‘ಅಭ್ಯರ್ಥಿಗಳೂ ಕಾವಲು ಕಾಯಬಹುದು..’: ಈ ಬಾರಿ ಮತಯಂತ್ರ ಸುರಕ್ಷತೆಗೆ ಹೊಸ ವ್ಯವಸ್ಥೆ
Team Udayavani, May 9, 2023, 6:58 PM IST
ಮಂಗಳೂರು: ಮತದಾನ ನಡೆದ ಬಳಿಕ ಮತ ಯಂತ್ರಗಳನ್ನು ಹಿಂದಕ್ಕೆ ತಂದು ಭದ್ರತಾ ಕೊಠಡಿಗಳಲ್ಲಿ ಇರಿಸಲಾಗುತ್ತದೆ, ಆ ಬಳಿಕ ಮತ ಎಣಿಕೆಯಂದು ಅವುಗಳನ್ನು ಹೊರತೆಗೆದು ಎಣಿಕೆ ಮಾಡಲಾಗುತ್ತದೆ.
ಡಿಮಸ್ಟರಿಂಗ್ ಕೇಂದ್ರಗಳಿಂದ ಭದ್ರತಾ ಕೊಠಡಿಗೆ ಮತಯಂತ್ರ ತರುವಾಗ ಹಾಗೂ ಭದ್ರತಾ ಕೊಠಡಿಗಳಲ್ಲಿ ಇರಿಸಿರುವಾಗ ಕೇವಲ ಕೇಂದ್ರೀಯ ಅರೆ ಮಿಲಿಟರಿ ಪೊಲೀಸ್ ಪಡೆ (ಸಿಪಿಎಂಎಫ್) ಭದ್ರತೆ ಕೊಡುವುದು ಸಹಜ. ಈ ಬಾರಿ ಚುನಾವಣಾ ಆಯೋಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭದ್ರತೆ ನೀಡುವುದು ಹಾಗೂ ವೀಕ್ಷಣೆಗೆ ಮತ್ತೊಂದು ವರ್ಗಕ್ಕೆ ಅವಕಾಶ ಮಾಡಿಕೊಟ್ಟಿದೆ.
ಇದನ್ನೂ ಓದಿ:ಕಾಂಗ್ರೆಸ್ ತುಷ್ಟೀಕರಣದ ಪಕ್ಷ ಬಿಜೆಪಿ ವಿಕಾಸದ ಪಕ್ಷ : ಅಸ್ಸಾಂ ಸಿಎಂ ಹಿಮಂತ್ ಶರ್ಮ
ಹೌದು. ಈ ಬಾರಿ ಪಕ್ಷಗಳ ಅಭ್ಯರ್ಥಿ ಅಥವಾ ಅವರ ಪ್ರತಿನಿಧಿ ಮತಯಂತ್ರಗಳನ್ನು ಭದ್ರತಾ ಕೊಠಡಿಗೆ ತರುವ ವೇಳೆ ಕೇಂದ್ರೀಯ ಪೊಲೀಸ್ ಬಲದ ವಾಹನದ ಹಿಂದೆ ಪ್ರತ್ಯೇಕ ವಾಹನದಲ್ಲಿ ಬರಬಹುದು. ಅಷ್ಟೇ ಅಲ್ಲ ಸ್ಟ್ರಾಂಗ್ ರೂಂನಲ್ಲಿ ಇರಿಸಿದ ಬಳಿಕ ಅಭ್ಯರ್ಥಿಗಳು/ ಅವರ ಏಜೆಂಟರು/ ಪ್ರತಿನಿಧಿಗಳು (ಯರಾದರೂ ಒಬ್ಬರು ಮಾತ್ರ) ಅದೇ ಕೇಂದ್ರದಲ್ಲಿ ಅವರಿಗೆ ನಿಗದಿ ಪಡಿಸಿದ ಕೊಠಡಿಯಲ್ಲಿ ಇರಬಹುದು. ಭದ್ರತಾ ಕೊಠಡಿಯ ಸಿಸಿಟಿವಿಯನ್ನು ಅವರಿಗೆ ನೇರವಾಗಿ ವೀಕ್ಷಿಸಲು ಈ ಬಾರಿ ಅವಕಾಶ ಇದೆ.
ಮಂಗಳೂರಿನ ಎನ್ಐಟಿಕೆಯಲ್ಲಿ ಭದ್ರತಾ ಕೊಠಡಿ ಇದ್ದು, ಅದೇ ಕ್ಯಾಂಪಸ್ನಲ್ಲಿ ಅಭ್ಯರ್ಥಿ/ಪ್ರತಿನಿಧಿಗಳಿಗೆ ಮೇ 13ರ ವರೆಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿರುವುದು ಈ ಬಾರಿಯ ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.