Polling Booths; ಉಡುಪಿ ಜಿಲ್ಲೆಯ 1111 ಮತಗಟ್ಟೆಗಳು ಸಜ್ಜು


Team Udayavani, May 10, 2023, 7:29 AM IST

ಉಡುಪಿ ಜಿಲ್ಲೆಯ 1111 ಮತಗಟ್ಟೆಗಳು ಸಜ್ಜು

ಉಡುಪಿ: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿರುವ 1,111 ಮತಗಟ್ಟೆ ಕೇಂದ್ರಗಳು ಮತದಾನಕ್ಕೆ ಸಜ್ಜಾಗಿವೆ. ಮಂಗಳವಾರ ಬೈಂದೂರು ವಿಧಾನ ಸಭಾ ಕ್ಷೇತ್ರದ ಬೈಂದೂರು ಪ.ಪೂ.ಕಾಲೇಜು, ಕುಂದಾಪುರದ ಭಂಡಾರ್‌ಕಾರ್ಸ್‌ ಆರ್ಟ್ಸ್ ಆ್ಯಂಡ್‌ ಸೈನ್ಸ್‌ ಕಾಲೇಜು, ಉಡುಪಿಯ ಸೈಂಟ್‌ ಸಿಸಿಲಿ ಎಜುಕೇಶನ್‌ ಟ್ರಸ್ಟ್‌ ಬ್ರಹ್ಮಗಿರಿ, ಕಾಪುವಿನ ದಂಡತೀರ್ಥ ಪಿಯು ಕಾಲೇಜು ಉಳಿಯಾರಗೋಳಿ, ಕಾರ್ಕಳದ ಮಂಜುನಾಥ ಪೈ ಮೆಮೋರಿಯಲ್‌ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್‌ ನಡೆಯಿತು. ಆಯಾ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಿಗೆ ಸಿಬಂದಿ ಬ್ಯಾಲೆಟ್‌ ಯುನಿಟ್‌, ಕಂಟ್ರೋಲ್‌ ಯುನಿಟ್‌, ವಿವಿ ಪ್ಯಾಟ್‌ಗಳೊಂದಿಗೆ ಆಯಾ ಮತಗಟ್ಟೆಗಳಿಗೆ ತೆರಳಿದರು. ಮಸ್ಟರಿಂಗ್‌ ಕೇಂದ್ರದಿಂದ ಮತಗಟ್ಟೆಗೆ ತೆರಳಲು ಸಿಬಂದಿಗೆ ವಾಹನ ವ್ಯವಸ್ಥೆ ಕಲ್ಪಿಸ ಲಾಯಿತು. ಚಹಾ ತಿಂಡಿ, ಊಟೋಪ ಚಾರದ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು.

ಬಿಗು ಭದ್ರತೆ
ಮತದಾನ ನಡೆಯುವ ಮತಗಟ್ಟೆ ಕೇಂದ್ರದ ಸುತ್ತಲೂ ಬಿಗು ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ. ಮತದಾನ ಪೂರ್ಣಗೊಳ್ಳುವವರೆಗೆ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ.

ಅಧಿಕಾರಿಗಳ ಭೇಟಿ
ಮಂಗಳವಾರ ವಿವಿಧ ಮಸ್ಟರಿಂಗ್‌ ಕೇಂದ್ರಗಳಿಗೆ ಚುನಾವಣಾ ವೀಕ್ಷ ಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಚುನಾವಣಾಧಿಕಾರಿ ಗಳು ಭೇಟಿ ನೀಡಿ ಕಾರ್ಯವೈಖರಿ ಯನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ., ಜಿ.ಪಂ. ಸಿಇಒ ಪ್ರಸನ್ನ ಎಚ್‌. ಅವರು ಬೈಂದೂರು, ಕುಂದಾಪುರ ಸಹಿತ ಜಿಲ್ಲೆಯ ವಿವಿಧ ಮಸ್ಟರಿಂಗ್‌ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಸಿಬಂದಿಗೆ ಅಗತ್ಯ ಮಾರ್ಗ ದರ್ಶನ ನೀಡಿದರು.

ಮತಗಟ್ಟೆಗಳಿಗೆ ಸಿಂಗಾರ
ಜಿಲ್ಲೆಯಲ್ಲಿ ಒಟ್ಟು 25 ಸಖೀ ಮತಗಟ್ಟೆ, 5 ಪಿಡಬ್ಲೂಡಿ, 5 ಯಂಗ್‌ ವೋಟರ್, 5 ವಿಷಯಾಧಾರಿತ ಹಾಗೂ 1 ಎಥಿ°ಕ್‌ ಮತ ಗಟ್ಟೆ ಮಾಡಲಾಗಿದೆ. ಇಲ್ಲಿ ಎಲ್ಲ ರೀತಿಯ ಸಿದ್ಧತೆಗಳು ಪೂರ್ಣಗೊಂಡಿದ್ದು, ವಿವಿಧ ಬಗೆಯ ಅಲಂಕಾರ ಮಾಡಲಾಗಿದೆ.

ಚುನಾವಣೆ: ಅಧಿಕಾರಿಗಳಿಂದ ಅಂತಿಮ ಸಿದ್ಧತೆ ಪರಿಶೀಲನೆ
ಜಿಲ್ಲಾದ್ಯಂತ 1336 ಬ್ಯಾಲೆಟ್‌ ಯುನಿಟ್‌, 1336 ಕಂಟ್ರೋಲ್‌ ಯುನಿಟ್‌ ಹಾಗೂ 1446 ವಿವಿಪ್ಯಾಟ್‌ ವ್ಯವಸ್ಥೆ ಮಾಡಲಾಗಿದೆ. 176 ಬಸ್‌, 36 ಮಿನಿ ಬಸ್‌, 54 ಟೆಂಪೋ ಟ್ರಾವೆಲರ್‌/ ಮ್ಯಾಕ್ಸಿಕ್ಯಾಬ್‌/ ವ್ಯಾನ್‌, 68 ಜೀಪ್‌ ವ್ಯವಸ್ಥೆ
ಮಾಡಲಾಗಿದೆ. ಆಯಾ ಮಾಸ್ಟರಿಂಗ್‌ ಕೇಂದ್ರದಿಂದ ಈ ವಾಹನಗಳ ಮೂಲಕ ಅಧಿಕಾರಿ, ಸಿಬಂದಿಯನ್ನು ಮತಯಂತ್ರದೊಂದಿಗೆ ಮತಗಟ್ಟೆಗೆ ಕರೆದೊಯ್ದವು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.