Chennai: ಪರೀಕ್ಷಾ ಕೇಂದ್ರದಲ್ಲಿ NEET ವಿದ್ಯಾರ್ಥಿನಿಯರಿಗೆ ಬ್ರಾ ತೆಗೆಯಲು ಸೂಚನೆ; ವಿವಾದ


Team Udayavani, May 8, 2023, 6:43 PM IST

Chennai: ಪರೀಕ್ಷಾ ಕೇಂದ್ರದಲ್ಲಿ NEET ವಿದ್ಯಾರ್ಥಿಗಳಿಗೆ ಬ್ರಾ ತೆಗೆಯಲು ಸೂಚನೆ; ವಿವಾದ

ಚೆನ್ನೈ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಆಕಾಂಕ್ಷಿಗಳು ಒಳ ಉಡುಪು ಧರಿಸುವುದನ್ನು ಭಾನುವಾರ ನಿಷೇಧಿಸಿದ ಚೆನ್ನೈ ಪರೀಕ್ಷಾ ಕೇಂದ್ರದ ಘಟನೆಯು ಮುನ್ನೆಲೆಗೆ ಬಂದ ನಂತರ ವಿವಾದವೊಂದು ಸ್ಫೋಟಗೊಂಡಿದೆ.

ಸ್ಥಳೀಯ ಮಹಿಳಾ ಪತ್ರಕರ್ತರೊಬ್ಬರು ಪರೀಕ್ಷಾ ಕೇಂದ್ರಕ್ಕೆ ತೆರಳಿದಾಗ ಈ ವಿಚಾರ ಬಯಲಾಗಿದ್ದು, ಅವರು ಟ್ವೀಟ್ ಮಾಡಿದ್ದಾರೆ.

ಪರೀಕ್ಷಾ ಕೇಂದ್ರದಲ್ಲಿ ಒಂದು ಮೂಲೆಯಲ್ಲಿ ಕುಳಿತಿರುವ ಹುಡುಗಿಯೊಬ್ಬಳು ನಾಚಿಕೆಯಿಂದ ಪುಸ್ತಕಕ್ಕೆ ಅಂಟಿಕೊಂಡಿರುವುದನ್ನು ಗಮನಿಸಿದೆ ಎಂದು ಹೇಳಿಕೊಂಡಿದ್ದಾರೆ. ಪರೀಕ್ಷೆ ಬರೆಯುವಾಗ ಬ್ರಾ ಧರಿಸದಂತೆ ಕೇಳಿಕೊಂಡಿದ್ದರಿಂದ ನಾಚಿಕೆಯಾಗುತ್ತಿದೆ ಎಂದು ವಿದ್ಯಾರ್ಥಿನಿ ಪತ್ರಕರ್ತರಿಗೆ ತಿಳಿಸಿದ್ದಾಳೆ. ಪತ್ರಕರ್ತೆ ಆಕೆಗೆ ತನ್ನ ಶಾಲನ್ನು ನೀಡಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ ತನ್ನ ಸಹೋದರ ತನ್ನನ್ನು ಮನೆಗೆ ಕರೆದೊಯ್ಯಲು ಬರುತ್ತಿದ್ದಾನೆ ಎಂದು ಹುಡುಗಿ ನಯವಾಗಿ ನಿರಾಕರಿಸಿದಳು.

ಇದನ್ನೂ ಓದಿ:ಉಡುಪಿಯಲ್ಲಿ ಯಶ್ ಪಾಲ್ ಪರ ಮಹಾರಾಷ್ಟ್ರ ಸಿಎಂ ಶಿಂಧೆ ಪ್ರಚಾರ

ಪತ್ರಕರ್ತೆಯ ಟ್ವೀಟ್ ಗೆ ವಿರೋಧವಾಗಿ ಟ್ರೋಲ್‌ ಮಾಡಲಾಗಿದೆ. ಅಲ್ಲದೆ ಟ್ವೀಟ್ ಡಿಲೀಟ್ ಮಾಡುವಂತೆ ಒತ್ತಾಯಿಸಿದರು. ನಂತರ ಪತ್ರಕರ್ತೆಯು ತಾನು ಗಮನಿಸಿದ ಪ್ರಕಾರ, ಪರೀಕ್ಷೆಗೆ ಬಂದ ಅರ್ಧದಷ್ಟು ವಿದ್ಯಾರ್ಥಿನಿಯರು ಬ್ರಾ ಧರಿಸಿರಲಿಲ್ಲ ಎಂದು ಸ್ಪಷ್ಟಪಡಿಸಿದರು. “ನನ್ನನ್ನು ಅಶ್ಲೀಲ ಪ್ರಶ್ನೆಗಳನ್ನು ಕೇಳುವವರು ಬ್ರಾ ಧರಿಸಲು ಅನುಮತಿಸಲಾಗಿದೆಯೇ ಅಥವಾ ಇಲ್ಲವೇ ಎಂದು ಪರೀಕ್ಷಾ ಮಂಡಳಿಯನ್ನು ಕೇಳಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿನಾದ್ಯಂತ ಸುಮಾರು 1.5 ಲಕ್ಷ ವಿದ್ಯಾರ್ಥಿಗಳು ಭಾನುವಾರ ನೀಟ್ ಪರೀಕ್ಷೆಗೆ ಹಾಜರಾಗಿದ್ದರು.

ಕಳೆದ ಮೂರು ವರ್ಷಗಳಿಂದ ನಡೆಸಲಾಗುತ್ತಿರುವ ನೀಟ್‌ ನಲ್ಲಿ ಪ್ರತಿ ವಿದ್ಯಾರ್ಥಿಯ ಹೇರ್‌ ಪಿನ್ ಮತ್ತು ಡ್ರೆಸ್‌ ಗಳನ್ನು ತೆಗೆದು ಇನ್ವಿಜಿಲೇಟರ್‌ಗಳು ತಪಾಸಣೆ ನಡೆಸಿದ ರೀತಿಗೆ ತಮಿಳುನಾಡು ಶಿಕ್ಷಣ ಸಚಿವ ಅಂಬಿಲ್ ಮಹೇಶ್ ಖಂಡನೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Road Mishap ಕೋಲ್ಪೆ: ಲಾರಿ ಚಾಲಕರಿಬ್ಬರಿಗೆ ಕಾರು ಢಿಕ್ಕಿ

Road Mishap ಕೋಲ್ಪೆ: ಲಾರಿ ಚಾಲಕರಿಬ್ಬರಿಗೆ ಕಾರು ಢಿಕ್ಕಿ

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

Kapu ರಿಕ್ಷಾ ಮಾಲಕ ನೇಣಿಗೆ ಶರಣು

Kapu ರಿಕ್ಷಾ ಮಾಲಕ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russiya-Modi

Modi Russia Visit: ರಷ್ಯಾದ ಮಾಸ್ಕೊಗೆ ಬಂದಿಳಿದ ಪ್ರಧಾನಿ ಮೋದಿ

1-weewq

Hindus ಹೇಳಿಕೆ ;ರಾಹುಲ್ ಗಾಂಧಿಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

firing

Punjab; ನೀರಿಗಾಗಿ ಗುಂಪುಗಳ ಗುಂಡಿನ ಕಾಳಗ: ನಾಲ್ವರು ಸಾವು

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Road Mishap ಕೋಲ್ಪೆ: ಲಾರಿ ಚಾಲಕರಿಬ್ಬರಿಗೆ ಕಾರು ಢಿಕ್ಕಿ

Road Mishap ಕೋಲ್ಪೆ: ಲಾರಿ ಚಾಲಕರಿಬ್ಬರಿಗೆ ಕಾರು ಢಿಕ್ಕಿ

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

1-lulu

Wimbledon-2024; ರಿಬಾಕಿನಾ, ಸ್ವಿಟೋಲಿನಾ ಕ್ವಾರ್ಟರ್‌ ಫೈನಲ್‌ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.