”ಬಂಗಾಳದಲ್ಲಿ ಏನಾದರೂ ಆದರೆ…”: ಮಣಿಪುರ ಗಲಭೆ ಕುರಿತು ಕೇಂದ್ರದ ವಿರುದ್ಧ ಮಮತಾ ಆಕ್ರೋಶ
Team Udayavani, May 8, 2023, 4:30 PM IST
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈಶಾನ್ಯ ರಾಜ್ಯವನ್ನು ಬೆಚ್ಚಿಬೀಳಿಸಿದ ಹಿಂಸಾಚಾರದ ಬಗ್ಗೆ ಕೇಂದ್ರ ಮತ್ತು ಮಣಿಪುರದ ಬಿಜೆಪಿ ಸರ್ಕಾರದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಬಂಗಾಳದಲ್ಲಿ ಏನಾದರೂ ಸಂಭವಿಸಿದರೆ ಬಂಗಾಳ ಸರ್ಕಾರವನ್ನು ದೂಷಿಸಲು ನೂರಾರು ಕೇಂದ್ರ ತಂಡಗಳನ್ನು ಕಳುಹಿಸಲಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
“ಬಂಗಾಳದಲ್ಲಿ ಏನಾದರೂ ಸಂಭವಿಸಿದಾಗ, ನಮ್ಮ ಮಾನಹಾನಿ ಮಾಡಲು ನೂರಾರು ಕೇಂದ್ರ ತಂಡಗಳನ್ನು ಇಲ್ಲಿಗೆ ಕಳುಹಿಸಲಾಗುತ್ತದೆ. ಆದರೆ ಮಣಿಪುರ ಬಿಜೆಪಿ ಆಡಳಿತದ ರಾಜ್ಯವಾಗಿರುವುದರಿಂದ ಏನೂ ಮಾಡಲಾಗುತ್ತಿಲ್ಲ. ಆದರೆ ಜನರು ಅಂಕಿಅಂಶಗಳನ್ನು ತಿಳಿದುಕೊಳ್ಳಲು ಬಯಸುತ್ತಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದರು.
“ಕಂಡಲ್ಲಿ ಗುಂಡಿಕ್ಕುವ ಆದೇಶ ಮತ್ತು ಸಾಮಾನ್ಯ ಹಿಂಸಾಚಾರದಿಂದಾಗಿ ಎಷ್ಟು ಜನರು ಸಾವನ್ನಪ್ಪಿದ್ದಾರೆಂದು ನಮಗೆ ತಿಳಿದಿಲ್ಲ. ರಾಜ್ಯ ಸರಕಾರ ಅಂಕಿ ಅಂಶಗಳನ್ನು ಹೇಳುತ್ತಿಲ್ಲ. ಕೆಲವು ಸಮಯದ ಹಿಂದೆ ಅಲ್ಲಿ 60-70 ಸಾವುಗಳಾಗಿದೆ ಎಂದು ತಿಳಿದುಕೊಂಡೆ” ಎಂದು ಮಮತಾ ಹೇಳಿದರು.
ಕಳೆದ ವಾರ ಮೈತೈ ಸಮುದಾಯದ ಸದಸ್ಯರು ಮತ್ತು ಬುಡಕಟ್ಟು ಜನಾಂಗದವರ ನಡುವೆ ಘರ್ಷಣೆ ನಡೆದ ನಂತರ ಮಣಿಪುರದಲ್ಲಿ ಅಸ್ಥಿರ ಪರಿಸ್ಥಿತಿಯ ಬಗ್ಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ಜಾಮೀನು
Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ
UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್
MUST WATCH
ಹೊಸ ಸೇರ್ಪಡೆ
Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು
ಟಿಕೆಟ್ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್
MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್
INDvsNZ: ಟೆಸ್ಟ್ ಕ್ರಿಕೆಟ್ ನಲ್ಲಿ 9000 ರನ್ ಪೂರೈಸಿದ ವಿರಾಟ್ ಕೊಹ್ಲಿ
ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ಜಾಮೀನು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.