ್ಟೇ ಅಲ್ಲ. ನಾಡಿನೆಲ್ಲೆಡೆ ಅಪಾರ ಗೌರವ ಅಭಿಮಾನವಿದೆ. ಕಾರ್ಕಳದ ಹೆಸರು ಇದೇ ಕಾರಣಕ್ಕೆ ವಿಶ್ವದೆಲ್ಲೆಡೆ ವಿಸ್ತರಿಸಿದೆ. ಎಲ್ಲೇ ಹೋದರೂ ಜನ ಕಾರ್ಕಳದ ಬಗ್ಗೆ ಗೌರವದಿಂದ ಮಾತನಾಡುವಂತಹ ವಾತಾವರಣ ಇತ್ತೀಚಿನ ಅಭಿವೃದ್ದಿ , ಪ್ರವಾಸಿ ತಾಣಗಳ ಪ್ರಗತಿಗಳಿಂದ ನಿರ್ಮಾಣವಾಗಿದೆ. ಕಾರ್ಕಳ ಹೆಸರೇ ಬ್ರಾಂಡ್ ಆಗಿ ಜಗತ್ತಿನೆಲ್ಲೆಡೆ ಗಮನ ಸೆಳೆಯುತ್ತಿದೆ. ಎಲ್ಲೆ ಹೋದರೂ ಕಾರ್ಕಳದವರಾ ? ಎನ್ನುವಷ್ಟರ ಮಟ್ಟಿಗೆ ಕಾರ್ಕಳಕ್ಕೆ ಗೌರವ ತಂದು ಕೊಡುವ ಕೆಲಸವಾಗಿದೆ ಎಂದಿದ್ದಾರೆ.

ವೈಯಕ್ತಿಕ ಟೀಕೆ ಬಿಟ್ಟು ಕಾರ್ಕಳಕ್ಕೆ ಗೌರವ ತರುವಂತೆ ನಡೆದುಕೊಳ್ಳಲಿ
ಅಭಿವೃದ್ಧಿ ಸಂಗತಿಗಳ ಬಗ್ಗೆ ಮಾತನಾಡುವ ಬದಲಿ ಕಾಂಗ್ರೆಸ್ಸಿನ ಅಭ್ಯರ್ಥಿಯ ಬೆಂಬಲಿಗರು ಕಾರ್ಕಳದ ಗೌರವ ಕೆಡಿಸುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಚುನಾವಣೆ ಮೇ 10ಕ್ಕೆ ಮುಗಿಯಬಹುದು. ಬಳಿಕವೂ ಇಲ್ಲಿನವರು ಸಹಬಾಳ್ವೆಯಿಂದ ಒಳ್ಳೆಯ ವಾತಾವರಣದಲ್ಲಿ ಗೌರವದಿಂದ ಬದುಕಬೇಕಿದೆ. ಕಾಂಗ್ರೆಸ್ಸಿಗರು ವೈಯಕ್ತಿಕ ಟೀಕೆಗಳ ಬದಲಿ ಕಾರ್ಕಳಕ್ಕೆ ಗೌರವ ತರುವ ರೀತಿ ವರ್ತಿಸುವುದನ್ನು ರೂಢಿಸಿಕೊಳ್ಳಲಿ, ಒಳ್ಳೆಯ ವಿಚಾರದ ಬಗ್ಗೆ ಚರ್ಚೆಗಳನ್ನು ಮಾಡುವ ಕಡೆ ಗಮನ ಹರಿಸಲಿ ಎಂದವರು ಹೇಳಿದ್ದಾರೆ.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.