ಮುಂದಿನ ತಿಂಗಳಿನಿಂದ 10 ಕೆ.ಜಿ. ಅಕ್ಕಿ
Team Udayavani, May 18, 2023, 2:35 PM IST
ಮಧುಗಿರಿ: ನಾಳೆಯೇ ಕಾಂಗ್ರೆಸ್ ಸರ್ಕಾರ ರಚನೆ ಮಾಡಲಿದ್ದು ಮುಂದಿನ ತಿಂಗಳಿನಿಂದ ತಲಾ 10 ಕೆ.ಜಿ. ಅಕ್ಕಿ ವಿತರಣೆ ನಡೆಯಲಿದೆ ಎಂದು ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಜತೆ ಸಭೆಯ ನಡೆಸಿ ಮಾತನಾಡಿದ ಅವರು, ಅಧಿಕಾರಿಗಳಿಗೆ ಕೆಲವು ಖಡಕ್ ಎಚ್ಚರಿಕೆಗಳನ್ನು ನೀಡಿದರು.
ತಾಲೂಕಿಗೆ ಸದ್ಯ 16 ಸಾವಿರ ಟನ್ ಆಹಾರ ಬರುತ್ತಿದ್ದು, ಮುಂದಿನ ತಿಂಗಳಲ್ಲಿ 36 ಸಾವಿರ ಟನ್ಗೆ ಏರಿಕೆಯಾಗಲಿದೆ. ಆಹಾರ ಇಲಾಖೆಯಡಿ ಕೆಲಸ ಮಾಡುವ ನ್ಯಾಯ ಬೆಲೆ ಅಂಗಡಿಗಳಲ್ಲಿ ಕೆಲವರು ಅವ್ಯವಹಾರ ನಡೆಸಿ ಅಮಾನತ್ತಾಗಿದ್ದರೆ ಅಂತಹ ಅಂಗಡಿಗಳನ್ನು ವಿಎಸ್ಎಸ್ಎನ್ ಸೊಸೈಟಿಗಳ ಸುಪರ್ದಿಗೆ ವಹಿಸುವಂತೆ ಸೂಚಿಸಿದರು.
ಕ್ಷೇತ್ರದಲ್ಲಿ ಮನೆ ನಿರ್ಮಾಣಕ್ಕೆ ಬಳಸುವ ಮರಳಿಗೆ ಯಾವುದೇ ಸಮಸ್ಯೆಯಾಗಬಾರದು. ಆದರೆ, ಹರಿಹರೇಶ್ವರ ಸ್ವಾಮಿ ದೇಗುಲದ ಸುತ್ತ ಯಾವುದೇ ಮರಳು ಎತ್ತಬಾರದು. ಹಾಗೂ ಹರಿಹರೇಶ್ವರ ಸ್ವಾಮಿ ದೇಗುಲದ ಹಣಕಾಸಿನ ವ್ಯವಹಾರದ ಬಗ್ಗೆ ನನಗೆ ವರದಿ ನೀಡಿ ಎಂದು ಮುಜರಾಯಿ ಇಲಾಖೆಗೆ ಸೂಚಿಸಿದ ಶಾಸಕರು, ಅರಣ್ಯದಲ್ಲಿ ಸುಟ್ಟ ಕಲ್ಲಿನಿಂದ ಬಂಡೆ ಒಡೆಯುವವರ ಮೇಲೆ ಯಾವುದೇ ಕ್ರಮಕೈಗೊಳ್ಳಬಾರದು. ತಾಲೂಕಿನಲ್ಲಿ ಎಲ್ಲಿ ನಾಡ ಕಚೇರಿಗಳಿಗೆ ಸ್ವಂತ ಕಟ್ಟಡ ಇಲ್ಲವೋ ಅದರ ಬಗ್ಗೆ ಮಾಹಿತಿ ಕೊಡಿ ಶೀಘ್ರ ಕಟ್ಟಡ ನಿರ್ಮಾಣಕ್ಕಾಗಿ ಅನುದಾನ ಕೊಡಿಸುತ್ತೇನೆ. ಕಂದಾಯ ಇಲಾಖೆ ಯಿಂದ ಕಳೆದ ಬಾರಿ ನೀಡಿರುವ ಬಗರ್ ಹುಕುಂ ಸಾಗುವಳಿ ರೈತರ ಭೂಮಿಯನ್ನು ಖಾತೆ ಮಾಡುವ ಹಾಗೂ ದುರಸ್ಥಿ ಮಾಡುವ ಕೆಲಸಕ್ಕೆ ಮುಂದಾಗಿ. ಮಾಸಾಶನ ಹಾಗೂ ಜಾತಿ ಮತ್ತು ಆದಾಯ ವರ ಮಾನ ಧೃಡೀಕರಣ ಪತ್ರವನ್ನು ಶಾಲೆಗಳಲ್ಲಿ ನೀಡುವ ಹಾಗೂ ಪ್ರತಿ ಮನೆಗೆ ತಲುಪಿಸುವ ಕಾರ್ಯಕ್ಕೆ ಚಾಲನೆ ನೀಡುವಂತೆ ಸೂಚಿಸಿದರು.
ತಹಶೀಲ್ದಾರ್ ಸಿಗ್ಬತ್ವುಲ್ಲಾ, ಡಿವೈಎಸ್ಪಿ ವೆಂಕಟೇಶ್ ನಾಯ್ಡು ಹಾಗೂ ಇತರೆ ಅಧಿಕಾರಿ ವರ್ಗ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ
Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು
Tumkur:ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ
Koratagere: ನರೇಗಾ ಕಾಮಗಾರಿ ಹಣ ದುರುಪಯೋಗ, ಗ್ರಾ.ಪಂ. ಪಿಡಿಓ ಅಮಾನತು
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.