ಅಂಬರ್‌ಗ್ರೀಸ್‌ ಮಾರಾಟ ಯತ್ನ: ಮೂವರ ಸೆರೆ


Team Udayavani, May 24, 2023, 2:44 PM IST

ಅಂಬರ್‌ಗ್ರೀಸ್‌ ಮಾರಾಟ ಯತ್ನ: ಮೂವರ ಸೆರೆ

ಮೈಸೂರು: ಅಕ್ರಮವಾಗಿ ಮಾರಾಟ ಮಾಡಲು ಕೇರಳದಿಂದ ತಂದಿದ್ದ ಸುಮಾರು 18 ಕೋಟಿ ಮೌಲ್ಯದ 9 ಕೆ.ಜಿ. 821 ಗ್ರಾಂ ಅಂಬರ್‌ಗ್ರೀಸ್‌ (ತಿಮಿಂಗಲ ವಾಂತಿ) ವಶಪಡಿಸಿಕೊಂಡಿರುವ ಪೊಲೀಸರು ಕೇರಳದ ಮೂವರನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್‌ ಹೇಳಿದರು.

ನಗರದಲ್ಲಿನ ಎಸ್‌ಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂಬರ್‌ ಗ್ರೀಸನ್ನು ಸುಗಂಧ ದ್ರವ್ಯ ಹಾಗೂ ಔಷಧ ತಯಾರಿಕೆಗೆ ಬಳಕೆ ಮಾಡಲಾಗುತ್ತದೆ. ಕೋಟ್ಯಂತರ ರೂ. ಬೆಲೆ ಬಾಳುವ ಈ ವಸ್ತುವಿಗೆ ವಿದೇಶಗಳಲ್ಲಿ ಭಾರಿ ಬೇಡಿಕೆ ಇದೆ ಎಂದರು.

ಮಾಲು ಸಮೇತ ಬಂಧನ: ಆರೋಪಿಗಳು ಅಂಬರ್‌ ಗ್ರೀಸನ್ನು ಕೇರಳದಿಂದ ತಂದು ಎಚ್‌.ಡಿ.ಕೋಟೆಯ ಹೋಟೆಲೊಂದರಲ್ಲಿ ಉಳಿದುಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ಹ್ಯಾಂಡ್‌ಪೋಸ್ಟ್‌ ಬಳಿ ದಾಳಿ ನಡೆಸಿದ ಎಚ್‌.ಡಿ.ಕೋಟೆ ಹಾಗೂ ಸೆನ್‌ ಪೊಲೀಸರು ಅಂಬರ್‌ಗ್ರೀಸ್‌ ಹಾಗೂ ಕಾರಿನ ಸಮೇತ ಕೇರಳದ ಮೂವರನ್ನು ಬಂಧಿಸಿದ್ದಾರೆ.

ಆರೋಪಿಗಳು ಅಂಬರ್‌ ಗ್ರೀಸನ್ನು ಬೇರೊಬ್ಬರಿಂದ ಪಡೆದುಕೊಂಡು ಮತ್ತೂಬ್ಬರಿಗೆ ಮಾರಾಟ ಮಾಡಲು ಮುಂದಾಗಿದ್ದರು. ಇದರಲ್ಲಿ ಅಂತಾರಾಷ್ಟ್ರೀಯ ಮಾರಾಟ ಜಾಲ ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವಿವರಿಸಿದರು.

ಸುಲಿಗೆಕೋರನ ಬಂಧನ: ಬಾಡಿಗೆಗೆ ಆಟೋದಲ್ಲಿ ತೆರಳಿ ಚಾಲಕನಿಗೆ ಚಾಕು ತೋರಿಸಿ 2 ಸಾವಿರ ನಗದು, ಒಂದು ಮೊಬೈಲ್‌ ಹಾಗೂ ಆಟೋದೊಂದಿಗೆ ಪರಾರಿ ಯಾಗಿದ್ದ ಆರೋಪಿಯನ್ನು ವರುಣ ಠಾಣೆ ಪೊಲೀ ಸರು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಮೇ 19ರಂದು ರವಿ ಎಂಬುವವರ ಆಟೋದಲ್ಲಿ ಇಬ್ಬರು ವ್ಯಕ್ತಿಗಳು ಕಡಕೊಳಕ್ಕೆ ತೆರಳಿದ್ದರು. ಈ ವೇಳೆ ಸ್ನೇಹಿತನನ್ನು ನೋಡಬೇಕೆಂದು ದೇವಲಾಪುರದ ಕಡೆಗೆ ಹೋಗುವಂತೆ ಹೇಳಿ ಮಾರ್ಗ ಮಧ್ಯೆ ಪೂರ್ಣಿಮ ಫಾರಂ ಹೌಸ್‌ ಬಳಿ ಸ್ನೇಹಿತ ಬರುತ್ತಾನೆಂದು ಆಟೋ ನಿಲ್ಲಿಸಿದ್ದಾರೆ. ಈ ವೇಳೆ ಮೂತ್ರ ವಿಜರ್ಸನೆಗೆಂದು ತೆರಳಿದ ಚಾಲಕ ರವಿಗೆ ಚಾಕು ತೋರಿಸಿ ಆತನ ಬಳಿಯಿದ್ದ 2 ಸಾವಿರ ನಗದು, ಒಂದು ಮೊಬೈಲ್‌ ಫೋನ್‌ ಕಿತ್ತುಕೊಂಡು, ಆತನನ್ನು ಹಳ್ಳಕ್ಕೆ ತಳ್ಳಿ ಆಟೋದೊಂದಿಗೆ ಪರಾರಿಯಾಗಿದ್ದರು. ಈ ಸಂಬಂಧ ಚಾಲಕ ರವಿ ವರುಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಮೇ 21ರಂದು ಆರೋಪಿಯನ್ನು ಬಂಧಿಸಿ ಆಟೋ, ಮೊಬೈಲ್‌ ವಶಪಡಿಸಿಕೊಂಡಿದ್ದಾರೆ.

ಈತ ತನ್ನ ಸ್ನೇಹಿತನೊಂದಿಗೆ ಇಲವಾಲ, ಬಿಳಿಗೆರೆ, ಮೈಸೂರು ದಕ್ಷಿಣ ಠಾಣೆಗಳ ವ್ಯಾಪ್ತಿಯಲ್ಲಿ 6 ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ. ತಲೆ ಮರೆಸಿಕೊಂಡಿರುವ ಮತ್ತೂಬ್ಬ ಆರೋಪಿಯ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಎಸ್ಪಿ ಡಾ.ಬಿ.ಎನ್‌. ನಂದಿನಿ, ಮೈಸೂರು ಗ್ರಾಮಾಂತರ ಉಪವಿಭಾಗದ ಡಿಎಸ್‌ಪಿ ಶಿವಕುಮಾರ್‌, ಸಿಪಿಐ ಸ್ವರ್ಣ.ಜಿ.ಎಸ್‌, ಎಚ್‌.ಡಿ.ಕೋಟೆ ಠಾಣೆ ಇನ್ಸ್‌ಪೆಕ್ಟರ್‌ ಶಬ್ಬೀರ್‌ ಹುಸೇನ್‌, ಸೆನ್‌ ಪೊಲೀಸ್‌ ಠಾಣೆಯ ಪುರುಷೋತ್ತಮ್‌ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.