ಮುಧೋಳ: ಉದ್ಘಾಟನೆಗೆ ಕಾದಿದೆ ಇಂದಿರಾ ಕ್ಯಾಂಟೀನ್‌


Team Udayavani, May 19, 2023, 6:02 PM IST

ಮುಧೋಳ: ಉದ್ಘಾಟನೆಗೆ ಕಾದಿದೆ ಇಂದಿರಾ ಕ್ಯಾಂಟೀನ್‌

ಮುಧೋಳ: ಬಡಜನರಿಗೆ ಕಡಿಮೆ ದರದಲ್ಲಿ ಉಪಹಾರ ಹಾಗೂ ಊಟ ನೀಡುವ ಉದ್ದೇಶದಿಂದ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಆರಂಭಗೊಂಡಿದ್ದ ಇಂದಿರಾ ಕ್ಯಾಂಟೀನ್‌ಗೆ ನಗರದಲ್ಲಿ ಮಾತ್ರ ಉದ್ಘಾಟನೆ ಭಾಗ್ಯ ದೊರೆತಿರಲಿಲ್ಲ. ಸದ್ಯ ಎರಡು ದಶಕದ ಬಳಿಕ ಮತಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಿರುವುದರಿಂದ ಇನ್ನಾದರೂ ಕ್ಯಾಂಟೀನ್‌ ಉದ್ಘಾಟನೆಯಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಭವ್ಯವಾದ ಕಟ್ಟಡ: ನಗರದಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ವಹಣೆಗೆ ಯಾವುದೇ ರೀತಿಯ ಅಡೆತಡೆಗಳಿರಲಿಲ್ಲ. 5-6 ವರ್ಷಗಳ ಮುಂಚೆಯೇ ಹಳೆಯ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್‌ ಕಟ್ಟಡ ನಿರ್ಮಾಣ ಮಾಡಲಾಗಿದೆ. ಅಡುಗೆ ತಯಾರಿಕೆಗೆ ಬೇಕಾದ ಎಲ್ಲ ಅಗತ್ಯ ವಸ್ತುಗಳ ಜೋಡಣೆ ಪೂರ್ಣಗೊಂಡಿತ್ತು. ಆದರೆ ಹಿಂದಿನ ಶಾಸಕರ ಇಚ್ಛಾಶಕ್ತಿ ಕೊರತೆಯಿಂದಾಗಿ ಕ್ಯಾಂಟೀನ್‌ ಕಾರ್ಯಾರಂಭ ಮಾಡಿಲ್ಲವೆಂಬುದು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿರುವ ಮಾತು.

ಸದ್ಯ ಮುಧೋಳ ಮತಕ್ಷೇತ್ರ ಕೈ ವಶವಾಗಿದ್ದು, ಮುಂದಿನ ದಿನಗಳಲ್ಲಿ ಕ್ಯಾಂಟೀನ್‌ನಿಂದ ಹಸಿದವರ ಹೊಟ್ಟೆ ತುಂಬಬಹುದು ಎಂಬ ನಿರೀಕ್ಷೆ ಗರಿಗೆದರಿದೆ.

ಸ್ವಚ್ಛತೆ ಕೈಗೊಂಡ ಸಿಬ್ಬಂದಿ: ಹಲವು ವರ್ಷಗಳಿಂದ ಇಂದಿರಾ ಕ್ಯಾಂಟೀನ್‌ ನಿರ್ಮಾಣಗೊಂಡಿದ್ದರೂ ಕಾರ್ಯಾರಂಭ ಮಾಡದ ಹಿನ್ನೆಲೆಯಲ್ಲಿ ಕಟ್ಟಡದಲ್ಲಿ ಅಡುಗೆ ಸಾಮಾನುಗಳು ಧೂಳು ಹಿಡಿದಿವೆ. ಸುಸಜ್ಜಿತ ಕಟ್ಟಡವಿದ್ದರೂ ಬಳಕೆಯಾಗದೆ ಬಣ್ಣ ಮಾಸಿದೆ. ಕ್ಷೇತ್ರದಲ್ಲಿನ ಆಡಳಿತ ಬದಲಾವಣೆ ಅರಿತ ಅ ಧಿಕಾರಿಗಳು ಇತ್ತೀಚೆಗೆ ಕ್ಯಾಂಟೀನ್‌ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದು, ಶೀಘ್ರದಲ್ಲಿಯೇ ಕ್ಯಾಂಟೀನ್‌ ಆರಂಭವಾಗುತ್ತದೆ ಎಂಬ ಮಾತುಗಳು ಜನರಲ್ಲಿ ಹರಿದಾಡುತ್ತಿವೆ.

ಬಡವರಿಗೆ ಅನುಕೂಲ: ಕ್ಯಾಂಟೀನ್‌ನಲ್ಲಿ ಅತಿ ಕಡಿಮೆ ದರ ಅಂದರೆ 5ರೂ.ಗೆ ಉಪಹಾರ ಹಾಗೂ 10ರೂ.ಗೆ ಊಟ ದೊರೆಯುವುದರಿಂದ ವಿವಿಧ ಕೆಲಸಕ್ಕಾಗಿ ನಗರಕ್ಕೆ ಆಗಮಿಸುವ ಗ್ರಾಮೀಣ ಭಾಗದ ಜನರಿಗೆ, ಕೂಲಿ ಕಾರ್ಮಿಕರಿಗೆ, ಬಡ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಬೇಗ ಕ್ಯಾಂಟೀನ್‌ ತೆರೆಯಲಿ ಎಂಬುದು ಬಡಜನರ ಅಭಿಲಾಷೆಯಾಗಿದೆ.

ವ್ಯರ್ಥವಾಗಿದ್ದ ಹೋರಾಟಗಳು
ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ಮಾಡಿ ಕಾರ್ಯಾರಂಭ ಮಾಡಬೇಕು ಎಂದು ಕೆಲ ವರ್ಷಗಳ ಹಿಂದೆ ಕಾಂಗ್ರೆಸ್‌ ನಾಯಕರು ವಿವಿಧ ರೀತಿಯ ಹೋರಾಟ ಮಾಡಿದ್ದರು. ಆದರೆ ಅವರ ಹೋರಾಟಗಳು ಆಡಳಿತದಲ್ಲಿರುವವರ ಕಿವಿಗೆ ಬೀಳಲಿಲ್ಲ. ಹೋರಾಟಗಳು ವ್ಯರ್ಥವಾಗಿದ್ದವು. ಸದ್ಯ ಸ್ಥಳೀಯ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಆಡಳಿತ ಬಂದಿರುವುದರಿಂದ ಕ್ಯಾಂಟೀನ್‌ ಉದ್ಘಾಟನೆಗೆ ಇದ್ದ ವಿಘ್ನಗಳೆಲ್ಲ ದೂರವಾಗುವ ನಿರೀಕ್ಷೆಯಿದೆ.

ಇಂದಿರಾ ಕ್ಯಾಂಟೀನ್‌ ನಿರ್ಮಾಣಗೊಂಡು ಹಲವಾರು ವರ್ಷಗಳೇ ಕಳೆದಿದ್ದರೂ ಇದುವರೆಗೂ ಉದ್ಘಾಟನೆ ಭಾಗ್ಯ ದೊರೆತಿಲ್ಲ.
ಈಗ ಕ್ಷೇತ್ರದ ಜನರು ನನಗೆ ಅಧಿಕಾರ ನೀಡಿ ಕೈ ಬಲಪಡಿಸಿದ್ದಾರೆ. ಶೀಘ್ರದಲ್ಲಿಯೇ ಕ್ಯಾಂಟೀನ್‌ ಆರಂಭಿಸಿ ಬಡವರಿಗೆ ಅನುಕೂಲ ಮಾಡಿಕೊಡುತ್ತೇನೆ.
ಆರ್‌.ಬಿ. ತಿಮ್ಮಾಪುರ,
ನೂತನ ಶಾಸಕರು, ಮುಧೋಳ ಕ್ಷೇತ್ರ

ಮುಧೋಳ ನಗರಕ್ಕೆ ಆಗಮಿಸಿದಾಗೊಮ್ಮೆ ಇಂದಿರಾ ಕ್ಯಾಂಟೀನ್‌ ಆರಂಭವಾಗದ ಕಾರಣ ಹೆಚ್ಚಿನ ದುಡ್ಡು ಕೊಟ್ಟು ಹೋಟೆಲ್‌ನಲ್ಲಿ ತಿಂಡಿ ತಿನ್ನುವ ಪರಿಸ್ಥಿತಿ ಇದೆ. ಇನ್ನಾದರೂ ಕ್ಯಾಂಟೀನ್‌ ಉದ್ಘಾಟನೆ ಮಾಡಿದರೆ ನಮ್ಮಂತ ಬಡವರಿಗೆ ಹೆಚ್ಚು ಅನುಕೂಲವಾಗಲಿದೆ.
ಮಲ್ಲಿಕಾರ್ಜುನ ಹೊಸಮನಿ,
ಗ್ರಾಮೀಣ ಭಾಗದ ಕೂಲಿ ಕಾರ್ಮಿಕ

ಇಂದಿರಾ ಕ್ಯಾಂಟೀನ್‌ ಸಿದ್ಧಗೊಳಿಸುವಂತೆ ಮೇಲಿನಿಂದ ಸೂಚನೆ ಬಂದಿದೆ. ಅದರಂತೆ ಈಗಾಗಲೇ ಕ್ಯಾಂಟೀನ್‌ ಸ್ವತ್ಛತೆಗೆ ಎಲ್ಲ ರೀತಿಯ ಕ್ರಮ ಕೈಗೊಂಡಿದ್ದೇವೆ. ಮೇಲಧಿಕಾರಿಗಳು ಆದೇಶ ನೀಡಿದ ಕೂಡಲೇ ಕ್ಯಾಂಟೀನ್‌ ಉದ್ಘಾಟನೆ ಮಾಡಲಿದ್ದೇವೆ.
ಶಿವಪ್ಪ ಅಂಬಿಗೇರ, ನಗರಸಭೆ ಪೌರಾಯುಕ್ತ

*ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.