SSLC Result : ಶೇ. 100 ಅಂಕ ಗಳಿಸಿದ ಅನುಪಮಾ ಹಿರೇಹೊಳಿ ರಾಜ್ಯಕ್ಕೆ ಪ್ರಥಮ

ಬಡ ಕುಟುಂಬ.. ತಂದೆಯನ್ನು ಕಳೆದುಕೊಂಡ ವಿದ್ಯಾರ್ಥಿನಿಯ ಯಶೋಗಾಥೆ

Team Udayavani, May 8, 2023, 8:07 PM IST

1-dsfdsf

ಸವದತ್ತಿ: ಸಾಧನೆಗೆ ಬಡತನ ಅಡ್ಡಿಯಲ್ಲ. ನಿರಂತರ ಪರಿಶ್ರಮ, ಶ್ರದ್ಧೆ ಹಾಗೂ ದೃಢ ಆತ್ಮವಿಶ್ವಾಸ ಇದ್ದರೆ ಏನನ್ನಾದರೂ ಸಾಧಿಸಬಹುದೆಂಬುವದಕ್ಕೆ ಇಲ್ಲಿನ ಅಕ್ಕಿ ಓಣಿಯ ಅನುಪಮಾ ಹಿರೇಹೊಳಿ ಸಾಕ್ಷಿಯಾಗಿದ್ದಾಳೆ. ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಮುಂದಿನ ಪೀಳಿಗೆಗೆ ಮಾದರಿಯಾಗಿದ್ದಾಳೆ.

ಬಡ ಕುಟುಂಬದಲ್ಲಿ ಜನಿಸಿದ ಈಕೆ ಎರಡು ವರ್ಷದ ಹಿಂದೆ ಅನಾರೋಗ್ಯದ ಕಾರಣ ತಂದೆ ಶ್ರೀಶೈಲ ಅವರನ್ನು ಕಳೆದುಕೊಂಡಳು. ತಾಯಿ ರಾಜೇಶ್ವರಿ ಮಗಳ ವಿದ್ಯಾಭ್ಯಾಸಕ್ಕೆ ಕೊರತೆಯಾಗದಂತೆ ಖಾಸಗಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಾ ಕುಟುಂಬ ನಿರ್ವಹಣೆ ನಡೆಸುತ್ತಿದ್ದಾರೆ. ಮಗಳ ಈ ಸಾಧನೆಗೆ ಅತೀವ ಸಂತಸ ವ್ಯಕ್ತಪಡಿಸಿದ ಅವರು ಧನ್ಯತಾ ಭಾವದಲ್ಲಿದ್ದಾರೆ.

ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಅಧಿಕಾರಿಗಳು ಹಾಗೂ ಗಣ್ಯರು ವಿದ್ಯಾರ್ಥಿನಿಯ ನಿವಾಸಕ್ಕೆ ಭೇಟಿ ನೀಡಿ ಸಿಹಿ ತಿನ್ನಿಸಿ ಅಭಿನಂದಿಸಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪತ್ರಕರ್ತರ ಧ್ವನಿ ಸಂಘದಿಂದ 10 ಸಾವಿರ ರೂ. ಸಹಾಯಧನ ನೀಡಿ ವಿದ್ಯಾರ್ಥಿಯನ್ನು ಪ್ರೋತ್ಸಾಯಿಸಲಾಯಿತು.

ಇಲ್ಲಿನ ಕುಮಾರೇಶ್ವರ ಶಾಲೆಯಲ್ಲಿ ವ್ಯಾಸಂಗ ಮಾಡಿದ ಈ ವಿದ್ಯಾರ್ಥಿನಿ ಆಂಗ್ಲಭಾಷೆ 125, ಕನ್ನಡ 100, ಹಿಂದಿ 100, ಗಣಿತ 100, ವಿಜ್ಞಾನ 100, ಸಮಾಜ ವಿಜ್ಞಾನ 100 ಅಂಕ ಗಳಿಸಿ ತಾಯಿಯ ಮೊಗದಲ್ಲಿ ಸಂತಸ ಮೂಡಿಸಿದ್ದಾಳೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಇಲ್ಲಿನ ಅಕ್ಕಿ ಓಣಿಯಲ್ಲಿ ಎಲ್ಲಿಲ್ಲದ ಸಂಭ್ರಮ ಮನೆ ಮಾಡಿದೆ. ಶೇ.100 ಅಂಕಗಳೊಂದಿಗೆ ಉತ್ತೀರ್ಣನಾದ ಅನುಪಮಾ ಶ್ರೀಶೈಲ ಹಿರೇಹೊಳಿ ಅವರ ನಿವಾಸಕ್ಕೆ ಅಧಿಕಾರಿಗಳು ಸೇರಿ ಗಣ್ಯರು ಭೇಟಿ ನೀಡಿ ಅಭಿನಂದಿಸಿದ್ದಾರೆ.

ಶಾಲೆಯ ಪ್ರಾರಂಭದ ದಿನದಿಂದಲೇ ಶಿಕ್ಷಕರ ಮಾರ್ಗದರ್ಶನದಂತೆ ಅಭ್ಯಾಸ ಆರಂಭಿಸಿದೆ. ಮನರಂಜನೆಗೆ ಸಮಯ ನೀಡದೇ ಸದಾ ಅಧ್ಯಯನದಲ್ಲಿ ತೊಡಗಿರುತ್ತಿದ್ದೆ. ಮದುವೆ, ಸಮಾರಂಭಗಳಿಂದ ದೂರ ಇದ್ದು, ಪಠ್ಯದ ವಿಷಯಕ್ಕೆ ಸಂಬಂಧಿಸಿದಂತೆ ಮೊಬೈಲ್ ಬಳಸುತ್ತಿದ್ದೆ. ಪರೀಕ್ಷೆಯಲ್ಲಿ ಶೇ 100 ರಷ್ಟು ಅಂಕ ಪಡೆಯುವ ಇಂಗಿತವನ್ನು ಮೊದಲೇ ಶಿಕ್ಷಕರಿಗೆ ತಿಳಿಸಿದ್ದೆ. ಅದರಂತೆ ಅಂಕ ಲಭಿಸಿದ್ದು ಖುಷಿ ತಂದಿದೆ. ಮುಂದೆ ಉನ್ನತ ವ್ಯಾಸಂಗ ಕೈಗೊಂಡು ಭವಿಷ್ಯದಲ್ಲಿ ಐಎಎಸ್ ಅಧಿಕಾರಿ ಆಗುವ ಕನಸು ನನಗಿದೆ ಎಂದು ಮನದಾಳದ ಮಾತುಗಳನ್ನು ‘ಉದಯವಾಣಿ’ಯೊಂದಿಗೆ ಅನುಪಮಾ ಹಂಚಿಕೊಂಡಿದ್ದಾಳೆ.

ಪುಸ್ತಗಳನ್ನೇ ಪ್ರಪಂಚವಾಗಿಸಿಕೊಂಡ ಅನುಪಮಾ ಸದಾ ಓದಿನಲ್ಲಿ ಕಾಲ ಕಳೆಯುತ್ತದ್ದಳು. ಶಾಲೆಯಲ್ಲೂ ಓದು, ಮನೆಯಲ್ಲೂ ಓದು, ಆಟವಾಡುವಾಗಲೂ ಓದು ಹೀಗೆ ಓದೇ ಅವಳ ದಿನಚರಿಯಾಗಿತ್ತು. ಮಗಳ ಓದಿಗೆ ತೊಂದರೆ ಕೊಡಬಾರದೆಂದು ಅವಳ ಪಾಡಿಗೆ ಬಿಟ್ಟು, ಇತರೆ ಕೆಲಸದಲ್ಲಿ ನಾವು ತೊಡಗಿಕೊಳ್ಳುತ್ತಿದ್ದೇವು. ಆದರೆ 2021 ರಲ್ಲಿ ನನ್ನ ಪತಿ ಅನಾರೋಗ್ಯದ ಕಾರಣ ನಿಧನ ಹೊಂದಿದರು. ಅಲ್ಲಿಂದ ಕುಟುಂಬ ನಿರ್ವಹಣೆ ಕಷ್ಟಕರವಾಯಿತು. ಹೀಗಾಗಿ ಜೋಶಿ ಫೌಂಡೇಷನ್ ಕೆಲಸ ಮಾಡುತ್ತಾ ಮನೆಯ ಜವಾಬ್ದಾರಿಯನ್ನು ಅಲ್ಪ ಸಲ್ಪ ನಿಭಾಯಿಸುತ್ತಾ ಬಂದಿದ್ದೇನೆ. ಇದೀಗ ಮಗಳ ಈ ಸಾಧನೆ ಅತೀವ ಸಂತೋಷವನ್ನುಂಟು ಮಾಡಿದೆ. ಬರುವ ಸಂಬಳ ಕುಟುಂಬ ನಿರ್ವಹಣೆಗೆ ಸಾಲದು. ಮಗಳು ಐಎಎಸ್ ಅಧಿಕಾರಿಯಾಗುವ ಕನಸು ಕಂಡಿದ್ದಾಳೆ. ನನಗೆ ಎಷ್ಟೇ ಕಷ್ಟಗಳೂ ಬಂದರೂ ಅವಳ ಓದಿಗೆ ಕೊರತೆಯಾಗದಂತೆ ನೋಡಿಕೊಳ್ಳತ್ತೇನೆ. ಆರ್ಥಿಕ ಪರಿಸ್ಥಿತಿ ಸರಿಯಿಲ್ಲದ ಕಾರಣ ಸಹಾಯದ ಅಗತ್ಯವಿದೆ ಎಂದು ವಿದ್ಯಾರ್ಥಿನಿಯ ತಾಯಿ ರಾಜೇಶ್ವರಿ ಹೀರೆಹೊಳಿ ಹೇಳಿಕೊಂಡಿದ್ದಾರೆ.

-ಡಿ.ಎಸ್. ಕೊಪ್ಪದ

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.