![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 8, 2023, 6:10 AM IST
ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಪರಿಣಾಮ ಮೆಲ್ಕಾರ್ನಲ್ಲಿ ಪದೇ ಪದೆ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಹೆದ್ದಾರಿಯಲ್ಲಿ ವಾಹನ ಸಂಚಾರ ಹೆಚ್ಚಿದ್ದ ಪರಿಣಾಮ ರವಿವಾರ ಕೂಡ ವಾಹನಗಳು ಹೆದ್ದಾರಿಯ ಎರಡೂ ಬದಿಗಳಲ್ಲೂ ಸರದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಉಂಟಾಗಿತ್ತು.
ರವಿವಾರ ರಜಾ ದಿನವಾದರೂ ಸಮಾರಂಭಗಳು ಹೆಚ್ಚಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರ ಕೂಡ ಅಧಿಕವಿತ್ತು. ಮೆಲ್ಕಾರ್ ಜಂಕ್ಷನ್ ಪ್ರದೇಶದಲ್ಲಿ ಮುಡಿಪು ರಸ್ತೆಯೂ ಹೆದ್ದಾರಿಯನ್ನು ಸೇರುವುದರಿಂದ ವಾಹನಗಳು ಅಡ್ಡಾದಿಡ್ಡಿ ಸಂಚರಿಸಿ ಆಗಾಗ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.
ಮೆಲ್ಕಾರ್ನಲ್ಲಿ ಅಂಡರ್ ಪಾಸ್ ನಿರ್ಮಾಣ ಪ್ರಗತಿಯಲ್ಲಿದ್ದು, ಪ್ರಸ್ತುತ ಮುಖ್ಯಹೆದ್ದಾರಿಯ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶವಿದೆ. ಅದು ಕಿರಿದಾಗಿರುವ ಪರಿಣಾಮ ವಾಹನಗಳು ನಿಧಾನಕ್ಕೆ ಸಾಗುತ್ತಿವೆ. ಜತೆಗೆ ಹೆದ್ದಾರಿಯ ಎರಡೂ ಬದಿಗಳಲ್ಲೂ ಬಸ್ಗಳ ನಿಲುಗಡೆಗೆ ಸರಿಯಾದ ವ್ಯವಸ್ಥೆ ಇಲ್ಲದೆ ಸರ್ವೀಸ್ ರಸ್ತೆಯಲ್ಲೇ ನಿಂತು ಪ್ರಯಾಣಿಕರನ್ನು ಇಳಿಸಬೇಕಾದ ಸ್ಥಿತಿ ಇದೆ. ಹೀಗಾಗಿ ಒಮ್ಮೆ ಟ್ರಾಫಿಕ್ ಜಾಮ್ ಉಂಟಾದರೆ ಬಳಿಕ ಕೆಲವು ತಾಸುಗಳ ಕಾಲ ಅದು ಮುಂದುವರಿದು ತೊಂದರೆ ಅನುಭವಿಸಬೇಕಾದ ಸ್ಥಿತಿ ನಿರ್ಮಾಣವಾಗುತ್ತದೆ.
ಸಂಚಾರ ಪೊಲೀಸರು ಸ್ಥಳದಲ್ಲಿದ್ದು, ವಾಹನಗಳ ಸರಾಗ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸಿದರು. ಆದರೂ ಟ್ರಾಫಿಕ್ ಜಾಮ್ ಮುಂದುವರಿದಿತ್ತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.