ನಗರದಲ್ಲಿ ಉಕ್ಕಿ ಹರಿಯುವ ಮ್ಯಾನ್‌ಹೋಲ್‌ಗ‌ಳಿಗೆ ಮುಕ್ತಿ ನೀಡಿ

ಪ್ರತೀ ಮಳೆಗಾಲದಲ್ಲಿ ಈ ಸಮಸ್ಯೆ ಸಾಮಾನ್ಯ

Team Udayavani, May 8, 2023, 2:40 PM IST

ನಗರದಲ್ಲಿ ಉಕ್ಕಿ ಹರಿಯುವ ಮ್ಯಾನ್‌ಹೋಲ್‌ಗ‌ಳಿಗೆ ಮುಕ್ತಿ ನೀಡಿ

ಮಹಾನಗರ: ನಗರದಲ್ಲಿ ಮಳೆಗಾಲದಲ್ಲಿ ಒಳಚರಂಡಿ ಮ್ಯಾನ್‌ಹೋಲ್‌ಗ‌ಳಲ್ಲಿ ಕೊಳಚೆ ನೀರು ಉಕ್ಕಿ ಹರಿ ಯುವ ಸಮಸ್ಯೆ ಸಾಮಾನ್ಯವಾಗಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಪಾಲಿಕೆ ಈಗಿನಿಂದಲೇ ಕ್ರಮ ವಹಿಸಬೇಕಾದ ಅಗತ್ಯವಿದೆ.

ಪ್ರತಿ ವರ್ಷ ಮಳೆಗಾಲ ಬಂದರೆ ನಗರದ ತಗ್ಗು ಪ್ರದೇಶಗಳೂ ಸಹಿತ ನಗರದ ವಿವಿಧೆಡೆ ಒಳಚರಂಡಿ ಮ್ಯಾನ್‌ಹೋಲ್‌ಗ‌ಳು ಉಕ್ಕಿ ಹರಿ ಯುತ್ತವೆ. ಪಾಲಿಕೆ ವತಿಯಿಂದ ಮುಂಗಾರಿಗೆ ಸಿದ್ಧಗೊಳ್ಳು ನಡೆಸುವ ರಾಜಕಾಲುವೆ, ತೋಡುಗಳ ಹೂಳು ತೆರವು ಕಾರ್ಯಾಚರಣೆಯಂತೆಯೇ ಒಳಚರಂಡಿಗೆ ಸಂಬಂಧಿಸಿದ ಕೆಲಸಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ.

ಪ್ರಸ್ತುತ ಒಂದೆರಡು ಬಾರಿ ನಗರ ವ್ಯಾಪ್ತಿಯ ಕೆಲವೆಡೆ ಸಾಮಾನ್ಯ ಮಳೆ ಸುರಿದಿದೆ. ಎರಡು ದಿನಗಳ ಹಿಂದೆ ಸುರಿದ ಮಳೆಗೆ ಕೊಡಿಯಾಲಬೈಲು ವ್ಯಾಪ್ತಿಯಲ್ಲಿ ಒಳಚರಂಡಿಯ ಕೊಳಚೆ ನೀರು ಮ್ಯಾನ್‌ಹೋಲ್‌ಗ‌ಳ ಮೂಲಕ ಹೊರಗೆ ಬಂದಿತ್ತು.

ಒಳಚರಂಡಿ ಸಮಸ್ಯೆ ಮಂಗಳೂರು ನಗರವನ್ನು ಬೆನ್ನು ಬಿಡದೆ ಕಾಡುತ್ತಿರುವ ಸಮಸ್ಯೆಯಾಗಿದೆ. ಹೊಸದಾಗಿ ಒಳಚರಂಡಿ ವ್ಯವಸ್ಥೆ ನಿರ್ಮಾಣವಾದ ಪ್ರದೇಶದಲ್ಲಿ ಅಸಮರ್ಪಕ ಮತ್ತು ದೂರದೃಷ್ಟಿ ರಹಿತ ಕಾಮಗಾರಿಯಿಂದಾಗಿ ಕೆಲಸ ಮಾಡಿದರೂ, ಪ್ರಯೋಜನಕ್ಕೆ ಬಾರದಂತಾಗಿದೆ. ಇದರಿಂದಾಗಿ ಮಳೆಗಾಲದಲ್ಲಿ ಒಳಚರಂಡಿಯ ಮ್ಯಾನ್‌ಹೋಲ್‌ಗ‌ಳು ಉಕ್ಕಿ ಮಲೀನ ನೀರು ರಸ್ತೆಯಲ್ಲಿ ಹರಿಯುವಂತಾಗಿದೆ.

ಒಳ ಚರಂಡಿ
ಸಮಸ್ಯೆ ವ್ಯಾಪಕ
ನಗರದ ಶಿವಬಾಗ್‌, ಬೆಂದೂರು, ಮರೋಳಿ, ಕಂಕನಾಡಿ, ದೇರೆಬೈಲು ದಕ್ಷಿಣ, ದೇರೆಬೈಲು ಪೂರ್ವ, ಕಾವೂರು, ಕದ್ರಿ ಉತ್ತರ, ಬಿಜೈ, ಕೊಡಿಯಾಲಬೈಲು, ಪದವು ಸೆಂಟ್ರಲ್‌, ಜಪ್ಪಿನಮೊಗರು, ಬಜಾಲ್‌, ಅತ್ತಾವರ ಸೇರಿದಂತೆ
ಪಾಲಿಕೆಯ ಬಹುತೇಕ ವಾರ್ಡ್‌ ಗಳಲ್ಲಿ ಒಳ ಚರಂಡಿ ಸಮಸ್ಯೆ ವ್ಯಾಪಕವಾಗಿ ಕಂಡು ಬರುತ್ತಿದೆ. ಗುಜ್ಜರಕೆರೆ ಬಳಿಯ ಅರೆಕರೆಬೈಲು ಪ್ರದೇಶದಲ್ಲಿ ಪ್ರತಿ ಮಳೆಗಾಲದಲ್ಲಿ ಕಾರಂಜಿಯಂತೆ ಡ್ರೈನೇಜ್‌ ನೀರು ಹೊರಕ್ಕೆ ಚಿಮ್ಮುತ್ತದೆ ಎಂದು ಸ್ಥಳೀಯರು ಪ್ರತೀ ಬಾರಿಯೂ ಆರೋಪ ಮಾಡುತ್ತಾರೆ.

ಒಳಚರಂಡಿ ಜಾಲಕ್ಕೆ
ಮಳೆ ನೀರಿನ ಸಂಪರ್ಕ
ಕೆಲವು ಬಹುಮಹಡಿ ಕಟ್ಟಡಗಳ ಮಳೆ ನೀರು ಹರಿಯುವ ಕೊಳ ವೆ ಯ ಸಂಪರ್ಕವನ್ನೂ ಒಳಚರಂಡಿ ಜಾಲಕ್ಕೆ ನೀಡುವುದು ಮಳೆಗಾಲದಲ್ಲಿ ಒಳಚರಂಡಿಗಳ ತ್ಯಾಜ್ಯ ನೀರು ಉಕ್ಕಿಹರಿಯಲು ಪ್ರಮುಖ ಕಾರಣ. ಪಾಲಿಕೆ ಅಧಿಕಾರಿಗಳು ನಿರಂತರ ಕಾರ್ಯಾಚರಣೆ ನಡೆಸಿ, ಇದನ್ನು ತಡೆದರೆ ಸ್ವಲ್ಪ ಮಟ್ಟಿಗೆ ಈ ಸಮಸ್ಯೆ ಉಂಟಾಗದಂತೆ ತಡೆಯಬಹುದು ಎನ್ನುತ್ತಾರೆ ಸ್ಥಳೀಯ ನಿವಾಸಿಗಳು.

ಶೀಘ್ರ ಬ್ಲಾಕ್‌ ತೆರವು
ಒಳಚರಂಡಿ ಮ್ಯಾನ್‌ಹೋಲ್‌ಗ‌ಳಿಂದ ಕೆಲವೆಡೆ ಕೊಳಚೆ ನೀರು ಹೊರ ಬರುತ್ತಿರುವುದು ತಿಳಿದಿದೆ. ಸಮರ್ಪಕ ಕಾಮಗಾರಿ ನಡೆಸುವ ಮೂಲಕ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಳೆಗಾಲಕ್ಕೆ ಮುನ್ನ ಕೊಳವೆ ಮಾರ್ಗದಲ್ಲಿ ಬ್ಲಾಕ್‌ಗಳಿದ್ದಲ್ಲಿ, ಮಳೆ ನೀರಿನ ಅಕ್ರಮ ಸಂಪರ್ಕ ನೀಡಿದ್ದರೆ ಅದನ್ನೂ ತೆರವುಗೊಳಿಸುವಂತೆಯೂ ಸೂಚನೆ ನೀಡಲಾಗುವುದು. – ಚನ್ನಬಸಪ್ಪ ಕೆ., ಪಾಲಿಕೆ ಆಯುಕ್ತ

-ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.