ಬಿಜೆಪಿ ನಾಯಕರು ದೇಶದ್ರೋಹಿಗಳು: ಸೇವ್ ಮಹದಾಯಿ ಸೇವ್ ಗೋವಾ ಸಮಿತಿ
ಮಹದಾಯಿ ವಿಚಾರದಲ್ಲಿ ಆಕ್ರೋಶ
Team Udayavani, May 8, 2023, 6:56 PM IST
ಪಣಜಿ: ಮಹದಾಯಿ ನೀರನ್ನು ಕರ್ನಾಟಕಕ್ಕೆ ಹರಿಸುತ್ತಿರುವ ಬಿಜೆಪಿ ನಾಯಕರು ದೇಶದ್ರೋಹಿಗಳಾಗಿದ್ದು, ಕರ್ನಾಟಕಕ್ಕೆ ತೆರಳಿ ಚುನಾವಣಾ ಪ್ರಚಾರ ಮಾಡುತ್ತಿರುವವರನ್ನು ಖಂಡಿಸುತ್ತೇವೆ ಎಂದು ಸೇವ್ ಮಹದಾಯಿ ಸೇವ್ ಗೋವಾ ಸಮಿತಿಯ ಪ್ರಶಾಂತ್ ನಾಯ್ಕ್ ಕಿಡಿ ಕಾರಿದ್ದಾರೆ.
ಮಡಗಾಂವ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಇವೆಲ್ಲದರ ಸಂಚು ರೂಪಿಸಿದ್ದು, ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರುಸಾಥೀದಾರರಾಗಿದ್ದಾರೆ. ಮಹದಾಯಿ ಮಾರಾಟ ಮಾಡಲು ಮುಂದಾಗಿರುವವರು ತಮ್ಮ ಘನತೆಯ ಜತೆಗೆ ಗೋವಾವನ್ನು ಅಪಾಯಕ್ಕೆ ಸಿಲುಕಿಸಿದ್ದಾರೆ.ಗೋವಾದ ಭವಿಷ್ಯದ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ. ಗೋಮಾಂತಕದ ಜನತೆ ಈಗಲಾದರೂ ಎಚ್ಚೆತ್ತುಕೊಂಡು ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಪ್ರಶಾಂತ ನಾಯ್ಕ ಹೇಳಿದರು.
ಗೋವಾ ರಾಜ್ಯದ ಜನತೆ ಮಹದಾಯಿ ನದಿಯನ್ನು ಕರ್ನಾಟಕಕ್ಕೆ ಮಾರಾಟ ಮಾಡಿದವರನ್ನು ಕ್ಷಮಿಸಲು ಸಾಧ್ಯವಿಲ್ಲ ಹೀಗಾಗಿ ಜನರು ಇಂತವರಿಗೆ ತಕ್ಕ ಪಾಠ ಕಲಿಸುವವರೆಗೆ ಸುಮ್ಮನಿರುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಘಟನೆಯ ಪ್ರಮುಖರಾದ ಪ್ರತಿಮಾ ಕುಟಿನ್ಹೊ ಮಾತನಾಡಿ, ಗೋವಾವನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸುವ ಆಟವನ್ನು ಜನರು ಹಲವು ವರ್ಷಗಳ ಹಿಂದೆಯೇ ಆರಂಭಿಸಿದ್ದರು. ಇದೀಗ ಗೋವಾವನ್ನು ಕರ್ನಾಟಕದಲ್ಲಿ ವಿಲೀನಗೊಳಿಸುವ ಹುನ್ನಾರ ನಡೆದಿದೆ. ಅದಕ್ಕೆ ಗೋವಾದ ಜನತೆ ಬಲಿಯಾಗಬಾರದು. ಕದಂಬ ನಿಗಮದ ಅಧ್ಯಕ್ಷರು ಇಲ್ಲಿನ ಜನರ ಬಗ್ಗೆ ಕಾಳಜಿ ವಹಿಸದೇ ಕರ್ನಾಟಕಕ್ಕೆ 140 ಬಸ್ಸುಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಗೆ ಜನರನ್ನು ಕರೆತರಲು ಕಳುಹಿಸುತ್ತಾರೆ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.