Kollur Mookambika Temple: ಬ್ರಹ್ಮಕಲಶೋತ್ಸವದ ರಥೋತ್ಸವ ಸಂಪನ್ನ


Team Udayavani, May 10, 2023, 12:45 AM IST

Kollur Mookambika Temple: ಬ್ರಹ್ಮಕಲಶೋತ್ಸವದ ರಥೋತ್ಸವ ಸಂಪನ್ನ

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಲುವಾಗಿ ಮೇ 9ರಂದು ಅಪಾರ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮದಿಂದ ಜರುಗಿತು.

ದೇಗುಲದ ತಂತ್ರಿ ಡಾ| ನಿತ್ಯಾನಂದ ಅಡಿಗ ಅವರ ನೇತೃತ್ವದಲ್ಲಿ ಅ ಧಿವಾಸ ಹೋಮ, ರಥಶುದ್ಧಿ ಹೋಮ ಹಾಗೂ ಮಹಾಪೂಜೆ ನಡೆಯಿತು. ರಥಾರೋಹಣಕ್ಕೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ, ಕಾರ್ಯನಿರ್ವಹಣಾ ಧಿಕಾರಿ ಎಸ್‌.ಸಿ. ರವಿ ಕೊಟಾರಗಸ್ತಿ ಚಾಲನೆ ನೀಡಿದರು.

ಸಮಿತಿಯ ಸದಸ್ಯರಾದ ಡಾ| ಕೆ. ರಾಮ ಚಂದ್ರ ಅಡಿಗ, ಡಾ| ಅತುಲ್‌ ಕುಮಾರ್‌ ಶೆಟ್ಟಿ, ಜಯಾನಂದ ಹೋಬಳಿದಾರ, ಗಣೇಶ ಕಿಣಿ ಬೆಳ್ವೆ, ಸಂಧ್ಯಾರಮೇಶ, ಗೋಪಾಲಕೃಷ್ಣ ನಾಡ, ಶೇಖರ ಪೂಜಾರಿ, ರತ್ನಾ ಆರ್‌. ಕುಂದರ್‌, ಉಪ ಕಾರ್ಯ ನಿರ್ವಹಣಾಧಿ ಕಾರಿ ಗೋವಿಂದ ನಾಯ್ಕ, ರಥಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ, ರಾಜಗೋಪಾಲ ಆಚಾರ್ಯ ಉಪಸ್ಥಿತರಿದ್ದರು.

ನಾಳೆ ಧ್ವಜಾವರೋಹಣ
ಬ್ರಹ್ಮಕಲಶೋತ್ಸವದ ಸಲುವಾಗಿ ನಡೆಯು ತ್ತಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮೇ 11ರಂದು ಪೂರ್ಣಕುಂಭಾಭಿಷೇಕ ಹಾಗೂ ಆಶೀರ್ವಚನ ದೊಡನೆ ಪೂರ್ಣಗೊಳ್ಳುವುದು ಎಂದು ದೇಗುಲದ ವ್ಯವ ಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ ಹಾಗೂ ಕಾರ್ಯನಿರ್ವಹಣಾಧಿ ಕಾರಿ ರವಿ ಕೊಟಾರಗಸ್ತಿ ತಿಳಿಸಿದ್ದಾರೆ.

ಸಮ್ಮಾನ
ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ರಥ ಶ್ರೀ ದೇಗುಲಕ್ಕೆ ಕಾಣಿಕೆ ರೂಪದಲ್ಲಿ ನೀಡಿದ ದಾನಿಗಳಾದ ಉದ್ಯಮಿ ಸುನಿಲ್‌ ಆರ್‌. ಶೆಟ್ಟಿ ದಂಪತಿ ಹಾಗೂ ವೀರಭದ್ರ ದೇಗುಲದ ಪುನರ್‌ ನಿರ್ಮಾಣಕ್ಕಾಗಿ ಸುಮಾರು 2 ಕೋಟಿ ರೂ. ಮೊತ್ತವನ್ನು ದೇಣಿಗೆ ರೂಪದಲ್ಲಿ ನೀಡಿದ ಹೈದರಾಬಾದಿನ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರನ್ನು ಗೌರವಿಸಲಾಯಿತು.

20 ಸಾವಿರಕ್ಕೂ ಮಿಕ್ಕಿ ಭಕ್ತರು ಸಾಕ್ಷಿ
ಕರ್ನಾಟಕ ಸಹಿತ ವಿವಿಧ ರಾಜ್ಯಗಳಿಂದ ಆಗಮಿಸಿದ 20 ಸಾವಿರಕ್ಕೂ ಮಿಕ್ಕಿ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Gangolli: Disgusted person commits suicide

Gangolli: ಜುಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.