ಲಕ್ಷ್ಮೀ ಹೆಬ್ಬಾಳಕರ ಪರ ಶಿವರಾಜಕುಮಾರ್ ರೋಡ್ ಶೋಗೆ ಜನಸಾಗರ

ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಿ ದರ್ಶನ ಪಡೆದ ಶಿವಣ್ಣ ದಂಪತಿ

Team Udayavani, May 6, 2023, 10:25 PM IST

1-shu

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಪರ ಪ್ರಚಾರಕ್ಕೆ ಆಗಮಿಸಿದ್ದ ಹ್ಯಾಟ್ರಿಕ್‌ ಹಿರೋ ಶಿವರಾಜಕುಮಾರ ಹಾಗೂ ಪತ್ನಿ ಗೀತಾ ಅವರೊಂದಿಗೆ ಶನಿವಾರ ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದು ನಂತರ ವಿವಿಧ ಕಡೆಗೆ ರೋಡ್ ಶೋ ನಡೆಸಿದರು.

ಸುಳೇಭಾವಿಯಲ್ಲಿ ಸಂಜೆ 4 ಗಂಟೆಯಿಂದಲೇ ಜನರು ಶಿವಣ್ಣ ಅವರಿಗಾಗಿ ಕಾದು ಕುಳಿತಿದ್ದರು. ಜನಸಾಗರವೇ ಹರಿದು ಬಂದು ಶಿವಣ್ಣನನ್ನು ನೋಡಿ ಕಣ್ತುಂಬಿಕೊಂಡರು.

ಅಲ್ಲಿಂದ ಶಿಂಧೋಳ್ಳಿಗೆ ಆಗಮಿಸಿ ರೋಡ್ ಶೋ ನಡೆಸಿದರು. ರೋಡ್ ಶೋ ವೇಳೆ ನಾನಿರುವುದೇ ನಿಮಗಾಗಿ…. ಬೊಂಬೆ ಹೇಳುತೈತಿ… ಯಾರೇ ಕೂಗಾಡಲಿ ಹಾಡು ಹೇಳು ಮೂಲಕ ಅಭಿಮಾನಿಗಳ ಉತ್ಸಾಹ ಹೆಚ್ಚಿಸಿದರು.

ಈ ವೇಳೆ ಮಾತನಾಡಿದ ಶಿವಣ್ಣ, ದೇವರ ಆಶಿರ್ವಾದ, ನಿಮ್ಮೆಲ್ಲರ ಆಶಿರ್ವಾದದಿಂದ ಲಕ್ಷ್ಮೀ ಹೆಬ್ಬಾಳಕರ ಗೆಲ್ಲುವುದು ಖಚಿತ. ಅವರು ಈಗಾಗಲೇ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡುತ್ತಾರೆ. ಅವರಿಗೆ ನಿಮ್ಮ ಆಶಿರ್ವಾದ ಹೀಗೆಯೇ ಇರಲಿ ಎಂದು ಕೋರಿದರು.

ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ, ಇನ್ನು ನಾಲ್ಕೇ ದಿನದಲ್ಲಿ ಚುನಾವಣೆ ನಡೆಯಲಿದೆ. ನನಗೆ ಆಶಿರ್ವಾದ ಮಾಡಿ, ನಾವೆಲ್ಲರೂ ಸೇರಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸೋಣ ಎಂದು ಹೇಳಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾರಹಾಕಿ ಗೌರವಿಸಿದರು. ನಂತರ ಹೊನ್ನಿಹಾಳದಲ್ಲಿಯೂ ಭಾರೀ ಜನಸ್ತೋಮದ ಮಧ್ಯೆ ಶಿವರಾಜಕುಮಾರ ಅವರಿಂದ ರೋಡ್ ಶೋ ನಡೆಯಿತು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮುಖಂಡರಾದ ಮಹೇಶ ಸುಗಣೆನ್ನವರ, ಬಸನಗೌಡ ಹುಂಕರಿಪಾಟೀಲ, ಮೃಣಾಲ್ ಹೆಬ್ಬಾಳಕರ, ಶಂಕರಗೌಡ ಪಾಟೀಲ, ನಾಗೇಶ ದೇಸಾಯಿ, ಗಂಗಣ್ಣ ಕಲ್ಲೂರ, ಬಸವರಾಜ ಮ್ಯಾಗೋಟಿ, ನೀಲೇಶ ಚಂದಗಡಕರ, ರಜತ ಉಳ್ಳಾಗಡ್ಡಿಮಠ ಇತರರು ಇದ್ದರು.

ತಂಗಿ ನಿನ್ನ ನಗುವಲ್ಲೊಂದು ಪುಟ್ಟ ನಗುವಿದೆ…ಹಾಡಿನ ಮೂಲಕ ಲಕ್ಷ್ಮೀ ಗೆ ಶಿವಣ್ಣ ಹಾರೈಕೆ

ಶಿವಣ್ಣ ಶ್ರೀ ಮಹಾಲಕ್ಷ್ಮೀ ದೇವಿಗೆ ಪೂಜೆ ಸಲ್ಲಿಸಿದರು. ಸುಳೇಭಾವಿಗೆ ಶಿವರಾಜ ಕುಮಾರ ಆಗಮಿಸುತ್ತಿದ್ದಂತೆ ಸೇರಿದ್ದ ಜನಸ್ತೋಮ ಶಿವರಾಜ ಕುಮಾರ ಪರ ಹಾಗೂ ಲಕ್ಷ್ಮೀ ಹೆಬ್ಬಾಳಕರ ಪರ ಘೋಷಣೆ ಕೂಗಿದರು. ಶಿವಣ್ಣಗೆ ಜಯವಾಗಲಿ, ಕಾಂಗ್ರೆಸ್ ಗೆ ಜಯವಾಗಲಿ ಎಂಬ ಘೋಷಣೆ ಮೊಳಗಿತು. ನಂತರ ಶಿವಣ್ಣ, ತಂಗಿ ನಿನ್ನ ನಗುವಲ್ಲೊಂದು ಪುಟ್ಟ ನಗುವಿದೆ… ಆ ನಗುವಿಗಾಗಿ ತವರು ಕಾದಿದೆ ಎಂಬ ಹಾಡು ಹಾಡುವ ಮೂಲಕ‌ ಜನರನ್ನು ರಂಜಿಸಿದರು. ಈ‌ ಹಾಡಿನ ಮೂಲಕವೇ ಹೆಬ್ಬಾಳಕರ ಅವರನ್ನು ಹಾರೈಸಿದರು. ಹೆಣ್ಮಕ್ಕಳೇ‌ ಸ್ಟ್ರಾಂಗು ಗುರು ಎಂದು ಹೆಬ್ಬಾಳಕರ ಪರ ಮತಯಾಚಿಸಿದರು.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.