ಕರ್ನಾಟಕ ಚುನಾವಣೆ ; ಪಕ್ಷೇತರರಿಗಿಂತ ಹೆಚ್ಚು ಮತ ಪಡೆದ ನೋಟಾ


Team Udayavani, May 15, 2023, 6:13 PM IST

ಕರ್ನಾಟಕ ಚುನಾವಣೆ ; ಪಕ್ಷೇತರರಿಗಿಂತ ಹೆಚ್ಚು ಮತ ಪಡೆದ ನೋಟಾ

ಗದಗ: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಕಾಂಗ್ರೆಸ್‌ ತಲಾ ಎರಡು ಸ್ಥಾನಗಳನ್ನು ಪಡೆದುಕೊಂಡಿವೆ. ಎಲ್ಲೆಡೆ ಮತಗಳ ಲೆಕ್ಕಾಚಾರ ಆರಂಭವಾಗಿದ್ದು, ನೋಟಾಕ್ಕೆ ಬಿದ್ದ ಮತಗಳು ಕೂಡ ಚರ್ಚೆಯ ಮುನ್ನೆಲೆಗೆ ಬಂದಿರುವುದು ವಿಶೇಷ.

ಕಾಂಗ್ರೆಸ್‌, ಬಿಜೆಪಿ ಸೇರಿ ಜೆಡಿಎಸ್‌, ಎಎಪಿ ಹಾಗೂ ಪಕ್ಷೇತರರನ್ನೂ ಒಪ್ಪಿಕೊಳ್ಳದ ಮತದಾರರು ಈ ಬಾರಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ನೋಟಾಕ್ಕೆ ಮತ ಹಾಕಿದ್ದಾರೆ. ಜಿಲ್ಲೆಯ ನಾಲ್ಕು ಮತಕ್ಷೇತ್ರಗಳ ಪೈಕಿ ನರಗುಂದ ಮತಕ್ಷೇತ್ರದಲ್ಲಿ ಅತೀ ಹೆಚ್ಚು ಮತದಾರರು ನೋಟಾಕ್ಕೆ ಮತ ಚಲಾಯಿಸಿದ್ದಾರೆ.

ನಂತರದಲ್ಲಿ ಶಿರಹಟ್ಟಿ, ರೋಣ ಹಾಗೂ ಕೊನೆಯದಾಗಿ ಗದಗ ಮತಕ್ಷೇತ್ರದಲ್ಲಿ ನೋಟಾಕ್ಕೆ ಮತಗಳು ಚಲಾವಣೆಯಾಗಿವೆ.
ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಶಿರಹಟ್ಟಿ ಎಸ್ಸಿ ಮೀಸಲು ಕ್ಷೇತ್ರ ಹೊರತು ಪಡಿಸಿ ಉಳಿದ ಮೂರು ಕ್ಷೇತ್ರಗಳಲ್ಲಿ
ಜೆಡಿಎಸ್‌ ಹಾಗೂ ಪ್ರಾದೇಶಿಕ ಪಕ್ಷಗಳು ಸೇರಿ ಪಕ್ಷೇತರರು ಕೂಡ ನಾಚುವಂತೆ ನೋಟಾಕ್ಕೆ ಮತಗಳು ಚಲಾವಣೆಯಾಗಿವೆ.
ನೋಟಾ ಪಡೆದುಕೊಂಡ ಮತಗಳು ಒಂದು ಕ್ಷೇತ್ರಗಳಲ್ಲಿ ಮೂರನೇ ಸ್ಥಾನ, ಎರಡು ಕ್ಷೇತ್ರದಲ್ಲಿ ನಾಲ್ಕು, ಮತ್ತೂಂದು ಕ್ಷೇತ್ರದಲ್ಲಿ ಐದನೇ ಸ್ಥಾನ ಪಡೆದಿದೆ.

ಗದಗ ಮತಕ್ಷೇತ್ರದಲ್ಲಿ 14 ಅಭ್ಯರ್ಥಿಗಳ ಪೈಕಿ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಕೆ. ಪಾಟೀಲ 89,958 ಮತಗಳನ್ನು ಪಡೆದು ಗೆಲುವು ಸಾಧಿಸಿ ಮೊದಲ ಸ್ಥಾನದಲ್ಲಿದ್ದರೆ, ಬಿಜೆಪಿ ಅಭ್ಯರ್ಥಿ ಅನಿಲ ಮೆಣಸಿನಕಾಯಿ 74,828 ಮತಗಳನ್ನು ಪಡೆದು ದ್ವಿತೀಯ ಸ್ಥಾನದಲ್ಲಿದ್ದರೆ, ಜೆಡಿಎಸ್‌, ಆಪ್‌ ಸೇರಿ ಪಕ್ಷೇತರರನ್ನು ಮೀರಿ 1,546 ಮತಗಳನ್ನು ಪಡೆದುಕೊಂಡ ನೋಟಾ ಮೂರನೇ ಸ್ಥಾನ ಪಡೆದುಕೊಂಡಿದ್ದು ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿದೆ.

ನರಗುಂದ ಮತಕ್ಷೇತ್ರದಲ್ಲಿ 14 ಅಭ್ಯರ್ಥಿಗಳ ಪೈಕಿ ಬಿಜೆಪಿ ಅಭ್ಯರ್ಥಿ ಸಿ.ಸಿ. ಪಾಟೀಲ ಅವರು 72,835 ಮತಗಳನ್ನು ಪಡೆದು ಗೆಲುವು ಸಾಧಿ ಸಿ ಮೊದಲ ಸ್ಥಾನದಲ್ಲಿದ್ದರೆ, ಕಾಂಗ್ರೆಸ್‌ ಅಭ್ಯರ್ಥಿ ಬಿ.ಆರ್‌. ಯಾವಗಲ್‌ 71,044 ಮತಗಳನ್ನು ಪಡೆಯುವ
ಮೂಲಕ ಎರಡನೇ ಸ್ಥಾನ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ವೀರೇಶ ಸೊಬರದಮಠ, ಜೆಡಿಎಸ್‌ ಅಭ್ಯರ್ಥಿ ಆರ್‌.ಎನ್‌. ಪಾಟೀಲ ಸೇರಿ ಎಎಪಿ, ಕೆಆರ್‌ ಎಸ್‌ ಹಾಗೂ ಇತರೆ ಪಕ್ಷೇತರರನ್ನು ಮೀರಿಸುವಂತೆ 1,767 ಮತಗಳನ್ನು ಪಡೆದುಕೊಂಡ ನೋಟಾ
ಮೂರನೇ ಸ್ಥಾನದಲ್ಲಿದೆ.

ರೋಣ ಮತಕ್ಷೇತ್ರದಲ್ಲಿ 9 ಅಭ್ಯರ್ಥಿಗಳ ಪೈಕಿ ಕಾಂಗ್ರೆಸ್‌ ಅಭ್ಯರ್ಥಿ 94,865 ಮತಗಳನ್ನು ಪಡೆದು ಗೆಲುವು ಸಾಧಿಸಿ ಮೊದಲ ಸ್ಥಾನದಲ್ಲಿದ್ದರೆ, ಬಿಜೆಪಿ ಅಭ್ಯರ್ಥಿ ಕಳಕಪ್ಪ ಬಂಡಿ 70,177 ಮತಗಳನ್ನು ಪಡೆದು ಎರಡನೇ ಸ್ಥಾನ, ಎಎಪಿ ಅಭ್ಯರ್ಥಿ ಆನೇಕಲ್‌ ದೊಡ್ಡಯ್ಯ 8,839 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದರೆ, ಜೇಡಿಎಸ್‌, ಶಿವಸೇನಾ ಮತ್ತು ಪಕ್ಷೇತರರಿಗಿಂತ ಹೆಚ್ಚು ಅಂದರೆ 1,600 ಮತಗಳನ್ನು ಪಡೆದ ನೋಟಾ ನಾಲ್ಕನೇ ಸ್ಥಾನ ಅಲಂಕರಿಸಿದೆ.

ಉಳಿದಂತೆ ಎಸ್ಸಿ ಮೀಸಲು ಕ್ಷೇತ್ರ ಶಿರಹಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ| ಚಂದ್ರು ಲಮಾಣಿ 74,489 ಮತಗಳನ್ನು ಪಡೆದು ಗೆಲುವು ಸಾಧಿಸಿ ಮೊದಲ ಸ್ಥಾನದಲ್ಲಿದ್ದರೆ, ಪಕ್ಷೇತರ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ, 45,969 ಮತಗಳನ್ನು ಪಡೆದು
ಎರಡನೇ, ಕಾಂಗ್ರೆಸ್‌ ಅಭ್ಯರ್ಥಿ ಸುಜಾತಾ ದೊಡ್ಡಮನಿ 34,791 ಮತಗಳನ್ನು ಪಡೆದು ಮೂರನೇ, ಜೆಡಿಎಸ್‌ ಅಭ್ಯರ್ಥಿ ಹನುಮಂತಪ್ಪ ನಾಯಕ 2,065 ಮತಗಳನ್ನು ಪಡೆದು ನಾಲ್ಕನೇ  ಸ್ಥಾನದಲ್ಲಿದ್ದರೆ ಎಎಪಿ ಹಾಗೂ ಪಕ್ಷೇತರರನ್ನು ಮೀರಿ 1,642 ಮತಗಳನ್ನು ಪಡೆದ ನೋಟಾ ಐದನೇ ಸ್ಥಾನದಲ್ಲಿದೆ.

ಗದಗ ಜಿಲ್ಲೆಯ ಬಹುತೇಕ ಮತದಾರರು ರಾಷ್ಟ್ರೀಯ ಪಕ್ಷಗಳಿಗೆ ಮತ ಹಾಕಿದ್ದಾರೆ. ಆದರೆ, ರಾಷ್ಟ್ರೀಯ ಪಕ್ಷಗಳಲ್ಲಿನ ಭ್ರಷ್ಟಾಚಾರ,
ಕಚ್ಚಾಟ, ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸುವುದರಿಂದ ಬೇಸತ್ತ ಅನೇಕ ಮತದಾರರು ಯಾವುದೇ ಅಭ್ಯರ್ಥಿಗಳಿಗೆ ಮತ
ಹಾಕದೇ ನೋಟಾಕ್ಕೆ ಮತ ಚಲಾಯಿಸಿದ್ದಾರೆ. ಇನ್ನಾದರೂ ರಾಷ್ಟ್ರೀಯ ಪಕ್ಷಗಳು ಸೇರಿ ಇತರೆ ಪಕ್ಷಗಳು ಜನರ ನಾಡಿಮಿಡಿತ ಅರಿತು ಆಡಳಿತ ನಡೆಸಬೇಕು ಎನ್ನುವ ಮುನ್ಸೂಚನೆಯ ಸಂದೇಶವನ್ನು ನೋಟಾಕ್ಕೆ ಮತ ಚಲಾಯಿಸಿದ ಮತದಾರರು ರವಾನಿಸಿದ್ದಾರೆ.
ಎಸ್‌.ಬಿ. ಮಹೇಶ
ಸಾಮಾಜಿಕ ಕಾರ್ಯಕರ್ತ

ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.