ಚುನಾವಣೆ ಎಫೆಕ್ಟ್… ಈ ವಾರ ಸಿನಿಮಾ ರಿಲೀಸ್‌ ಇಲ್ಲ!


Team Udayavani, May 5, 2023, 10:50 AM IST

ಚುನಾವಣೆ ಎಫೆಕ್ಟ್… ಈ ವಾರ ಸಿನಿಮಾ ರಿಲೀಸ್‌ ಇಲ್ಲ!

ಪ್ರತಿ ಶುಕ್ರವಾರ ಬಂತೆಂದರೆ, ಸಹಜವಾಗಿಯೇ ಸಿನಿಪ್ರಿಯರು ಮತ್ತು ಸಿನಿಮಾ ಮಂದಿಯ ಚಿತ್ತ ಬಿಡುಗಡೆಯಾಗುವ ಸಿನಿಮಾಗಳ ಕಡೆಗೆ ನೆಟ್ಟಿರುತ್ತದೆ. ಅದರಲ್ಲೂ ಕೋವಿಡ್‌ ಲಾಕ್‌ಡೌನ್‌ ಬಳಿಕ ಕನ್ನಡ ಚಿತ್ರರಂಗದಲ್ಲಿ ಪ್ರತಿವಾರ ಕನಿಷ್ಟ ಮೂರ್‍ನಾಲ್ಕು ಸಿನಿಮಾಗಳಾದರೂ ತೆರೆಕಾಣುವುದು ಸರ್ವೇ ಸಾಮಾನ್ಯ ಎಂಬ ವಾತಾವರಣ ನಿರ್ಮಾಣವಾಗಿದೆ. ಕೆಲವೊಮ್ಮೆ ಸಿನಿಮಾಗಳ ಬಿಡುಗಡೆಯ ಈ ಸಂಖ್ಯೆ ಎರಡಂಕಿಯನ್ನು ದಾಟಿರುವ ಉದಾಹರಣೆಗಳೂ ಸಾಕಷ್ಟಿದೆ. ಹೀಗಾಗಿ ಚಂದನವನಕ್ಕೆ ಹೊಸ ರಂಗು ತರುವ ಶುಕ್ರವಾರದ ಕಡೆಗೆ ಬಹುತೇಕ ಚಿತ್ತ ನೆಟ್ಟಿರುತ್ತದೆ. ಆದರೆ ಕಳೆದ ಎರಡು ವಾರಗಳಿಂದ ಸ್ಯಾಂಡಲ್‌ವುಡ್‌ನ‌ಲ್ಲಿ ಸಿನಿಮಾಗಳ ಬಿಡುಗಡೆಯ ರಂಗು ಕಾಣುತ್ತಿಲ್ಲ. ಅದಕ್ಕೆ ಕಾರಣ, ದಿನದಿಂದ ದಿನಕ್ಕೆ ಏರುತ್ತಿರುವ ವಿಧಾನಸಭಾ ಚುನಾವಣೆಯ ಕಾವು ಒಂದೆಡೆಯಾದರೆ, ಮತ್ತೂಂದೆಡೆ ಐಪಿಎಲ್‌ ಅಬ್ಬರ. ಈ ವಾರ ಕನ್ನಡದಿಂದ ಯಾವುದೇ ಸಿನಿಮಾ ಬಿಡುಗಡೆಯಾಗುತ್ತಿಲ್ಲ. ಆದರೆ, ಮುಂದಿನ ವಾರ ಒಂದಷ್ಟು ಸಿನಿಮಾಗಳು ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿವೆ.

ಹೌದು, ಏಪ್ರಿಲ್‌ ಕೊನೆಯ ವಾರದಿಂದಲೇ ಚುನಾವಣಾ ಪ್ರಕ್ರಿಯೆ ಜೋರಾಗಿರುವುದರಿಂದ ರಾಜಕೀಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಸಾಲು ಸಾಲು ಸಮಾವೇಶಗಳು, ರಾಜಕೀಯ ನಾಯಕರ ಬೃಹತ್‌ ರ್ಯಾಲಿಗಳು, ವಿವಿಧ ರೀತಿಯ ಬಹಿರಂಗ ಪ್ರಚಾರಗಳಿಂದ ರಾಜಕೀಯ ಪಕ್ಷಗಳು ಜನರನ್ನು ತಮ್ಮತ್ತ ಸೆಳೆಯುವ ಕಸರತ್ತು ಮಾಡುತ್ತಿವೆ. ಮತ್ತೂಂದೆಡೆ, ಐಪಿಎಲ್ ಪಂದ್ಯಾವಳಿಗಳತ್ತಲೂ ಜನ ಮುಖ ಮಾಡುತ್ತಿರುವುದರಿಂದ ಸಹಜವಾಗಿಯೇ ಈ ಸಮಯದಲ್ಲಿ ತಮ್ಮ ಸಿನಿಮಾಗಳನ್ನು ಬಿಡುಗಡೆ ಮಾಡಿದರೆ, ಪ್ರೇಕ್ಷಕರು ಥಿಯೇಟರ್‌ಗೆ ಬರುತ್ತಾರಾ? ಎಂಬ ಆತಂಕ ನಿರ್ಮಾಪಕರದ್ದು. ಹೀಗಾಗಿ ಸದ್ಯಕ್ಕೆ ಚುನಾವಣಾ ಫ‌ಲಿತಾಂಶ ಪ್ರಕಟವಾಗುವವರೆಗೂ ಕಾದು ನೋಡುವ ತಂತ್ರಕ್ಕೆ ಶರಣಾಗಿರುವ ಅನೇಕ ನಿರ್ಮಾಪಕರು ಮೇ. 13ರ ನಂತರವೇ ತಮ್ಮ ಸಿನಿಮಾವನ್ನು ಥಿಯೇಟರ್‌ಗೆ ತರುವ ಯೋಚನೆಯಲ್ಲಿದ್ದಾರೆ.

ಹೀಗಾಗಿ ಏಪ್ರಿಲ್‌ ಕೊನೆಯ ಶುಕ್ರವಾರದಿಂದಲೇ ಕನ್ನಡ ಚಿತ್ರರಂಗದಲ್ಲಿ ಸಿನಿಮಾಗಳ ಬಿಡುಗಡೆಯ ಸಂಖ್ಯೆಯಲ್ಲಿ ನಿಧಾನವಾಗಿ ಇಳಿಕೆಯಾಗಿದೆ. ಏಪ್ರಿಲ್‌ 28 ರಂದು (ಶುಕ್ರವಾರ) ಕನ್ನಡದಲ್ಲಿ ವಿಜಯ ರಾಘವೇಂದ್ರ ಅಭಿನಯದ “ರಾಘು’ ಮತ್ತು ಜಗ್ಗೇಶ್‌ ಅಭಿನಯದ “ರಾಘವೇಂದ್ರ ಸ್ಟೋರ್’ ಎಂಬ ಎರಡು ಸಿನಿಮಾಗಳು ಮಾತ್ರ ತೆರೆಕಂಡಿದ್ದವು. ಇನ್ನು ಸದ್ಯಕ್ಕೆ ಮೇ ತಿಂಗಳ ಮೊದಲ ಶುಕ್ರವಾರ (ಮೇ. 5) ಯಾವುದೇ ಸಿನಿಮಾಗಳು ಕೂಡ ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿಲ್ಲ. ಹೀಗಾಗಿ ಈ ಶುಕ್ರವಾರ ಕನ್ನಡದಲ್ಲಿ ಯಾವುದೇ ಸಿನಿಮಾಗಳು ತೆರೆಕಾಣುವ ಸೂಚನೆಗಳು ಕಾಣಿಸುತ್ತಿಲ್ಲ. ಈಗಾಗಲೇ ಮೇ ಮೊದಲ ವಾರ ಅಥವಾ ಎರಡನೇ ವಾರ ತೆರೆಗೆ ಬರಬೇಕು ಎಂದುಕೊಂಡಿದ್ದ ಅನೇಕ ಸಿನಿಮಾಗಳು ಮುಂದಕ್ಕೆ ಹೋಗಿವೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.