2,000 ರೂ. ನೋಟು ವಾಪಸ್‌: ಜನರಲ್ಲಿ ಆತಂಕ ಬೇಡ


Team Udayavani, May 23, 2023, 9:35 AM IST

2,000 ರೂ. ನೋಟು ವಾಪಸ್‌: ಜನರಲ್ಲಿ ಆತಂಕ ಬೇಡ

ಕಳೆದ ಶುಕ್ರವಾರವಷ್ಟೇ ಭಾರತೀಯ ರಿಸರ್ವ್‌ ಬ್ಯಾಂಕ್‌ ಸೆ.30ರಿಂದ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ವಾಪಸ್‌ ಪಡೆಯುವುದಾಗಿ ಹೇಳಿದೆ. 2018-19ರಲ್ಲೇ ಈ ನೋಟುಗಳ ಮುದ್ರಣ ನಿಲ್ಲಿಸಲಾಗಿದ್ದು, ಈಗ ಚಲಾವಣೆ ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜತೆಗೆ 2,000 ಮುಖಬೆಲೆಯ ನೋಟುಗಳು ಇದ್ದವರು ಸೆ.30ರೊಳಗೆ ಯಾವುದೇ ಬ್ಯಾಂಕ್‌ಗೆ ಹೋಗಿ ಬದಲಾವಣೆ ಮಾಡಿಕೊಳ್ಳಬಹುದು ಅಥವಾ ಅಕೌಂಟ್‌ಗೆ ಹಾಕಬಹುದು ಎಂದು ಸೂಚನೆ ನೀಡಲಾಗಿದೆ. 2016ರಲ್ಲಿ ನೋಟು ಅಮಾನ್ಯದ ಬಳಿಕ ಜನ ಹಳೆಯ 1,000 ರೂ. ಮತ್ತು 500 ರೂ. ಮುಖಬೆಲೆಯ ನೋಟುಗಳನ್ನು ಬದಲಾಯಿಸಿಕೊಳ್ಳಲು ಅನುಕೂಲವಾಗಲಿ ಎಂಬ ಕಾರಣದಿಂದ ಭಾರತೀಯ ರಿಸರ್ವ್‌ ಬ್ಯಾಂಕ್‌ 2,000 ರೂ. ಮುಖಬೆಲೆಯ ನೋಟುಗಳನ್ನು ಜಾರಿಗೆ ತಂದಿದ್ದು. ಆಗ ಈ ನೋಟು ಪರಿಚಯಿಸಿದ್ದಕ್ಕೆ ಸಾಕಷ್ಟು ಆಕ್ಷೇಪಗಳೂ ವ್ಯಕ್ತವಾಗಿದ್ದವು. ಕಪ್ಪು ಹಣ ನಿಯಂತ್ರಣ ಕಾರಣದಿಂದಾಗಿ ನೋಟು ಅಮಾನ್ಯ ಮಾಡಲಾಗಿದ್ದು, ಈಗ ಮತ್ತೆ ಗರಿಷ್ಠ ಮುಖಬೆಲೆಯ ನೋಟು ಜಾರಿಗೆ ತಂದರೆ ಮತ್ತೆ ಕಾಳಧನ ಸಂಗ್ರಹಕ್ಕೆ ದಾರಿ ಮಾಡಿಕೊಟ್ಟ ರೀತಿ ಆಗುತ್ತದೆ ಎಂಬ ಮಾತುಗಳೂ ಕೇಳಿಬಂದಿದ್ದವು.

ಆರಂಭದ ಹಂತದಲ್ಲಿ ಈ ನೋಟುಗಳ ಮೂಲಕ ವಹಿವಾಟು ಜೋರಾಗಿಯೇ ಇತ್ತು. ತದ ಅನಂತರದಲ್ಲಿ ಆರ್‌ಬಿಐ ನಿಧಾನಗತಿಯಲ್ಲಿ ಈ ನೋಟುಗಳ ಬಳಕೆ ಕಡಿಮೆ ಮಾಡಲು ಶುರು ಮಾಡಿತು. ಇತ್ತೀಚಿನ ವರ್ಷಗಳಲ್ಲಿ ಎಟಿಎಂಗಳಲ್ಲಿ ಈ ನೋಟುಗಳನ್ನು ಬಳಕೆ ಮಾಡುತ್ತಿರಲಿಲ್ಲ. ಸಾಮಾನ್ಯವಾಗಿ ಬ್ಯಾಂಕ್‌ಗಳಲ್ಲಿ ಮಾತ್ರ ಹಣ ಬಿಡಿಸಿಕೊಂಡರೆ ಕೊಡಲಾಗುತ್ತಿತ್ತು. ಅಂತೆಯೇ ಈಗ ಭಾರತೀಯ ರಿಸರ್ವ್‌ ಬ್ಯಾಂಕ್‌ 2,000 ರೂ. ಮುಖಬೆಲೆಯ ನೋಟುಗಳನ್ನು ವಾಪಸ್‌ ಪಡೆದಿದೆ. ಆದರೆ  ಈ ನೋಟುಗಳ ಮಾನ್ಯತೆ ಹಾಗೆಯೇ ಇರುತ್ತದೆ ಎಂದೂ ಹೇಳಿದೆ. ಜತೆಗೆ 2,000 ರೂ. ಮುಖಬೆಲೆ ನೋಟು ಹೊಂದಿರುವಂಥವರು ಯಾವುದೇ ಬ್ಯಾಂಕ್‌ನ, ಯಾವುದೇ ಬ್ರ್ಯಾಂಚ್‌ಗೆ ಹೋಗಿ ಬೇಕಾದರೂ ಬದಲಾಯಿಸಿಕೊಳ್ಳಬಹುದು ಎಂದಿದೆ.

ಇದಕ್ಕೆ ಕಾರಣವೂ ಇದೆ. ಈ ಹಿಂದೆ ನೋಟು ಅಮಾನ್ಯ ಮಾಡಿದಾಗ ಇಡೀ ದೇಶಾದ್ಯಂತ ಬ್ಯಾಂಕ್‌ಗಳ ಮುಂದೆ ಜನ ಸರದಿ ನಿಲ್ಲುವ ಸ್ಥಿತಿ ಎದುರಾಗಿತ್ತು. ಈ ಬಗ್ಗೆ ತೀವ್ರ ಆಕ್ರೋಶವೂ ವ್ಯಕ್ತವಾಗಿತ್ತು. ಈಗಲೂ ಅಂಥ ಸ್ಥಿತಿ ಬರಬಾರದು ಎಂದು ಮೊದಲೇ ಆರ್‌ಬಿಐ ಮುನ್ನೆಚ್ಚರಿಕೆ ವಹಿಸಿದೆ.

ಈ ವಿಚಾರದಲ್ಲಿ ಕಿಡಿಗೇಡಿಗಳು ಸಾಕಷ್ಟು ವದಂತಿ ಹಬ್ಬಿಸುವ ಸಾಧ್ಯತೆಗಳು ಹೆಚ್ಚಾಗಿವೆ. 2,000 ರೂ. ನೋಟು ಅಮಾನ್ಯವಾಗಿಲ್ಲ ಎಂದು ಸ್ವತಃ ಆರ್‌ಬಿಐ ಸ್ಪಷ್ಟಪಡಿಸಿದೆ. ಹಾಗೆಯೇ ನೋಟು ಬದಲಾವಣೆಗೆ ಗುರುತಿನ ಚೀಟಿ ಕೇಳುತ್ತಾರೆ, ಅರ್ಜಿ ಭರ್ತಿ ಮಾಡುತ್ತಾರೆ ಎಂದೆಲ್ಲ ಸುದ್ದಿಗಳು ಓಡಾಡಿದ್ದವು. ಇದನ್ನು ಭಾರತೀಯ ಸ್ಟೇಟ್‌ ಬ್ಯಾಂಕ್‌ ನಿರಾಕರಿಸಿದ್ದು ಇಂಥ ಯಾವುದೇ ಕ್ರಮದ ಬಗ್ಗೆ ಸೂಚನೆ ಕೊಟ್ಟಿಲ್ಲ ಎಂದಿದೆ.

ಹೀಗಾಗಿ ಸಾಮಾಜಿಕ ಮಾಧ್ಯಮಗಳ ಮೂಲಕ ಹರಿದಾಡುವಂಥ ಸುದ್ದಿಗಳನ್ನು ಜನ ನಂಬಲು ಹೋಗಬಾರದು. ಒಮ್ಮೆಗೆ 20,000 ರೂ. ಮೌಲ್ಯದ ನೋಟು ಬದಲಾವಣೆ ಅಥವಾ ಅಕೌಂಟ್‌ಗೆ ಹಾಕಲು ಅವಕಾಶವಿದೆ. ಹೀಗಾಗಿ ಸಾವಧಾನದಿಂದ ಹೋಗಿ ನೋಟು ಬದಲಾಯಿಸಿಕೊಳ್ಳಿ. ನಿಮ್ಮ ಬಳಿ ಇರುವ ನೋಟು ಮಾನ್ಯತೆ ಕಳೆದುಕೊಂಡಿಲ್ಲ, ಅದು ಚಾಲ್ತಿಯಲ್ಲಿರುವ ಹಣ ಎಂಬುದು ಆರ್‌ಬಿಐನ ಖಚಿತೋಕ್ತಿ. ಹೀಗಾಗಿ ಯಾರ ಮಾತುಗಳಿಗೂ ಕಿವಿಗೊಡದೆ ಆತಂಕದಿಂದ ವರ್ತಿಸಬೇಡಿ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.