Health Tips: ಕಣ್ಣಿನ ಊತ ಕಡಿಮೆ ಮಾಡಿಕೊಳ್ಳುವುದು ಹೇಗೆ ?

ತರಕಾರಿ ಜ್ಯೂಸ್ ಸೇವನೆಯಿಂದ ಕಣ್ಣಿನ ಊತ ಕಡಿಮೆ ಮಾಡಿಕೊಳ್ಳಬಹುದು

Team Udayavani, May 20, 2023, 6:22 PM IST

Health Tips: ಕಣ್ಣಿನ ಊತ ಕಡಿಮೆ ಮಾಡಿಕೊಳ್ಳುವುದು ಹೇಗೆ ?

ಮನುಷ್ಯನಿಗೆ ಕಣ್ಣುಗಳು ತುಂಬ ಮುಖ್ಯ. ನೇತ್ರಗಳಿಲ್ಲದ ಬದುಕು ಊಹಿಸಿಕೊಂಡರೆ ಭಯ ಆಗುತ್ತದೆ. ನಮ್ಮ ದೇಹದಲ್ಲಿರುವ ಅತೀ ಸೂಕ್ಷ್ಮ ಭಾಗಗಳಲ್ಲಿ ಕಣ್ಣುಗಳು ಹೌದು. ಇವುಗಳನ್ನು ಎಚ್ಚರಿಕೆಯಿಂದ ಬಹು ಜೋಪಾನವಾಗಿ ಕಾಯ್ದುಕೊಂಡು ಹೋಗುವುದು ಅತೀ ಅಗತ್ಯ.

ನಮ್ಮ ಕಣ್ಣುಗಳು ಆಗಾಗ ಹಲವು ಕಾಯಿಲೆಗಳಿಗೆ ತುತ್ತಾಗುತ್ತಿರುತ್ತವೆ. ‘ಮದ್ರಾಸ್ ಐ’ ಸೋಂಕು, ಕಣ್ಣುಗಳಲ್ಲಿ ನಿರಂತರ ನೀರು ಸುರಿಯುವುದು, ಊದಿಕೊಳ್ಳುವುದು ಹೀಗೆ ಹಲವು ತೊಂದರೆ ಕಾಣಿಸಿಕೊಳ್ಳುತ್ತವೆ. ಇಂದು ನಾವು ಕಣ್ಣುಗಳು ಊದಿಕೊಳ್ಳುಲು ಕಾರಣ ಹಾಗೂ ಅದನ್ನು ಶಮನಗೊಳಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.

ಕೆಲವರ ಕಣ್ಣು ಉಬ್ಬಿಕೊಂಡು ಕೆಂಪಾಗಿರುತ್ತದೆ. ಕೆಲವು ಬಾರಿ ಲಿಂಫಾಟಿಕ್ ಗ್ರಂಥಿಗಳಲ್ಲಿ ನೀರು (ಫ್ಲ್ಯುಯ್ಡ್) ಶೇಖರಗೊಂಡು ಹೀಗಾಗುತ್ತದೆ. ನಿದ್ರಾಹೀನತೆ, ನೀರು ಸಾಕಷ್ಟು ಕುಡಿಯದಿರುವುದು, ಆಗಾಗ ಕಣ್ಣುಗಳನ್ನು ಉಜ್ಜಿಕೊಳ್ಳುವುದು, ಕಣ್ಣುಗಳಿಗೆ ಪೆಟ್ಟು ಬಿದ್ದಾಗ ಹಾಗೂ ಕಣ್ಣೀರಿನ ನಾಳಗಳಿಗೆ ತೊಂದರೆಯಾದಾಗ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ.

ಕಣ್ಣಿನ ಊತ ಕಡಿಮೆ ಮಾಡಿಕೊಳ್ಳುವುದು ಹೇಗೆ ?

ಕಣ್ಣಿನ ಊತ ಕಡಿಮೆ ಪ್ರಮಾಣದಲ್ಲಿದ್ದರೆ ಅಥವಾ ಯಾವಾಗಲಾದರೂ ಒಮ್ಮೆ ಕಾಣಿಸಿಕೊಂಡರೆ ಭಯ ಪಡುವ ಅಗತ್ಯ ಇಲ್ಲ. ನೀವು ವೈದ್ಯರ ಬಳಿ ಹೋಗುವುದು ಬೇಡ. ಮನೆಯಲ್ಲಿಯೇ ಕೆಲವೊಂದು ಕ್ರಮ ಕೈಗೊಳ್ಳುವುದರಿಂದ ಊದಿಕೊಂಡಿರುವ ಕಣ್ಣಿನ ಊತ ಕಡಿಮೆ ಮಾಡಿಕೊಳ್ಳಬಹುದು.

ಮೊದಲನೇಯದಾಗಿ ಅತೀ ಹೆಚ್ಚು ನೀರಿನ ಪ್ರಮಾಣ ಹೊಂದಿರುವ ತರಕಾರಿ ಹಾಗೂ ಹಣ್ಣುಗಳನ್ನು ಸೇವಿಸಬೇಕು. ಇದರಿಂದ ನಿರ್ಜಲಿಕರಣ ದೂರವಾಗುತ್ತದೆ. ಪರಿಣಾಮ ಕಣ್ಣುಗಳು ಆರಾಮದಾಯಕವಾಗುತ್ತವೆ. ಟೀ, ಕಾಫಿ, ಎನರ್ಜಿ ಡ್ರಿಂಕ್ಸ್ ಹಾಗೂ ಮದ್ಯ ಸೇವನೆ ಕಡಿಮೆ ಮಾಡಬೇಕು.

ಈ ಮೇಲಿನ ಕ್ರಮಗಳನ್ನು ಅನುಸರಿಸುವುದರ ಜತೆಗೆ ತರಕಾರಿ ಜ್ಯೂಸ್ ಸೇವನೆಯಿಂದ ಕಣ್ಣಿನ ಊತ ಕಡಿಮೆ ಮಾಡಿಕೊಳ್ಳಬಹುದು. ಹಾಗಾದರೆ ಜ್ಯೂಸ್ ತಯಾರಿಸುವುದು ಹೇಗೆ  ? ಅದಕ್ಕೆ ಬೇಕಾಗುವ ಪದಾರ್ಥಗಳು ಯಾವುದು ?

  • ಸೌತೆ ಕಾಯಿ
  • ಸೆಲರಿ ಸೊಪ್ಪು
  • ಒಂದು ಟೊಮೆಟೊ
  • ನಿಂಬೆ ರಸ

ಈ ಮೇಲಿನ ಪದಾರ್ಥಗಳನ್ನು ಚೆನ್ನಾಗಿ ತೊಳೆದು ಮಿಕ್ಸರ್ ಸಹಾಯದಿಂದ ಜ್ಯೂಸ್ ತಯಾರಿಸಿ ಸೇವನೆ ಮಾಡುವುದರಿಂದ ಕಣ್ಣಿನ ಊತ ( ಊದಿಕೊಳ್ಳುವುದು) ಕಡಿಮೆ ಮಾಡಿಕೊಳ್ಳಬಹುದು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.