ಮಂಗಳೂರು ದಕ್ಷಿಣ: ಶೈಕ್ಷಣಿಕ ಅಭಿವೃದ್ಧಿಗೆ 221 ಕೋ.ರೂ ಅನುದಾನ: ಪ್ರೊ|ಎಂ.ಬಿ.ಪುರಾಣಿಕ್‌

ಬಲ್ಮಠ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಕಟ್ಟಡ ನಿರ್ಮಾಣ ಆಗಿದೆ.

Team Udayavani, May 8, 2023, 5:00 PM IST

ಮಂಗಳೂರು ದಕ್ಷಿಣ: ಶೈಕ್ಷಣಿಕ ಅಭಿವೃದ್ಧಿಗೆ 221 ಕೋ.ರೂ ಅನುದಾನ: ಪ್ರೊ|ಎಂ.ಬಿ.ಪುರಾಣಿಕ್‌

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳ ಸಮಗ್ರ ಸುಧಾರಣೆಗೆ ಕಳೆದ 5 ವರ್ಷಗಳಲ್ಲಿ 221 ಕೋ.ರೂ.ಗಳಿಗೂ ಅಧಿಕ ಅನುದಾನ ಲಭಿಸಿದೆ. ನಗರದ ಅನೇಕ ಶಿಕ್ಷಣ ಸಂಸ್ಥೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಯಾಗಿದೆ. ಶಾಸಕ ವೇದವ್ಯಾಸ ಕಾಮತ್‌ ಅವರ ಪುಯತ್ನದ ಫಲವಾಗಿ ಬೃಹತ್‌ ಮೊತ್ತದ ಅನುದಾನ ಮಂಗಳೂರು ನಗರದ ಶೈಕ್ಷಣಿಕ ಅಭಿವೃದ್ಧಿಗೆ ದೊರೆತಿರುವುದು ಶ್ಲಾಘನೀಯ ಎಂದು ತುಳುನಾಡು ಎಜುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಪ್ರೊ|ಎಂ.ಬಿ.ಪುರಾಣಿಕ್‌ ಹೇಳಿದರು.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಆಕರ್ಷಿಸುವ ಸಲುವಾಗಿ ಸರಕಾರಿ ಶಾಲೆಗಳಲ್ಲಿ ಇ- ಸ್ಮಾರ್ಟ್‌ ಸ್ಕೂಲ್‌ ಯೋಜನೆಯನ್ನು 60 ಕೋ ರೂ ಗೂ ಹೆಚ್ಚಿನ ಅನುದಾನದಲ್ಲಿ 13 ಶಾಲೆಗಳಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದರು.

ಪುರಭವನ ಮುಂಭಾಗದ ಅಭ್ಯಾಸಿ ಶಾಲೆಯ ಆವರಣದಲ್ಲಿ ಬೊಕ್ಕಪಟ್ಟಣ ಪಿಯು ಕಾಲೇಜು ಅಭಿವೃದ್ಧಿಗೆ 5.57 ಕೋ.ರೂ. ಅನುದಾನ ನೀಡಲಾಗಿದೆ. ಇದರಲ್ಲಿ 17 ಕೊಠಡಿ, ಶೌಚಾಲಯ ನಿರ್ಮಾಣ ಮಾಡಲಾಗಿದೆ. ವಿಶಾಲ ಆಡಿಟೋರಿಯಂ ಕೂಡ ನಿರ್ಮಿಸಲಾಗಿದೆ. 2 ಕೋ.ರೂ. ವೆಚ್ಚದಲ್ಲಿ ನಾಲ್ಯಪದವಿಗೆ ಪಿಯು ಕಾಲೇಜು ಮಂಜೂರಾಗಿದೆ ಎಂದರು.

ಉನ್ನತ ಶಿಕ್ಷಣ ಇಲಾಖೆ ಮೂಲಕ 6.15 ಕೋ.ರೂ. ವೆಚ್ಚದಲ್ಲಿ ಬಲ್ಮಠ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಕಟ್ಟಡ ನಿರ್ಮಾಣ ಆಗಿದೆ. ಸುಮಾರು 75 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ದಯಾನಂದ ಪೈ- ಸತೀಶ್‌ ಪೈ ಕಾಲೇಜಿಗೆ 8 ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಲಾಗಿದೆ ಎಂದರು.

ಮಂಗಳೂರು ವಿವಿ ಮಾಜಿ ಸಿಂಡಿಕೇಟ್‌ ಸದಸ್ಯ ರಮೇಶ್‌ ಕೆ. ಅವರು ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 9.82 ಕೋ.ರೂ. ವೆಚ್ಚದಲ್ಲಿ ಪಿವಿಎಸ್‌ ಬಳಿ ಕುದು¾ಲ್‌ ರಂಗರಾವ್‌ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿ ನಡೆದಿದೆ. ಶಿಕ್ಷಣ ಇಲಾಖೆ ಮೂಲಕ 2.35 ಕೋ.ರೂ ವೆಚ್ಚದಲ್ಲಿ ಕುದ್ರೋಳಿ ವಾರ್ಡ್‌ನ ಸರಕಾರಿ ಮೌಲಾನಾ ಆಜಾದ್‌ ಶಾಲೆ ಮೂಲಭೂತ ಸೌಕರ್ಯ ಒದಗಿಸಲಾಗಿದೆ. 20 ಕೋ.ರೂ ವೆಚ್ಚದಲ್ಲಿ ವಕ್ಫ್ ಬೋರ್ಡ್‌ ಮೂಲಕ ಅಲ್ಪಸಂಖ್ಯಾಕ ವಿದ್ಯಾರ್ಥಿಗಳಿಗೆ ಎರಡು ಪ್ರತ್ಯೇಕ ಸ್ಥಳದಲ್ಲಿ ಹಾಸ್ಟೆಲ್‌ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಉನ್ನತ ಶಿಕ್ಷಣ (ತಾಂತ್ರಿಕ) ಇಲಾಖೆ ಮೂಲಕ ಸರಕಾರಿ ಬಾಲಕರ ಐಟಿಐ ಕಾಲೇಜು ಹಾಗೂ ಬಾಲಕಿಯರ ಐಟಿಐ ಕಾಲೇಜುಗಳಿಗೆ ತಲಾ 33 ಹಾಗೂ 34 ಕೋ.ರೂ ಮೊತ್ತದ ಅನುದಾನ ಕಲ್ಪಿಸಲಾಗಿದೆ. 28.50 ಕೋ.ರೂ ವೆಚ್ಚದಲ್ಲಿ ಜರ್ಮನ್‌ ಟೆಕ್ನಾಲಜಿ ಅಡಿಯಲ್ಲಿ ಸರಕಾರಿ ಐಟಿಐ ಕಾಲೇಜು ಅಭಿವೃದ್ಧಿಪಡಿಸಲಾಗಿದೆ. ಸ್ಕೂಲ್‌ ಝೋನ್‌ ಪರಿಕಲ್ಪನೆ, ಶಾಲಾ ಸಂರಕ್ಷಣಾ ವಲಯ, ಸಂಚಾರಿ ಸುಧಾರಣೆ ಸೈನ್‌ ಬೋರ್ಡ್‌ ಅಳವಡಿಕೆ ಮತ್ತು ಇತರ ವ್ಯವಸ್ಥೆಗಳನ್ನು ಅಳವಡಿಸಲಾಗುತ್ತದೆ ಎಂದರು.

ಮೂರು ಕಾಲೇಜುಗಳಿಗೆ ನ್ಯಾಕ್‌ “ಎ’ ಗ್ರೇಡ್‌ ಮಾನ್ಯತೆ
ಬಲ್ಮಠ ಪದವಿ ಕಾಲೇಜು, ಕಾರ್‌ಸ್ಟ್ರೀಟ್‌ ಕಾಲೇಜು ಹಾಗೂ ಹಂಪನಕಟ್ಟೆ ಕಾಲೇಜುಗಳಿಗೆ ನ್ಯಾಕ್‌ನಿಂದ “ಎ’ ಗ್ರೇಡ್‌ ಮಾನ್ಯತೆ ಲಭಿಸಿದೆ. ಮಂಗಳೂರು ನಗರದ ಇತಿಹಾಸದಲ್ಲೇ ಮೂರು ಕಾಲೇಜುಗಳಿಗೆ ಏಕಕಾಲದಲ್ಲಿ “ಎ’ ಗ್ರೇಡ್‌ ಲಭಿಸಿರುವುದು ಇದೇ ಮೊದಲು. ಶಾಸಕ ವೇದವ್ಯಾಸ್‌ ಕಾಮತ್‌ ಅವರ ಪರಿಶ್ರಮದ ಫಲವಾಗಿ ಮೂರು ಕಾಲೇಜುಗಳಲ್ಲಿ ಅಳವಡಿಸಿದ ಮೂಲಭೂತ ಸೌಲಭ್ಯದ ಪರಿಣಾಮ ಗ್ರೇಡ್‌ ಪಡೆಯಲು ಸಾಧ್ಯವಾಗಿದೆ ಎಂದು ಪ್ರೊ|ಎಂ.ಬಿ.ಪುರಾಣಿಕ್‌ ಹೇಳಿದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.