ಅಪಹರಣದ ನಾಟಕವಾಡಿ ಪೋಷಕರ ಬಳಿ 1 ಕೋಟಿ ರೂ.ಗೆ ಬೇಡಿಕೆ ಇಟ್ಟ ಮಗಳು… ಬಳಿಕ ಆದದ್ದೇ ಬೇರೆ


Team Udayavani, May 20, 2023, 5:56 PM IST

ಅಪಹರಣದ ನಾಟಕವಾಡಿ ತಂದೆಯ ಬಳಿ 1 ಕೋಟಿ ರೂ.ಗೆ ಬೇಡಿಕೆ ಇಟ್ಟ ಮಗಳು… ಬಳಿಕ ಆದದ್ದೇ ಬೇರೆ

ಕೋಲ್ಕತ್ತಾ: ಹೆತ್ತ ಮಗಳೇ ತನ್ನ ಅಪಹರಣ ಮಾಡಲಾಗಿದೆ ಎಂದು ನಾಟಕವಾಡಿ ಪೋಷಕರ ಬಳಿ 1 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟ ಘಟನೆ ಕೋಲ್ಕತ್ತಾದ ಬಾನ್ಸ್‌ದ್ರೋನಿ ಪ್ರದೇಶದಲ್ಲಿ ನಡೆದಿದೆ.

ಘಟನೆ ವಿವರ: ಪಶ್ಚಿಮ ಬಂಗಾಳದ ಹೈಯರ್ ಸೆಕೆಂಡರಿ ಶಿಕ್ಷಣ ಮಂಡಳಿಯು ತನ್ನ 10 ನೇ ತರಗತಿಯ ಮಾಧ್ಯಮಿಕ ಪರೀಕ್ಷೆಯ ಫಲಿತಾಂಶಗಳನ್ನು ಶುಕ್ರವಾರ ಪ್ರಕಟಿಸಿದೆ ಅದರಂತೆ ದಕ್ಷಿಣ ಕೋಲ್ಕತ್ತಾದ ಬಾನ್ಸ್‌ದ್ರೋನಿ ಪ್ರದೇಶದ ಬಾಲಕಿ ಕೂಡ ಪರೀಕ್ಷೆಗೆ ಬರೆದಿದ್ದಳು ಶುಕ್ರವಾರ ಫಲಿತಾಂಶ ಪ್ರಕಟವಾಗಿದೆ ಮೊದಲೇ ಫಲಿತಾಂಶದ ಬಗ್ಗೆ ಅನುಮಾನ ಹೊಂದಿದ್ದ ಬಾಲಕಿ ತನ್ನ ಆರು ವರ್ಷದ ಸಹೋದರಿ ಜೊತೆ ಸೈಬರ್ ಗೆ ತೆರಳಿ ಫಲಿತಾಂಶ ಪರಿಶೀಲಿಸಿದ್ದಾಳೆ ಫಲಿತಾಂಶದಲ್ಲಿ ಆಕೆಗೆ ಕಡಿಮೆ ಅಂಕ ಬಂದಿರುವುದು ಗೊತ್ತಾಗಿದೆ ಇದರಿಂದ ಗಾಬರಿಗೊಂಡ ಬಾಲಕಿ ತನ್ನ ಜೊತೆ ಇದ್ದ ಆರು ವರ್ಷದ ಸಹೋದರಿ ಜೊತೆ ಮನೆ ಬಿಟ್ಟು ಹೋಗಿದ್ದಾಳೆ ಆದರೆ ಸಂಜೆಯಾದರೂ ಮಕ್ಕಳು ಮನೆಗೆ ಬರದಿದ್ದದನ್ನು ಮನಗಂಡ ಪೋಷಕರು ಮಗಳ ಮೊಬೈಲ್ ಫೋನ್ ಗೆ ಕರೆ ಮಾಡಿದ್ದಾರೆ ಆದರೆ ಸಂಪರ್ಕಕ್ಕೆ ಸಿಗಲಿಲ್ಲ ಬಳಿಕ ತಮ್ಮ ಪರಿಚಯಸ್ಥರ ಮನೆಗಳಿಗೆ ಕರೆ ಮಾಡಿ ವಿಚಾರಿಸಿದ್ದಾರೆ ಆದರೆ ಎಲ್ಲಿಯೂ ಮಕ್ಕಳ ಇರುವಿಕೆ ಬಗ್ಗೆ ಮಾಹಿತಿ ಸಿಗಲಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ತಮ್ಮ ಮಕ್ಕಳು ನಾಪತ್ತೆಯಾಗಿರುವ ಕುರಿತು ದೂರು ದಾಖಲಿಸಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು ಮಕ್ಕಳ ಪತ್ತೆಗಾಗಿ ನಗರದ ಕೆಲ ಸ್ಥಳಗಳ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸಿದ್ದಾರೆ ಈ ವೇಳೆ ಮಕ್ಕಳು ತೆಗೆದುಕೊಂಡು ಹೋಗಿರುವ ಸ್ಕೂಟಿ ಹತ್ತಿರದ ಮೆಟ್ರೋ ನಿಲ್ದಾಣದ ಬಳಿ ಪತ್ತೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಹತ್ತಿರದ ಎಲ್ಲ ಪೊಲೀಸ್ ಠಾಣೆಗಳಿಗೆ ಮಕ್ಕಳ ಫೋಟೋ ಕಳಿಸಿ ಮಕ್ಕಳನ್ನು ಪತ್ತೆ ಹಚ್ಚುವಂತೆ ಮಾಹಿತಿ ನೀಡಿದ್ದಾರೆ.

ಇಷ್ಟೆಲ್ಲಾ ಘಟನೆ ನಡೆಯುತ್ತಿದ್ದ ವೇಳೆ ಪೋಷಕರ ಮೊಬೈಲ್ ಗೆ ಸಂದೇಶವೊಂದು ಬಂದಿದೆ ಮಗಳ ಅಪಹರಣವಾಗಿದೆ ಬಿಡುಗಡೆಗಾಗಿ ಒಂದು ಕೋಟಿ ರೂಪಾಯಿ ನೀಡುವಂತೆ ಸಂದೇಶ ಕಳುಹಿಸಿದ್ದಾರೆ ಅಲ್ಲದೆ 1 ಕೋಟಿ ರೂ. ಹಣದೊಂದಿಗೆ ನೇಪಾಳಗಂಜ್ ಪ್ರದೇಶಕ್ಕೆ ಬರುವಂತೆಯೂ ಸಂದೇಶದಲ್ಲಿ ಹೇಳಲಾಗಿತ್ತು.

ಇತ್ತ ಮೆಟ್ರೋ ನಿಲ್ದಾಣದ ಬಳಿ ಸ್ಕೂಟಿ ಪತ್ತೆಯಾದ ಹಿನ್ನೆಲೆಯಲ್ಲಿ ಮಕ್ಕಳು ಕೃಷ್ಣಾನಗರ ಲೋಕಲ್ ರೈಲಿನಲ್ಲಿ ಹತ್ತಿರಬಹುದು ಎಂದು ಪೊಲೀಸರು ಶಂಕಿಸಿದ್ದು ಮಕ್ಕಳ ಫೋಟೋ ಕೃಷ್ಣಾನಗರ ಪೊಲೀಸ್ ಠಾಣೆ ಹಾಗೂ ಇತರ ಠಾಣೆಗಳಿಗೆ ರವಾನೆ ಮಾಡಲಾಗಿತ್ತು ಫೋಟೋ ಕಳುಹಿಸಿದ ಕೆಲವೇ ಗಂಟೆಗಳಲ್ಲಿ ಮಕ್ಕಳು ಕೃಷ್ಣನಗರ ಜಿಲ್ಲಾ ಪೊಲೀಸರು ನಾಡಿಯಾ ಜಿಲ್ಲೆಯ ಡಿವೈನ್ ನರ್ಸಿಂಗ್ ಹೋಮ್ ಬಳಿ ಇರುವ ಮಾಹಿತಿ ಸಿಕ್ಕಿದೆ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ನರ್ಸಿಂಗ್ ಹೋಮ್ ಬಳಿ ತೆರಳಿ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ ಬಳಿಕ ಪೊಲೀಸರು ಅಪಹರಣ ಕುರಿತು ತನಿಖೆ ನಡೆಸಿದಾಗ ತಾನು ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ ಹಿನ್ನೆಲೆಯಲ್ಲಿ ಗಾಬರಿಗೊಂಡು ಮನೆ ಬಿಟ್ಟು ಹೋಗಿದ್ದೆ ಅಲ್ಲದೆ ನಾನು ಪೋಷಕರಲ್ಲಿ ಈ ಭಾರಿ ಉತ್ತಮ ಅಂಕ ಗಳಿಸುವ ಭರವಸೆ ನೀಡಿದ್ದೆ ಆದರೆ ಅದು ಸಾಧ್ಯವಾಗಲಿಲ್ಲ ಹಾಗಾಗಿ ನಾನು ನನ್ನನ್ನು ಅಪಹರಣ ಮಾಡಿರುವ ಕುರಿತು ನಾಟಕವಾಡಿ ನಾನೆ ಪೋಷಕರಿಗೆ ಅಪಹರಣ ಮಾಡಿರುವ ಕುರಿತು ಸಂದೇಶ ಕಳುಹಿಸಿ ಒಂದು ಕೋಟಿ ರೂ ನೀಡುವಂತೆ ಸಂದೇಶ ಕಳುಹಿಸಿದ್ದೆ ಎಂದು ತನ್ನ ತಪ್ಪು ಒಪ್ಪಿಕೊಂಡಿದ್ದಾಳೆ.

ಇದನ್ನೂ ಓದಿ: ದಾಂಡೇಲಿ: ಫಣಸೋಲಿ ಅರಣ್ಯ ಪ್ರದೇಶದಲ್ಲಿ ಜಂಗಲ್ ಸಫಾರಿಗೆ ಹೋದ ವಾಹನ ಪಲ್ಟಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.