![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 9, 2023, 2:43 PM IST
ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಾಯಕರು ಸೋನಿಯಾ ಗಾಂಧಿ ಅಲ್ಲ, ಬಿಜೆಪಿಯ ವಸುಂಧರಾ ರಾಜೇ ಎಂದು ತೋರುತ್ತಿದೆ ಎಂದು ಸಚಿನ್ ಪೈಲಟ್ ಇಂದು ಹೇಳಿದ್ದಾರೆ.
ಪಕ್ಷದ ಹಿರಿಯ ಅಶೋಕ್ ಗೆಹ್ಲೋಟ್ ಅವರ ಮೇಲೆ ಮತ್ತೆ ವಾಗ್ದಾಳಿ ನಡೆಸಿರುವ ಸಚಿನ್ ಪೈಲಟ್ ಅವರು ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷದ ಅವಕಾಶಗಳನ್ನು ಹಾಳುಮಾಡಲು ಬಯಸುವುದಿಲ್ಲ. ಆದ್ದರಿಂದ ಪಕ್ಷವನ್ನು ತೊರೆಯುವುದಿಲ್ಲ ಎಂದು ಹೇಳಿದರು. ಆದರೆ, ಭ್ರಷ್ಟಾಚಾರವನ್ನು ಬಯಲು ಮಾಡಲು ಅಜ್ಮೀರ್ ನಿಂದ ಜೈಪುರದವರೆಗೆ “ಜನಸಂಘರ್ಷ್ ಯಾತ್ರೆ”ಯನ್ನು ನಡೆಸುವುದಾಗಿ ಘೋಷಿಸಿದರು.
2020 ರಲ್ಲಿ ಸಚಿನ್ ಪೈಲಟ್ ಕೆಲವು ಶಾಸಕರೊಂದಿಗೆ ದಂಗೆ ಎದ್ದಾಗ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ತಮ್ಮ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದರು ಎಂದು ಅಶೋಕ್ ಗೆಹ್ಲೋಟ್ ಅವರ ಹೇಳಿಕೆಯ ಬಳಿಕ ಸಚಿನ್ ಪೈಲಟ್ ತಿರುಗೇಟು ನೀಡಿದ್ದಾರೆ.
ಧೋಲ್ಪುರದಲ್ಲಿ ಮುಖ್ಯಮಂತ್ರಿಯವರ ಭಾಷಣವನ್ನು ಕೇಳಿದ ನಂತರ, ಅವರ ನಾಯಕಿ ಸೋನಿಯಾ ಗಾಂಧಿ ಅಲ್ಲ, ಆದರೆ ಅವರ ನಾಯಕಿ ವಸುಂಧರಾ ರಾಜೇ ಎಂದು ನಾನು ಭಾವಿಸುತ್ತೇನೆ ಎಂದು ಸಚಿನ್ ಪೈಲಟ್ ಸುದ್ದಿಗಾರರಿಗೆ ತಿಳಿಸಿದರು.
“ಬಿಜೆಪಿ ತನ್ನ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸಿದೆ ಎಂದು ಅವರು (ಗೆಹ್ಲೋಟ್) ಆರೋಪಿಸಿದ್ದಾರೆ. ನಂತರ ಅವರು ಬಿಜೆಪಿ ನಾಯಕರೊಬ್ಬರು ತಮ್ಮ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದರು ಎಂದು ಹೇಳುತ್ತಾರೆ. ಈ ಎರಡು ವಿರುದ್ಧ ಹೇಳಿಕೆಯನ್ನು ಅವರೇ ವಿವರಿಸಬೇಕು” ಎಂದಿದ್ದಾರೆ.
ಭಾನುವಾರ ನಡೆದ ರ್ಯಾಲಿಯಲ್ಲಿ ಅಶೋಕ್ ಗೆಹ್ಲೋಟ್ ಅವರು ವಸುಂಧರಾ ರಾಜೆ ಮತ್ತು ಇತರ ಇಬ್ಬರು ಬಿಜೆಪಿ ನಾಯಕರು ತಮ್ಮ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದರು, ಬಿಜೆಪಿಗೆ ಸೇರಲು ಮತ್ತು ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಶಾಸಕರಿಗೆ ಹಣವನ್ನು ನೀಡಲಾಗಿದೆ ಎಂದು ಹೇಳಿದ್ದರು. ಬಂಡಾಯವೆದ್ದಿರುವ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ ಗೆಹ್ಲೋಟ್, ಅವರು ಹಣವನ್ನು ಹಿಂತಿರುಗಿಸಬೇಕು ಎಂದು ಹೇಳಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.