![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 15, 2023, 11:20 AM IST
ಮುಂಬಯಿ: ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರಿಗೆ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಅಭಿಮಾನಿಗಳೊಂದಿಗೆ ಬಿಗ್ ಬಿ ಸದಾ ಆತ್ಮೀಯವಾಗಿ ಕ್ಷಣವನ್ನು ಕಳೆಯುತ್ತಾರೆ. ಆಗಾಗ ತಮ್ಮ ನಿವಾಸದ ಮುಂದೆ ಅಭಿಮಾನಿಗಳನ್ನು ಮೀಟ್ ಮಾಡುತ್ತಾರೆ.
ಅಮಿತಾಭ್ ಅವರ ಸರಳತೆಗೆ ಇತ್ತೀಚೆಗೆ ನಡೆದ ಘಟನೆಯೊಂದು ಉದಾಹರಣೆಯಾಗಿದೆ. ಅದನ್ನು ಸ್ವತಃ ಅಮಿತಾಭ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಅಭಿಮಾನಿಗೆ ಥ್ಯಾಂಕ್ಸ್ ಹೇಳಿದ್ದಾರೆ.
ಅಮಿತಾಭ್ ಅವರು ಶೂಟಿಂಗ್ ವೊಂದಕ್ಕೆ ತೆರಳುತ್ತಿದ್ದ ವೇಳೆ ಟ್ರಾಫಿಕ್ ನಲ್ಲಿ ಸಿಲುಕಿದ್ದಾರೆ. ಸರಿಯಾದ ಸಮಯಕ್ಕೆ ಅವರು ಚಿತ್ರೀಕರಣದಲ್ಲಿ ಭಾಗಿಯಾಗಬೇಕಿತ್ತು. ಇದೇ ಘಳಿಗೆಯಲ್ಲಿ ಫ್ಯಾನ್ ವೊಬ್ಬರು ಬೈಕ್ ನಲ್ಲಿ ಅಮಿತಾಭ್ ಅವರನ್ನು ಕೂರಿಸಿಕೊಂಡು ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ತಲುಪಿಸಿದ್ದಾರೆ.
ಅಭಿಮಾನಿಯ ಬೈಕ್ ಹಿಂಬದಿಯಲ್ಲಿ ಕೂತು ಅಮಿತಾಭ್ ಸವಾರಿ ಮಾಡಿದ್ದಾರೆ. ಅಭಿಮಾನಿಯ ಈ ಸೇವೆಯನ್ನು ಅಮಿತಾಭ್ ಮರೆಯದೇ ಅವರ ಸೇವಾ ಋಣಕ್ಕೆ ಪೋಸ್ಟ್ ವೊಂದನ್ನು ಹಾಕಿ ಬಿಗ್ ಬಿ ಥ್ಯಾಂಕ್ಯೂ ಹೇಳಿದ್ದಾರೆ.
“ಸವಾರಿಗಾಗಿ ಧನ್ಯವಾದಗಳು ಗೆಳಯ ನೀವು ನನಗೆ ಯಾರೆಂದು ಗೊತ್ತಿಲ್ಲ. ಆದರೆ ನೀವು ನನ್ನನ್ನು ಕೆಲಸದ ಸ್ಥಳಕ್ಕೆ ಸಮಯಕ್ಕೆ ಸರಿಯಾಗಿ ಕರೆದೊಯ್ದಿದ್ದೀರಿ ಥ್ಯಾಂಕ್ಯೂ” ಬರೆದಿದ್ದಾರೆ.
ಸದ್ಯ ಅಭಿಮಾನಿಯೊಂದಿಗೆ ಬೈಕ್ ಸವಾರಿ ಮಾಡಿದ ಅಮಿತಾಭ್ ಅವರ ಫೋಟೋ ವೈರಲ್ ಆಗಿದ್ದು, ಬಿಗ್ ಬಿಯ ಸರಳತೆಯನ್ನು ಜನ ಮೆಚ್ಚಿಕೊಂಡಿದ್ದಾರೆ.
ಅಮಿತಾಭ್ ಬಿಗ್ ಬಜೆಟ್ ʼಪ್ರಾಜೆಕ್ಟ್ ಕೆʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
View this post on Instagram
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.