Election 2023; ಹಲವೆಡೆ ಕೈಕೊಟ್ಟ ಮತಯಂತ್ರ; ಹಸೆಮಣೆ ಏರುವ ಮುನ್ನ ಮತಚಲಾಯಿಸಿದ ನವವಧು

ಈದುವಿನಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಮತದಾನ ವಿಳಂಬವಾಗಲು ಕಾರಣವಾಗಿದೆ

Team Udayavani, May 10, 2023, 12:13 PM IST

Election 2023; ಹಲವೆಡೆ ಕೈಕೊಟ್ಟ ಮತಯಂತ್ರ; ಹಸೆಮಣೆ ಏರುವ ಮುನ್ನ ಮತಚಲಾಯಿಸಿದ ನವವಧು

ಚಿಕ್ಕಮಗಳೂರು:ಪ್ರಜಾಪ್ರಭುತ್ವದ ಹಬ್ಬ ಕಾಫಿನಾಡಿನಲ್ಲಿ ಜೋರಾಗಿದ್ದು, ಯುವಕರು, ಯುವತಿಯರು, ಮಹಿಳೆಯರು,   ಪುರುಷರು ಅತ್ಯುತ್ಸಹದಿಂದ ಮತಗಟ್ಟೆಗೆ ಆಗಮಿಸಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಜಿಲ್ಲೆಯ ಮೂಡಿಗೆರೆಯಲ್ಲಿ ಬುಧವಾರ (ಮೇ 10) ಮದು ಮಗಳು ಹಸೆಮಣೆ ಏರುವ ಮೊದಲು ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಯವ ಮೂಲಕ ಮತದಾನದ ಮಹತ್ವವನ್ನು ಸಾರಿದ್ದಾರೆ.

ಇದನ್ನೂ ಓದಿ:Vote ಹಾಕಲು ಅಮೆರಿಕದಿಂದ ಲಕ್ಷಾಂತರ ರೂ ಖರ್ಚು ಮಾಡಿ ಬಂದರು, ಆದರೆ ಆಗಿದ್ದೇ ಬೇರೆ!

ಮೂಡಿಗೆರೆಯ ಚಂದ್ರಾಪುರ ಗ್ರಾಮದ ಎಸ್.ಎಂ.ರಾಜು  ಅವರ ಮಗಳಾದ ಸುಶ್ಮಿತ ಅವರ ವಿವಾಹವು ಬುಧವಾರ ಮೂಡಿಗೆರೆ ರೈತಭವನದಲ್ಲಿ ಇದ್ದು, ಮದುಮಗಳು ಶೃಂಗಾರಗೊಂಡು ಮಾಕೋನ ಹಳ್ಳಿಯಲ್ಲಿ ತೆರೆಯಲಾಗಿದ್ದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು. ನಂತರ ಮದುವೆ ಮಂಟಪಕ್ಕೆ ಆಗಮಿಸಿದ್ದರು.

ಮತಗಟ್ಟೆ ಅಧಿಕಾರಿ ಯಡವಟ್ಟು; ಚಾಮನೂರು ಮತ ಕೇಂದ್ರದಲ್ಲಿ ಗಲಾಟೆ

ಕಲಬುರಗಿ: ಚಿತ್ತಾಪುರ ತಾಲೂಕಿನ ಚಾಮನೂರು ಮತ ಕೇಂದ್ರದಲ್ಲಿ ಮತಗಟ್ಟೆ ಅಧಿಕಾರಿಯೊಬ್ಬರು ಮತದಾರನ ಮತವನ್ನು ಬದಲಿ ಪಕ್ಷಕ್ಕೆ ಹಾಕಿದ್ದರಿಂದ ಗಲಾಟೆ ಆಗಿರುವ ಘಟನೆ ಜರುಗಿದೆ. ಬಿ.ಸಿ. ಚವ್ಹಾಣ ಎಂಬ ಚುನಾವಣಾ ಅಧಿಕಾರಿಯೇ ಈ ಗಲಾಟೆಗೆ ಕಾರಣ ಎನ್ನಲಾಗಿದೆ.

ಈ ಅಧಿಕಾರಿ ಮತ ಗಟ್ಟೆಗೆ ಬಂದಿದ್ದ ಬಸಮ್ಮ ಯಂಟ್ಮನ  ಎಂಬ ಮಹಿಳೆ ಮತಗಟ್ಟೆಗೆ ಹೋಗಿ ಕಾಂಗ್ರೆಸ್‌ ಅಭ್ಯರ್ಥಿಯ ಚಿಹ್ನೆಗೆ ಬಟನ್ ಒತ್ತಲು ತಿಳಿಸಿದ್ದಾಳೆ. ಆದರೆ ಅಧಿಕಾರಿ ಬಿಜೆಪಿ ಅಭ್ಯರ್ಥಿಯ ಮುಂದಿರುವ ಬಟನ್ ಒತ್ತಿದ್ದಾರೆ. ಅದು ಮಹಿಳೆ ಗಮನಕ್ಕೆ ಬಂದು ಆಕ್ಷೇಪ ವ್ಯಕ್ತಪಡಿಸಿದಾಗ ಘಟನೆ ಬಯಲಿಗೆ ಬಂದು ಗಲಾಟೆಯಾಗಿದೆ.

ಇದಕ್ಕೂ ಮೊದಲು ಮತಯಂತ್ರ ಪರೀಕ್ಷೆ ಸಮಯದಲ್ಲಿ ಸಹ ಬಿಜೆಪಿಗೆ ಸುಮಾರು ಐವತ್ತಕ್ಕೂ ಅಧಿಕ  ಮತ ಹಾಕಲಾಗಿದೆ ಎಂದು ಹೇಳಲಾಗಿದ್ದು, ಸ್ಥಳೀಯರು ವಿರೋಧ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ವಿಷಯ ತಿಳಿದು  ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಚಿತ್ತಾಪುರ ಚುನಾವಣಾಧಿಕಾರಿಗೆ ವಿಷಯ ತಿಳಿಸಿ ಅಧಿಕಾರಿಯನ್ನು ಬದಲಿಸಲು ಒತ್ತಾಯಿಸಿದ್ದರು.

ಇದರಿಂದಾಗಿ ಅಧಿಕಾರಿಯನ್ನು ಬದಲಾವಣೆ ಮಾಡಿದ ಬಳಿಕ ಮತದಾನ ಪುನರಾರಂಭಗೊಂಡಿತು ಎಂದು ಮೂಲಗಳು ತಿಳಿಸಿವೆ.

45 ನಿಮಿಷ ಮತದಾನ ವಿಳಂಬ:

ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ ಗೋಕುಲಂ ಲಯನ್ಸ್‌ ಶಾಲೆಯ ಮತಗಟ್ಟೆಯಲ್ಲಿ ಇವಿಎಂ ಕೈಕೊಟ್ಟ ಪರಿಣಾಮ ಸುಮಾರು 45 ನಿಮಿಷಗಳ ಕಾಲ ತಡವಾಗಿ ಮತದಾನ ಆರಂಭಗೊಂಡಿರುವುದಾಗಿ ವರದಿ ತಿಳಿಸಿದೆ.

ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದ ಮತಗಟ್ಟೆ ಸಂಖ್ಯೆ 105ರಲ್ಲಿ ಇವಿಎಂ ದೋಷದಿಂದಾಗಿ 8ಗಂಟೆಯಾದರೂ ಮತದಾನ ಆರಂಭವಾಗಿಲ್ಲ. ಏತನ್ಮಧ್ಯೆ ಹಲವು ಮತದಾರರು ಮತದಾನ ಮಾಡದೇ ವಾಪಸ್ ತೆರಳಿದ್ದಾರೆಂದು ವರದಿ ವಿವರಿಸಿದೆ.

ಕಾರ್ಕಳ ತಾಲೂಕಿನ ಈದುವಿನಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಮತದಾನ ವಿಳಂಬವಾಗಲು ಕಾರಣವಾಗಿದೆ. ಅದೇ ರೀತಿ ಉಡುಪಿ ಜಿಲ್ಲೆಯ ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇವಿಎಂ ನಿಧಾನಗತಿಯಲ್ಲಿ ಕಾರ್ಯಾಚರಿಸುತ್ತಿರುವುದರಿಂದ ಮತದಾನ ವಿಳಂಬವಾಗುತ್ತಿದೆ ಎಂದು ಮತದಾರರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.