ತೆನೆ- ಕೈ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ
Team Udayavani, May 11, 2023, 2:24 PM IST
ಶ್ರೀರಂಗಪಟ್ಟಣ: ತಾಲೂಕಿನಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಕೆಲವೆಡೆ ಅಹಿತಕರ ಘಟನೆ ಹೊರತುಪಡಿಸಿ, ಬಹುತೇಕ ಶಾಂತಿಯುವ ಮತದಾನ ವಾಗಿದ್ದು, ಶೇ.%86.24ರಷ್ಟು ಮತದಾನವಾಗಿದೆ. ಕ್ಷೇತ್ರದಲ್ಲಿ ಒಟ್ಟು 2,13,187 ಮತದಾರರಿದ್ದು, (ಪುರುಷರು- 1,04,656, ಮಹಿಳೆಯರು- 1,08,492, ಇತರೆ- 39) ಪುರುಷರು- 90,963, ಮಹಿಳೆಯರು- 92,906, ಇತರರು- 3 ಸೇರಿ ಒಟ್ಟು 1,83,852 ಮಂದಿ ಮತದಾನ ಮಾಡಿದ್ದಾರೆ.
ತಾಲೂಕಿನ ಅರಕೆರೆ, ಗಂಜಾಂ ಮತಗಟ್ಟೆ ಬಳಿ ಮತಯಾಚಿಸುತ್ತಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಹಾಗೂ ಅರೆಸೇನಾ ತುಕಡಿ ಮಧ್ಯ ಪ್ರವೇಶಿಸಿ, ಶಾಂತಿಗೊಳಿಸಿದರು.
ಕ್ಷೇತ್ರದಲ್ಲಿ 249 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ನಡೆದಿದ್ದು, ಅವುಗಳ ಪೈಕಿ 125 ಮತೆಗಟ್ಟೆಗಳನ್ನು ಸೂಕ್ಷ್ಮ , ಅತಿ ಸೂಕ್ಷ್ಮ ಎಂದು ಪರಿಗಣಿಸಿ, ಸಿಸಿ ಟೀವಿ ಕಣ್ಗಾವಲು ಜೊತೆಗೆ ಅರೆಸೇನೆ ಹಾಗೂ ಪೊಲೀಸರನ್ನು ನಿಯೋಜಿಸಿ, ಮತದಾನ ಪ್ರಕ್ರಿಯೆ ನಡೆಸಲಾಯಿತು.
ಉತ್ಸಾಹದಿಂದ ಮತದಾನ: ಮೊದಲ ಬಾರಿಗೆ ಮತ ಚಲಾಯಿಸಿದ ಯುವಕ, ಯುವತಿಯರು ಹಾಗೂ ಹಿರಿಯ ನಾಗರಿಕರು ಸೇರಿದಂತೆ ಮಹಿಳೆಯರು ಬಿಸಿಲನ್ನು ಲೆಕ್ಕಿಸದೆ, ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಅಲ್ಲದೆ, ಕೆಲ ಗ್ರಾಮಗಳಲ್ಲಿ ಮತದಾರರನ್ನು ಕರೆತರಲು ಪಕ್ಷಗಳ ಮುಖಂಡರು, ಪ್ರತ್ಯೇಕವಾಗಿ ವಾಹನದ ವ್ಯವಸ್ಥೆ ಮಾಡಿದ್ದಲ್ಲದೆ, ಅಂತಿಮ ಕ್ಷಣದವರೆವಿಗೂ ಮತಯಾಚಿಸುತ್ತಿದ್ದ ದೃಶ್ಯ ಕಂಡು ಬಂತು.
ವೃದ್ಧರು ಹಾಗೂ ದಿವ್ಯಾಂಗರನ್ನು ವೀಲ್ಚೇರ್ ಮೂಲಕ ಮತಗಟ್ಟೆಗೆ ಕರೆತಂದು ಮತಚಲಾಯಿಸಿಲು ಸಹಾಯ ಮಾಡಿದರು. 8 ಗಂಟೆಯಾದರೂ ನಡೆದ ಮತದಾನ: ಕ್ಷೇತ್ರದ ಗಂಜಾಂ ಸೇರಿದಂತೆ ಒಟ್ಟು 6 ಮತಗಟ್ಟೆಗಳಲ್ಲಿ ರಾತ್ರಿ 7 ಗಂಟೆ ಹಾಗೂ ಕೊತ್ತತ್ತಿ ಹೋಬಳಿಯ 53 ಮತಗಟ್ಟೆಯಲ್ಲಿ ರಾತ್ರಿ 8ರವರೆಗೆ ಮತದಾನ ಪ್ರಕ್ರಿಯೆ ನಡೆಯಿತು.
ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಚುನಾವಣಾ ಆಯೋಗ ಸಮಯ ನಿಗದಿಪಡಿಸಿ ದ್ದಾದರೂ, ಹೆಚ್ಚು ಮತದಾರರು ಜಮಾಯಿಸಿದ್ದರಿಂದ ರಾತ್ರಿ 8 ಗಂಟೆ ವರೆವಿಗೂ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಗಂಜಾಂನ 181ರ ಮತಗಟ್ಟೆಯಲ್ಲಿ ಮತಯಂತ್ರಗಳ ಅದಲು ಬದಲು ಮಾಡಲಾಗಿದೆ ಎಂದು ಆರೋಪಿಸಿ, ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಸಿಬ್ಬಂದಿ ವಿರುದ್ಧ ಆರೋಪ ಮಾಡಿ, ಮಾತಿನ ಚಕಮಕಿ ನಡೆಯಿತು. ನಂತರ ಚುನಾವಣಾ ಧಿಕಾರಿಗಳು, ಪೊಲೀಸರು ಮಧ್ಯ ಪ್ರವೇಶಿಸಿ ಸಮಾ ಧಾನ ಪಡಿಸಿದರೆನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ
Mandya: ಕೆಎಸ್ಆರ್ ಟಿಸಿ ಬಸ್- ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್ ಬಯೋಮೆಟ್ರಿಕ್!
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.