48 ಗಂಟೆಯೊಳಗೆ ಹೊಸ ಸಿಎಂ, 72 ಗಂಟೆಯೊಳಗೆ ಹೊಸ ಸಂಪುಟ: ಸುರ್ಜೇವಾಲ
ಸೃಷ್ಟಿಸುತ್ತಿರುವ ಗೊಂದಲಗಳಿಗೆ, ಊಹಾಪೋಹಗಳಿಗೆ ಗಮನ ಕೊಡಬೇಡಿ!
Team Udayavani, May 17, 2023, 3:07 PM IST
ನವದೆಹಲಿ: ಕರ್ನಾಟಕದಲ್ಲಿ 48 ಗಂಟೆಯೊಳಗೆ ಹೊಸ ಸಿಎಂ ಆಯ್ಕೆಯಾಗಲಿದ್ದು, 72 ಗಂಟೆಯೊಳಗೆ ಹೊಸ ಸಂಪುಟ ರಚನೆಯಾಗಲಿದೆ ಕಾಂಗ್ರೆಸ್ ನೀಡಿದ ಎಲ್ಲಾ ಗ್ಯಾರೆಂಟಿಗಳು ಅನುಷ್ಠಾನಕ್ಕೆ ಬರಲಿವೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿಕೆ ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಬಳಿ ಬುಧವಾರ ಮಧ್ಯಾಹ್ನ ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲಾ, ಸುಳ್ಳುಸುದ್ದಿಗಳಿಗೆ ಯಾರೂ ಕಿವಿ ಕೊಡಬೇಡಿ ಕರ್ನಾಟಕದಲ್ಲಿ ಮುಂದಿನ ಐದು ವರ್ಷ ಸ್ಥಿರ ಸರಕಾರ ರಚಿಸುತ್ತೇವೆ.ಜನರ ಆಶೋತ್ತರಗಳನ್ನು ಈಡೇರಿಸಿ ಬದಲಾವಣೆ ತರಲಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಹೆಸರನ್ನು ಘೋಷಿಸಲಿದ್ದಾರೆ. ನಾವು ಅವಿರೋಧವಾಗಿ ನಾಯಕನ ಆಯ್ಕೆ ಮಾಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.
ಸೋಲಿನ ಹತಾಶೆಯಿಂದ ಬಿಜೆಪಿಯವರು, ಕೆಲ ಮಾಧ್ಯಮಗಳು ಗಾಳಿಸುದ್ದಿಗಳನ್ನು ಹರಿಬಿಡುತ್ತಿದ್ದಾರೆ. ಜನತೆ ಯಾವುದನ್ನೂ ನಂಬಬಾರದು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.