ಬಿಜೆಪಿಯ ಅಭೂತಪೂರ್ವ ಗೆಲುವು ಕಾರ್ಯಕರ್ತರ ಗೆಲುವು: ರಾಜೇಶ್‌ ನಾೖಕ್‌

ಪಣೋಲಿಬೈಲಿನಿಂದ ಬೊಳ್ಳಾಯಿವರೆಗೆ ಬಿಜೆಪಿ ರೋಡ್‌ ಶೋ

Team Udayavani, May 8, 2023, 3:14 PM IST

ಬಿಜೆಪಿಯ ಅಭೂತಪೂರ್ವ ಗೆಲುವು ಕಾರ್ಯಕರ್ತರ ಗೆಲುವು: ರಾಜೇಶ್‌ ನಾೖಕ್‌

ಬಂಟ್ವಾಳ: ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ರವಿವಾರ ಸಂಜೆ ಸಜೀಪಮೂಡ ಗ್ರಾ.ಪಂ.ವ್ಯಾಪ್ತಿಯ ಪಣೋಲಿಬೈಲಿನಿಂದ ಬೊಳ್ಳಾಯಿ ಜಂಕ್ಷನ್‌ವರೆಗೆ ಬಂಟ್ವಾಳ ಬಿಜೆಪಿ ನಾಯಕರು ಹಾಗೂ ಸ್ಥಳೀಯ ಕಾರ್ಯಕರ್ತರೊಂದಿಗೆ ರೋಡ್‌ ಶೋ ನಡೆಸಿ ಈ ಬಾರಿ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಸ್ಥಳೀಯವಾಗಿರುವ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಸಜೀಪಮೂಡ ಸಮಗ್ರ ಅಭಿವೃದ್ಧಿಗೆ ನೀಡಿರುವ ಅನುದಾನಗಳನ್ನು ವಿವರಿಸಿ ಗ್ರಾಮದ ಇನ್ನಷ್ಟು ಅಭಿವೃದ್ಧಿಗೆ ತನ್ನನ್ನು ಬೆಂಬಲಿಸುವಂತೆ ವಿನಂತಿಸಿದರು. ಈ ವೇಳೆ ಸ್ಥಳೀಯರು ಬಿಜೆಪಿಯನ್ನು ಬೆಂಬಲಿಸುವ ಭರವಸೆಯನ್ನು ನೀಡಿದರು.

ಬಳಿಕ ಮಾತನಾಡಿದ ರಾಜೇಶ್‌ ನಾೖಕ್‌ ಅವರು, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಸಾಧಿಸಿದ ಅಭೂತಪೂರ್ವ ಗೆಲುವು ಅದು ಕಾರ್ಯಕರ್ತರ ಗೆಲುವಾಗಿದೆ. ಕಳೆದ 5 ವರ್ಷಗಳಲ್ಲಿ ಪ್ರತಿಯೊಬ್ಬರು ಗೌರವದಿಂದ ನೆಮ್ಮದಿಯ ಜೀವನ ಮಾಡಲು ಸಾಧ್ಯವಾಗಿದೆ. ಅದೇ ರೀತಿಯಲ್ಲಿ ಈ ಬಾರಿಯ ಚುನಾವಣೆಯಲ್ಲೂ ಕ್ಷೇತ್ರದ ಜನತೆ ಮತ್ತೂಮ್ಮೆ ಕಮಲವನ್ನು ಅರಳಿಸುವ ಮೂಲಕ ಕಾಂಗ್ರೆಸ್‌ ಮುಕ್ತ ಬಂಟ್ವಾಳವನ್ನಾಗಿ ಮಾರ್ಪಾಡು ಮಾಡಬೇಕಿದೆ ಎಂದರು.

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಬಿ.ಸಿ.ರೋಡಿನಲ್ಲಿ ಬೃಹತ್‌ ರೋಡ್‌ ಶೋ ನಡೆಸಿದ ಬಳಿಕ ಕ್ಷೇತ್ರದ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಯಾಗಿದ್ದು, ಗೆಲುವಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ. ರೋಡ್‌ ಶೋ ಯಶಸ್ಸಿಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಚಿರಋಣಿಯಾಗಿದ್ದು, ನಿಮ್ಮ ಸೇವೆಗೆ ಸದಾ ಸಿದ್ಧನಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌, ಮುಂಬಯಿ ಮಹಾನಗರಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷ ಸಂತೋಷ್‌ ಜಿ.ಶೆಟ್ಟಿ ದಳಂದಿಲ, ಮುಂಬಯಿನ ಉದ್ಯಮಿ, ಪಕ್ಷದ ಮುಂದಾಳು ವಿವೇಕ್‌ ಶೆಟ್ಟಿ ನಗ್ರಿಗುತ್ತು, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡಾ ಅಧ್ಯಕ್ಷ ಬಿ.ದೇವದಾಸ್‌ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ್‌ ಶೆಟ್ಟಿ ಸಜೀಪ, ಪ್ರಮುಖರಾದ ಪ್ರವೀಣ್‌ ಗಟ್ಟಿ, ಸುಪ್ರೀತ್‌ ಆಳ್ವ, ಪುರುಷೋತ್ತಮ ಸಾಲಿಯಾನ್‌, ಉದಯ ಪೂಜಾರಿ ಕಾಂಜಿಲ, ಉದಯ ಕುಮಾರ್‌ ರಾವ್‌,ಚರಣ್‌ ಜುಮಾದಿಗುಡ್ಡೆ, ಯಶವಂತ ನಾಯ್ಕ ನಗ್ರಿ, ಲೋಹಿತ್‌ ಪಣೋಲಿಬೈಲು, ವೀರೇಂದ್ರ ಕುಲಾಲ್‌, ಸೀತಾರಾಮ ಅಗೋಳಿಬೆಟ್ಟು, ಪ್ರಶಾಂತ್‌ ಪೂಜಾರಿ, ಗಿರೀಶ್‌ ಕುಲಾಲ್‌, ಯೋಗೀಶ್‌ ಪೂಜಾರಿ, ಕೃಷ್ಣ ಭಟ್‌, ಸುರೇಶ್‌ ಪೂಜಾರಿ, ಸಜೀಪಮೂಡ, ಸಜೀಪಮುನ್ನೂರು ಗ್ರಾ.ಪಂ.ಗಳ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಬೂತ್‌ ಸಮಿತಿ ಪ್ರಮುಖರು, ಕಾರ್ಯಕರ್ತರು ಮೊದಲಾದವರು ಉಪಸ್ಥಿತರಿದ್ದರು.

ಬಿಜೆಪಿ ಗೆಲ್ಲಿಸಿ ಉತ್ತರ ನೀಡೋಣ
ಕಾಂಗ್ರೆಸ್‌ ಮಾಡುತ್ತಿರುವ ಎಲ್ಲಾ ಅಪಪ್ರಚಾರಗಳಿಗೂ ಕಾರ್ಯಕರ್ತರು ಬಂಟ್ವಾಳದಲ್ಲಿ ಬಿಜೆಪಿಯನ್ನು ಅತ್ಯಧಿಕ ಮತಗಳ ಅಂತರಗಳ ಗೆಲ್ಲಿಸುವ ಮೂಲಕ ಉತ್ತರ ನೀಡಬೇಕು. ಕಾಂಗ್ರೆಸಿಗರಿಗೆ ಸೋಲು ಖಚಿತವಾಗಿರುವುದರಿಂದ ಹತಾಶ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೊನೆಯ ಕ್ಷಣದಲ್ಲಿ ಬಿಜೆಪಿ ಸರಕಾರದ ಸಾಧನೆಗಳು, ಬಂಟ್ವಾಳದ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ಮತ್ತೂಮ್ಮೆ ಮನದಟ್ಟಾಗುವಂತೆ ಹೇಳಿ ಪ್ರತಿಯೊಬ್ಬರೂ ಬಿಜೆಪಿಗೆ ಮತ ಹಾಕುವಂತೆ ನೋಡಿಕೊಳ್ಳಬೇಕಿದೆ ಎಂದು ರಾಜೇಶ್‌ ನಾೖಕ್‌ ಅವರು ವಿವರಿಸಿದರು.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.