ಸರಕಾರಿ ಜಾಗದಲ್ಲಿ ಮನೆಕಟ್ಟಿರುವ ಬಡವರ ಮನೆ ಬಾಗಿಲಿಗೆ ಹಕ್ಕು ಪತ್ರ: ಸೊರಕೆ

ಪೆರ್ಡೂರು :ಮನೆ ಮನೆ ಮತಯಾಚನೆ, ಚುನಾವಣಾ ಪ್ರಚಾರ ಸಭೆ

Team Udayavani, May 7, 2023, 3:26 PM IST

1-dsfdfds

ಪೆರ್ಡೂರು: ಕಾಂಗ್ರೆಸ್‌ ಬಡವರ ಪಕ್ಷವಾಗಿದ್ದು ಹಿಂದಿನಿಂದಲೂ ಬಡವರಿಗೆ ಮನೆ, ಹಕ್ಕುಪತ್ರಗಳನ್ನು ನೀಡುವ ಕೆಲಸ ಮಾಡಿಕೊಂಡು ಬಂದಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿದರೆ ಸರಕಾರಿ ಜಾಗದಲ್ಲಿ ಬಹಳಷ್ಟು ವರ್ಷಗಳಿಂದ ಮನೆ ಮಾಡಿ ಕೂತವರಿಗೆ ಯಾರಿಗೆಲ್ಲಾ ಹಕ್ಕುಪತ್ರಗಳು ಸಿಕ್ಕಿಲ್ಲವೋ ಅವರಿಗೆ ಕೂತಲ್ಲಿಗೇ, ಅದೇ ಜಾಗಕ್ಕೆ ಹಕ್ಕುಪತ್ರ ಒದಗಿಸುವ ಮಹತ್ಕಾರ್ಯಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಮಾಜಿ ಸಚಿವ, ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಮಾರ್‌ ಸೊರಕೆ ಹೇಳಿದ್ದಾರೆ.

ಪೆರ್ಡೂರು ಬುಕ್ಕಿಗುಡ್ಡೆಯ ಕೈರ್‌ ಪ್ರದೇಶದಲ್ಲಿ ಮನೆ ಮನೆ ಚುನಾವಣಾ ಪ್ರಚಾರ, ಪೆರ್ಡೂರು ವ್ಯಾಪ್ತಿಯ ಹತ್ರಿಬೆ„ಲು ವಿಜಯಲಕ್ಷ್ಮೀ ಕ್ಯಾಶ್ಯೂ ಇಂಡಸ್ಟ್ರೀಸ್‌ ಮತ್ತು ಬುಕ್ಕಿಗುಡ್ಡೆ ಎಪಿಎಂ ಕ್ಯಾಶ್ಯೂ ಇಂಡಸ್ಟ್ರೀಸ್‌ಗೆ ಭೇಟಿ ಮತಯಾಚನೆ ನಡೆಸಿದ ಸಂದರ್ಭ ಅವರು ಮಾತನಾಡಿದರು.
ಸರಕಾರಿ ಜಾಗದಲ್ಲಿ ಮನೆ ಮಾಡಿದ್ದ ಬಡವರನ್ನು ಒಕ್ಕಲೆಬ್ಬಿಸಿದ್ದು ಬಿಜೆಪಿ ಸಾಧನೆ : ಸರಕಾರಿ ಜಾಗದಲ್ಲಿ ಕೂತ ಬಡವರನ್ನು ಎಬ್ಬಿಸಿ ಬುಲ್ಡೋಜರ್‌ ಓಡಿಸಿ ಒಕ್ಕಲೆಬ್ಬಿಸುವ ದುಸ್ಸಾಹಸಕ್ಕೆ ಬಿಜೆಪಿ ಕೈ ಹಾಕಿದೆ. ಕಳೆದ 5 ವರ್ಷದಲ್ಲಿ ಬಿಜೆಪಿ ಮಾಡಿರುವ ಸಾಧನೆಗಳಲ್ಲಿ ಇದು ಕೂಡಾ ಒಂದಾಗಿದೆ. ಕಾಂಗ್ರೆಸ್‌ ಇಂದಿರಾ ಗಾಂಧಿ ಕಾಲದಿಂದಲೂ ಡಿಕ್ಲರೇಷನ್‌ ಕಾನೂನು ಮೂಲಕ ಭೂಮಿ ನೀಡುವ ಮಹತ್ಕಾರ್ಯವನ್ನು ನಡೆಸಿಕೊಂಡು ಬಂದಿದೆ. ಮುಂದೆ ಕೂಡಾ ಬಡವರು ಸರಕಾರಿ ಜಾಗದಲ್ಲಿ ಕೂತಲ್ಲಿ, ಅದೇ ಸ್ಥಳದಲ್ಲೇ ಹಕ್ಕು ಪತ್ರ ನೀಡುವ ಕೆಲಸವನ್ನು ಮಾಡಲಾಗುವುದು ಅಂತಾ ವಿನಯ ಕುಮಾರ್‌ ಸೊರಕೆ ಹೇಳಿದರು.

ಪಕ್ಷದ ಪ್ರಮುಖರಾದ ಸಂತೋಷ್‌ ಕುಲಾಲ್‌, ದಿನೇಶ್‌ ಪೂಜಾರಿ, ಶೋಭಾ, ರಾಮದಾಸ್‌, ಹರೀಶ್‌, ರಾಮ ಕುಲಾಲ್‌, ರಘುನಾಥ್‌ ನಾಯ್ಕ, ಸುಂದರ, ರಾಘವ ಶೆಟ್ಟಿ, ಶರತ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ವಿಶ್ವಕರ್ಮ ಸಮುದಾಯಕ್ಕೂ ಕಾಂಗ್ರೆಸ್‌ನಲ್ಲಿ ಪ್ರಾತಿನಿಧ್ಯ
ಶಿಲ್ಪಕಲೆ ಭಾರತದ ಪ್ರಾಚೀನ ಕಲೆಗಳಲ್ಲಿ ಒಂದಾಗಿದೆ. ವಿಶ್ವಕರ್ಮ ಜನಾಂಗದವರು ಈ ಕಲೆಯನ್ನು ಪ್ರಾಚೀನವಾಗಿ ಆರಾಧಿಸಿಕೊಂಡು ಬಂದಿದ್ದಾರೆ. ಕಲಾರಾಧನೆಯ ವೃತ್ತಿಯನ್ನು ಅವಲಂಭಿಸಿಕೊಂಡು ಬಂದಿರುವ ವಿಶ್ವಕರ್ಮ ಜನಾಂಗಕ್ಕೆ ಈವರೆಗೂ ಸಮರ್ಪಕ ರಾಜಕೀಯ ಪ್ರಾತಿನಿಧ್ಯ ದೊರಕಿಸಿಕೊಡಲು ಸಾಧ್ಯಗಾವದೇ ಇರುವುದಕ್ಕೆ ವಿಷಾಧವಿದೆ. ಈ ಬಾರಿ ಇತರ ಸಮುದಾಯದ ಜೊತೆಗೆ ವಿಶ್ವಕರ್ಮ ಜನಾಂಗಕ್ಕೂ ವಿಶೇಷ ಪ್ರಾತಿನಿಧ್ಯ ನೀಡಲಾಗುವುದು ಮತ್ತು ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಕಾಪು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಮಾರ್‌ ಸೊರಕೆ ಹೇಳಿದ್ದಾರೆ.

ಪೆರ್ಡೂರು ಬುಕ್ಕಿಗುಡ್ಡೆ ಕೈರ್‌ ವಿಶ್ವಕರ್ಮ ಸಭಾಭವನದ ಸಮೀಪ ನಡೆದ ಪ್ರಚಾರ ಸಭೆಯಲ್ಲಿ ವಿಶ್ವಕರ್ಮ ಸಮಾಜದ ಬಾಂಧವರನ್ನುದ್ದೇಶಿಸಿ ಅವರು ಮಾತನಾಡಿದರು.

ಹಿಂದಿನ ಬಿಜೆಪಿ ಸರಕಾರ ವಿಶ್ವಕರ್ಮ ಸಮಾಜದವರನ್ನು ಓಟ್‌ ಬ್ಯಾಂಕ್‌ ಆಗಿ ಮಾತ್ರ ಬಳಸಿಕೊಂಡಿದೆ. ಬಿಜೆಪಿ ವಿಶ್ವಕರ್ಮರಿಗೆ ರಾಜಕೀಯ ಪ್ರಾತಿನಿಧ್ಯ ಕೊಡುತ್ತೇವೆ, ಅನುದಾನವನ್ನು ಕೊಡುತ್ತೇವೆ ಎಂದು ಪ್ರತೀ ಚುನಾವಣೆಯಲ್ಲೂ ಹೇಳಿಕೊಂಡು ಬರುತ್ತಿದೆ. ನಾನು ಶಾಸಕನಾಗಿದ್ದ ಅವಧಿಯಲ್ಲಿ ಆನೆಗುಂದಿ ಮಹಾಸಂಸ್ಥಾನಕ್ಕೆ ಸರಕಾರದ ಮೂಲಕ 50 ಲಕ್ಷ ರೂಪಾಯಿ ಅನುದಾನವನ್ನು ದೊರಕಿಸಿಕೊಟ್ಟಿದ್ದೇನೆ. ಈ ಬಾರಿ ಸಾಸಕನಾಗಿ ಆಯ್ಕೆಯಾದಲ್ಲಿ ಇನ್ನೂ ಬಹಳಷ್ಟು ಬೇಡಿಕೆಗಳನ್ನು ಈಡೇರಿಸುವುದರ ಜತೆಗೆ ಇತರ ಸಮುದಾಯಗಳಂತೆ ವಿಶ್ವಕರ್ಮ ಸಮುದಾಯಕ್ಕೂ ರಾಜಕೀಯ ಸಹಿತ ಎಲ್ಲಾ ಪ್ರಾತಿನಿಧ್ಯ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು.

ಕಾಂಗ್ರೆಸ್‌ ಪಕ್ಷದ ಮುಖಂಡರ ಸಹಿತವಾಗಿ ಸ್ಥಳೀಯ ವಿಶ್ವಕರ್ಮ ಮುಖಂಡರಾದ ಉಪೇಂದ್ರ ಆಚಾರ್‌, ವೆಂಕಟರಮಣ ಆಚಾರ್‌, ಭಾಸ್ಕರ ಆಚಾರ್‌ ಮೊದಲಾದವರು ಉಪಸ್ಥಿತರಿದ್ದರು.

ಧರ್ಮದ ವಿಚಾರವನ್ನು ರಾಜಕೀಯದ ಜೊತೆಗೆ ಬೆರೆಸುವುದು ಸರಿಯಲ್ಲ : ವಿನಯ್‌ ಕುಮಾರ್‌ ಸೊರಕೆ
ಕಾಪು ಕ್ಷೇತ್ರದಲ್ಲಿ ಇಂದಿಗೂ ಕಾಂಗ್ರೆಸ್‌ ಪಕ್ಷ ಬಲಿಷ್ಠವಾಗಿದೆ. ಕಾಪು ಕ್ಷೇತ್ರದ ಅಭಿವೃದ್ಧಿಗಾಗಿ ನಾವು 2013ರಲ್ಲೇ ಮುನ್ನುಡಿ ಬರೆದಿದ್ದು ನಮ್ಮ ಅವಧಿಯ ಐದು ವರ್ಷಗಳಲ್ಲಿ ನಡೆಸಿರುವ ಅಭಿವೃದ್ಧಿ ಯೋಜನೆಗಳ ಸಾಕ್ಷಿಗುಡ್ಡೆಗಳು ಜನತೆಯ ಮುಂದಿವೆ. ಅತಿಯಾದ ಬೆಲೆಯೇರಿಕೆಯಿಂದಾಗಿ ಜನಜೀವನ ತತ್ತರಿಸಿ ಹೋಗಿದೆ. ನಾವು ಅಭಿವೃದ್ಧಿ ಮತ್ತು ಬೆಲೆಯೇರಿಕೆ ಬಗ್ಗೆ ಮಾತನಾಡಿದರೆ ಬಿಜೆಪಿ ಜಾತಿ, ಧರ್ಮದ ಬಗ್ಗೆ ಮಾತನಾಡಿ ಜನರನ್ನು ಹಾದಿ ತಪ್ಪಿಸುತ್ತಿದೆ. ಬಿಜೆಪಿಯವರು ಧರ್ಮದ ವಿಚಾರವನ್ನು ರಾಜಕೀಯದ ಜೊತೆಗೆ ಬೆರೆಸುವುದು ಸರಿಯಲ್ಲ. ಬಿಜೆಪಿಯವರ ರಾಜಕೀಯ ಕುತಂತ್ರಗಳಿಗೆ ಮತದಾರರೇ ಸೂಕ್ತ ಉತ್ತರ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ವಿನಯ್‌ ಕುಮಾರ್‌ ಸೊರಕೆ ಹೇಳಿದ್ದಾರೆ.

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.