ಗೆದ್ದ ಬಳಿಕ ಕೇಂದ್ರ ಸಚಿವ ಖೂಬಾ ವಿರುದ್ಧ ಪ್ರಭು ಚೌಹಾಣ್ ಆಕ್ರೋಶ, ಕಣ್ಣೀರು
ಭಾರಿ ಸೋಲಿನ ಶಾಕ್ ಬೆನ್ನಲ್ಲೇ ಬಿಜೆಪಿಯೊಳಗೆ ಭುಗಿಲೆದ್ದ ಆಕ್ರೋಶ
Team Udayavani, May 13, 2023, 7:26 PM IST
ಬೀದರ್ : ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಕಣ್ಣೀರು ಹಾಕುವ ಮೂಲಕ ಔರಾದ ಕ್ಷೇತ್ರದ ವಿಜೇತ ಅಭ್ಯರ್ಥಿ, ಮಾಜಿ ಸಚಿವ ಪ್ರಭು ಚೌಹಾಣ್ ಅವರು ಆಕೋಶ ಹೊರಹಾಕಿದ್ದಾರೆ.
ನಗರದಲ್ಲಿ ಸುದ್ದಿಗಾರರದೊಂದಿಗೆ ಮಾತನಾಡಿದ ಚವ್ಹಾಣ, ನನ್ನನ್ನು ಸೋಲಿಸಲು ನಮ್ಮ ಪಕ್ಷದವೇ ಆಗಿರುವ ಕೇಂದ್ರ ಸಚಿವ ಭಗವಂತ ಖೂಬಾ ‘ಬಿ’ ಟೀಮ್ ಕಟ್ಟಿಕೊಂಡು ಕುತಂತ್ರ ಮಾಡಿದರು. ಚುನಾವಣೆ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸೇರಿ ನೂರಾರು ಮುಖಂಡರು ಬಿಜೆಪಿ ತೊರೆದು, ನನ್ನ ಸೋಲಿಸಲು ಸಾಕಷ್ಟು ಷಡ್ಯಂತ್ರ ನಡೆಸಿದರು. ಆದರೆ, ಕೊನೆಗೂ ಕ್ಷೇತ್ರದ ಮತದಾರರು ನನ್ನನ್ನು ಕೈಹಿಡಿದಿದ್ದಾರೆ ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಖೂಬಾ ಗೆಲುವಿಗಾಗಿ ಶ್ರಮಿಸಿದೆ. ಆದರೆ, ಅವರು ನನಗೆ ದೋಖಾ ಮಾಡಿದರು. ನಾನೇನು ಅನ್ಯಾಯ ಮಾಡಿದ್ದೆ? ನನ್ನನ್ನು ಸೋಲಿಸಲು ಕಾಂಗ್ರೆಸ್ಗೆ ಫಂಡಿಂಗ್ ಮಾಡಲಾಗಿದೆ ಎನ್ನಲಾಗುತ್ತಿದೆ. ಪಕ್ಷಕ್ಕೆ ಮೋಸ ಮಾಡಿದರೆ ತಾಯಿಗೆ ದ್ರೋಹ ಬಗೆದಂತೆ, ಅವರಿಗೆ ದೇವರು ನೋಡಿಕೊಳ್ಳುತ್ತಾನೆ ಎಂದು ಬಿಕ್ಕಿ ಬಿಕ್ಕಿ ಅತ್ತ ಚವ್ಹಾಣ, ಸಚಿವ ಖೂಬಾ ಕುತಂತ್ರ ಕುರಿತು ಪಕ್ಷದ ವರಿಷ್ಠರಿಗೆ ದೂರು ಕೊಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.