ಕಷ್ಟಕ್ಕೆ ಸಿಲುಕಿದ ಮಹಿಳೆಯರಿಗೆ ಕಾಂಗ್ರೆಸ್‌ ಗ್ಯಾರಂಟಿಯಿಂದ ಅನುಕೂಲ: ಮಮತಾ ಗಟ್ಟಿ

ಕಾಂಗ್ರೆಸ್‌ನ ಯಾವುದೇ ಅಭ್ಯರ್ಥಿಯೂ ಕೂಡಾ ಅಂತಹ ಕೆಲಸ ಮಾಡಿಲ್ಲ

Team Udayavani, May 8, 2023, 2:51 PM IST

ಕಷ್ಟಕ್ಕೆ ಸಿಲುಕಿದ ಮಹಿಳೆಯರಿಗೆ ಕಾಂಗ್ರೆಸ್‌ ಗ್ಯಾರಂಟಿಯಿಂದ ಅನುಕೂಲ: ಮಮತಾ ಗಟ್ಟಿ

ಮಹಾನಗರ; ರಾಜ್ಯ, ದೇಶದಲ್ಲಿ ವ್ಯಾಪಕವಾಗಿ ಬೆಲೆ ಏರಿಕೆಯಾಗಿದೆ, ಗೃಹಿಣಿಯರಿಗೆ ಮನೆ ನಡೆಸುವುದೇ ಕಷ್ಟವಾಗಿರುವಾಗ ಕಾಂಗ್ರೆಸ್‌ ಸರಕಾರ ಆಡಳಿತಕ್ಕೆ ಬಂದರೆ ಅದರ ಗ್ಯಾರಂಟಿ ಯೋಜನೆಗಳಿಂದ ನೆರವಾಗಲಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಮಮತಾ ಡಿ.ಎಸ್‌ ಗಟ್ಟಿ ಹೇಳಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿನ ಎಂಟೂ ಕಾಂಗ್ರೆಸ್‌ ಅಭ್ಯರ್ಥಿಗಳು ಸಮರ್ಥರು, ಭ್ರಷ್ಟಾಚಾರ ರಹಿತರು. ಅವರು ಗೆದ್ದಲ್ಲಿ ಅಭಿವೃದ್ಧಿಯ ಜೊತೆಜೊತೆಗೆ ಜಿಲ್ಲೆಯಲ್ಲಿ ಕೋಮುಸಾಮರಸ್ಯದಿಂದ ಜನರ ಬದುಕು ಸುಗಮವಾಗಲಿದೆ ಎಂದರು.

ಮರಳುದಂಧೆ ಸಿಕ್ಕಾಪಟ್ಟೆ ಜಾಸ್ತಿಯಾಗಿದೆ, ಇದರಲ್ಲಿ ಶಾಸಕರುಗಳೇ ಪಾಲುದಾರರೂ ಆಗಿದ್ದಾರೆ, ಅನೇಕ ಕಾಮಗಾರಿಗಳನ್ನು ತಮ್ಮ ಆಪ್ತರಿಗೆ ನೀಡಿದ್ದಾರೆ, ಶೇ.40 ಕಮಿಷನ್‌ ಎನ್ನುವುದು ಎಲ್ಲಾ ಕಡೆಗಳಲ್ಲಿ ಜೋರಾಗಿ ನಡೆಯುತ್ತಿದೆ, ಹೀಗಿರುವಾಗ ಜನಸಾಮಾನ್ಯರು ಬದುಕುವುದು ಹೇಗೆ? ಇದಕ್ಕಾಗಿ ಕಾಂಗ್ರೆಸ್‌ ಆಡಳಿತವನ್ನೇ ಜನರು ಮತ್ತೆ ಆಯ್ಕೆ ಮಾಡಲಿದ್ದಾರೆ ಎಂದರು.

ಮಂಗಳೂರು ನಗರ ದಕ್ಷಿಣದ ಅಭ್ಯರ್ಥಿ ಜೆ.ಆರ್‌.ಲೋಬೋ ಅವರು ಸಮರ್ಥರು, ಹಿರಿಯರು, ಶಾಸಕರಾಗಿದ್ದು ಅನುಭವಹೊಂದಿದವರು, ಅನೇಕ ಯೋಜನೆಗಳನ್ನು ಅನುದಾನಗಳನ್ನು ತಂದು ಅನುಷ್ಠಾನ ಮಾಡಿದವರು, ಮಂಗಳೂರು ನಗರ ಯಾವ ರೀತಿ ಅಭಿವೃದ್ಧಿಯಾಗಬೇಕು ಎಂಬ ಸೂಕ್ಷ್ಮ ಪರಿಕಲ್ಪನೆಯುಳ್ಳವರು, ಅಂತಹವರು ಗೆಲ್ಲಬೇಕಾಗಿದೆ ಎಂದ‌ರು.

ಊರಿಗೆ ಸಂಸ್ಕೃತಿಯ ಪಾಠ ಹೇಳುವ ಬಿಜೆಪಿಯ 20ರಷ್ಟು ಅಭ್ಯರ್ಥಿಗಳು ಮಾನಹಾನಿಕರ ಫೂಟೊ, ವಿಡಿಯೋ ಬಿಡುಗಡೆ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಅಂತಹವರಿಗೆ ಮತ ಹಾಕಬಾರದು ಎಂದು ಮಮತಾ ಡಿ.ಎಸ್‌ ಗಟ್ಟಿ ಹೇಳಿದರು. ಯಾವ ಮುಖವಿಟ್ಟು ಅಂತಹವರು ಮತ ಕೇಳುತ್ತಾರೆ, ಕಾಂಗ್ರೆಸ್‌ನ ಯಾವುದೇ ಅಭ್ಯರ್ಥಿಯೂ ಕೂಡಾ ಅಂತಹ ಕೆಲಸ ಮಾಡಿಲ್ಲ ಎಂದು ನುಡಿದರು.

ಕಾಂಗ್ರೆಸ್‌ ಬಂದರೆ ಎಲ್ಲವೂ ಹಾಳಾಗುತ್ತದೆ ಎಂಬ ರೀತಿಯಲ್ಲಿ ಬಿಜೆಪಿಯವರು ಮನೆ ಮನೆಗೆ ಹೋಗಿ ಅಪಪ್ರಚಾರ ಮಾಡುತ್ತಿದ್ದಾರೆ, ಆದರೆ ಕಾಂಗ್ರೆಸ್‌ನಿಂದ ಜನರಿಗೆ ಒಳ್ಳೆಯದೇ ಆಗಲಿದೆ, ಇಂತಹ ಅಪಪ್ರಚಾರಕ್ಕೆ ಜನರು ಗಮನ ಕೊಡದೆ ಕಾಂಗ್ರೆಸ್‌ ಅನ್ನು ಆರಿಸಬೇಕಾಗಿದೆ ಎಂದರು. ಕಾಂಗ್ರೆಸ್‌ ನಾಯಕಿಯರಾದ ಅಪ್ಪಿ, ಶಾಂತಲಾ ಗಟ್ಟಿ, ಜೆಸಿಂತಾ ಆಲ್ಪ್ರೇಡ್, ಚಂದ್ರಕಲಾ ಜೋಗಿ ಹಾಜರಿದ್ದರು.

ಕಾಂಗ್ರೆಸ್‌ ಗ್ಯಾರಂಟಿಯಲ್ಲಿ ಮಹಿಳೆಗೆ ಆದ್ಯತೆ
ಕಾಂಗ್ರೆಸ್‌ ಈಗಾಗಲೇ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರನ್ನೇ ಮುಖ್ಯವಾಗಿ ಪರಿಗಣಿಸಲಾಗಿದೆ, ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯ ಮಹಿಳೆಗೆ ಮಾಸಿಕ 2000 ರೂ, ಗೃಹಜ್ಯೋತಿಯಲ್ಲಿ 200 ಯುನಿಟ್‌ ಉಚಿತ ವಿದ್ಯುತ್‌, ಮೊನ್ನೆ ರಾಹುಲ್‌ ಗಾಂಧಿಯವರು ಮಂಗಳೂರಿಗೆ ಬಂದಾಗ ಮಹಿಳೆಯರಿಗೆ ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಯೋಜನೆಯನ್ನೂ ಘೋಷಿಸುವ ಮೂಲಕ ದುಡಿಯುವ ಮಹಿಳೆಯರ ನೆರವಿಗೆ ಬರಲು ಮುಂದಾಗಿದ್ದಾರೆ. ‌

ಜನರು ಹಿಂದಿನ ಕಾಂಗ್ರೆಸ್‌ ಸರಕಾರ ಇದ್ದಾಗ ಬದುಕು ಯಾವ ರೀತಿ ಇತ್ತು, ಈಗ ಯಾವ ರೀತಿ ಇದೆ ಎನ್ನುವುದನ್ನು ಹೋಲಿಸಿ ನೋಡಿ ಯಾವ ಆಡಳಿತ ಬೇಕೆನ್ನುವುದನ್ನು ತೀರ್ಮಾನಿಸಲಿ ಎಂದೂ ನುಡಿದರು.

ಟಾಪ್ ನ್ಯೂಸ್

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.