Saharanpur; ದೇವಾಲಯ ನಿರ್ಮಾಣ ಕಾರ್ಯದ ವೇಳೆ ಮೊಘಲರ ಕಾಲದ 400 ನಾಣ್ಯ ಪತ್ತೆ

ಪತ್ತೆಯಾಗಿರುವ ನಾಣ್ಯಗಳು ಅಂದಾಜು 350 ವರ್ಷಗಳ ಹಿಂದಿನದ್ದಾಗಿದೆ.

Team Udayavani, May 23, 2023, 2:53 PM IST

Saharanpur; ದೇವಾಲಯ ನಿರ್ಮಾಣ ಕಾರ್ಯದ ವೇಳೆ ಮೊಘಲರ ಕಾಲದ 400 ನಾಣ್ಯ ಪತ್ತೆ

ಲಕ್ನೋ: ದೇವಸ್ಥಾನ ನಿರ್ಮಾಣದ ಕಾಮಗಾರಿ ಸಂದರ್ಭದಲ್ಲಿ ಮೊಘಲರ ಕಾಲದ 400 ನಾಣ್ಯಗಳು ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಸಹರಾನ್‌ ಪುರ್‌ ನಲ್ಲಿ ನಡೆದಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:VIRAL: ಮದುವೆ ದಿನ ಪರಾರಿಯಾಗಲು ಯತ್ನಿಸಿದ ವರ: 20ಕಿ.ಮೀ ಚೇಸ್‌ ಮಾಡಿ ಮಂಟಪಕ್ಕೆ ಕರೆತಂದ ವಧು

ಪೊಲೀಸ್‌ ವರಿಷ್ಠಾಧಿಕಾರಿ ಸಾಗರ್‌ ಜೈನ್‌ ಅವರು ನೀಡಿರುವ ಮಾಹಿತಿ ಪ್ರಕಾರ, ಸಹರಾನ್‌ ಪುರದ ಹುಸೈನ್‌ ಪುರ ಗ್ರಾಮದ ಸತಿ ಧಾಮ್‌ ದೇವಾಲಯದ ಆವರಣ ಗೋಡೆಯನ್ನು ತೆರವುಗೊಳಿಸಿ, ಮಣ್ಣನ್ನು ಅಗೆಯುತ್ತಿದ್ದ ವೇಳೆ ಈ ನಾಣ್ಯಗಳು ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಸುಮಾರು 400 ನಾಣ್ಯಗಳನ್ನು ವಶಕ್ಕೆ ಪಡೆದಿರುವುದಾಗಿ ಪಿಟಿಐ ವರದಿ ಮಾಡಿದೆ. ಮೊಘಲರ ಕಾಲದಲ್ಲಿ ಬಳಸುತ್ತಿದ್ದ ಈ ನಾಣ್ಯದಲ್ಲಿ ಅರೆಬಿಕ್‌ ಭಾಷೆಯಲ್ಲಿ ಲಿಪಿ ಇರುವುದಾಗಿ ಜೈನ್‌ ವಿವರಿಸಿದ್ದಾರೆ.

ಪುರಾತತ್ವ ಶಾಸ್ತ್ರ ಇಲಾಖೆ ಕೂಡಾ ನಾಣ್ಯಗಳನ್ನು ಪರಿಶೀಲಿಸುತ್ತಿದ್ದು, ಯಾವ ಲೋಹವನ್ನು ಬಳಸಿ ನಾಣ್ಯಗಳನ್ನು ತಯಾರಿಸಲಾಗಿದೆ ಎಂಬುದನ್ನು ಖಚಿತಪಡಿಸಲಿದೆ. ಪತ್ತೆಯಾಗಿರುವ ನಾಣ್ಯಗಳು ಅಂದಾಜು 350 ವರ್ಷಗಳ ಹಿಂದಿನದ್ದಾಗಿದೆ. ಪ್ರತಿ ನಾಣ್ಯವು 11 ಗ್ರಾಮ್‌ ತೂಕವಿದೆ.

ವರದಿಯ ಪ್ರಕಾರ, ಪ್ರತಿ ನಾಣ್ಯದ ಪ್ರಸ್ತುತ ಮಾರುಕಟ್ಟೆ ಬೆಲೆ 3,500 ರೂಪಾಯಿ ಎಂದು ತಿಳಿಸಿದೆ. ಹುಸೈನ್‌ ಪುರ್‌ ನಲ್ಲಿ ದೊರೆತ ನಾಣ್ಯಗಳು ಮೊಘಲ್‌ ದೊರೆ ಶಾ ಅಲಾಂ II ಕಾಲಘಟ್ಟದ್ದಾಗಿದೆ. ಇದರಲ್ಲಿರುವುದು ಪಾರ್ಸಿ ಭಾಷೆಯ ಲಿಪಿಯಾಗಿದೆ ಎಂದು ಇತಿಹಾಸಕಾರ ರಾಜೀವ್‌ ಉಪಾಧ್ಯಾಯ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

2

Theft Case: ಬ್ಯಾಂಕಿನಿಂದ ಹಣದ ಬ್ಯಾಗ್‌ ಕಳವು ಪ್ರಕರಣ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.