ಮತ್ತೆ ಸಿಎಂ ಸ್ಫೋಟ: ಸಿಎಲ್‌ಪಿ ಸಭೆಯಲ್ಲಿ ಸುರೇಶ್‌- ಪಾಟೀಲ್‌ ಜಟಾಪಟಿ


Team Udayavani, May 25, 2023, 8:05 AM IST

ಮತ್ತೆ ಸಿಎಂ ಸ್ಫೋಟ: ಸಿಎಲ್‌ಪಿ ಸಭೆಯಲ್ಲಿ ಸುರೇಶ್‌- ಪಾಟೀಲ್‌ ಜಟಾಪಟಿ

ಬೆಂಗಳೂರು: ಸಿದ್ದರಾಮಯ್ಯನವರೇ ಮುಂದಿನ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂಬ ಸಚಿವ ಎಂ.ಬಿ. ಪಾಟೀಲ್‌ ಹೇಳಿಕೆಯ ಕಿಡಿ ಇನ್ನೂ ಆರಿಲ್ಲ. ಬುಧವಾರ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸಂಸದ ಡಿ.ಕೆ. ಸುರೇಶ್‌ ಹಾಗೂ ಸಚಿ ವ ಎಂ.ಬಿ. ಪಾಟೀಲ್‌ ಮಧ್ಯೆ ಇ ದು ವಾಗ್ಯುದ್ಧಕ್ಕೆ ಕಾರಣವಾಗಿದೆ.
ಇವರಿಬ್ಬರ ನಡುವೆ ಕೆಲವು ಕ್ಷಣ ನಡೆದ “ಬಿಗು’ವಾದ ಮಾತುಕತೆ ಆಡಳಿತ ಪಕ್ಷದ ಶಾಸಕರು ದಿಗ್ಮೂಢರಾಗುವಂತೆ ಮಾಡಿದೆ. ಹೀಗಾಗಿ ಒಳಮನೆಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಮತ್ತೂಮ್ಮೆ ಸಾಬೀತಾಗಿದೆ. ಹೊಸದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಪಟ್ಟ ಮಹತ್ವದ ಸಭೆಗೆ ಮುನ್ನ ನಡೆದಿರುವ ಈ ಘಟನೆ ಹೈಕಮಾಂಡ್‌ ಕರ್ನಾಟಕ ದತ್ತ ಎಚ್ಚರಿಕೆಯ ಹೆಜ್ಜೆ ಇರಿಸುವಂತೆ ಮಾಡಲಿದೆ.

ನಡೆದದ್ದೇನು?
ಬುಧ ವಾರ ಬೆಳಗ್ಗೆ ವಿಧಾನಸೌಧದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಆಯೋಜಿಸಲಾಗಿತ್ತು. ಅದರಲ್ಲಿ ಶಾಸಕರು, ಪರಿಷತ್‌ ಸದಸ್ಯರು ಹಾಗೂ ಸಂಸದರು ಭಾಗಿಯಾಗಿದ್ದರು.
ಸಭೆ ಮುಕ್ತಾಯಗೊಂಡ ಬಳಿಕ ಒಬ್ಬೊಬ್ಬರಾಗಿ ತೆರಳುತ್ತಿದ್ದಾಗ ಡಿ.ಕೆ. ಸುರೇಶ್‌ ಅವರು ಗಟ್ಟಿ ಧ್ವನಿಯಲ್ಲಿ, “ರೀ ಎಂ.ಬಿ. ಪಾಟೀಲ್ರೆà ಬರ್ರೀ ಇಲ್ಲಿ’ ಎಂದು ಕರೆದರು. ತಮ್ಮ ಕಚೇರಿಯತ್ತ ಹೊರಟಿದ್ದ ಪಾಟೀಲ್‌ ಇದರಿಂದ ಒಂದು ಕ್ಷಣ ವಿಚಲಿತರಾದರು. ಬಳಿಕ ಪಾಟೀಲ್‌ ಅವರು ಸುರೇಶ್‌ ಬಳಿ ಬಂದಾಗ, “ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಐದು ವರ್ಷ ಮುಂದುವರಿಯುವ ಬಗ್ಗೆ’ ಪ್ರಸ್ತಾವಿಸಿ, “ಈ ರೀತಿ ಹೇಳುವುದಕ್ಕೆ ನೀವು ಯಾರ್ರೀ’ ಎಂದು ಸುರೇಶ್‌ ಏರಿದ ಧ್ವನಿಯಲ್ಲಿ ಪ್ರಶ್ನಿಸಿದರು. ಇದರಿಂದ ತಾಳ್ಮೆ ಕಳೆದುಕೊಂಡ ಎಂ.ಬಿ. ಪಾಟೀಲ್‌, “ಅದನ್ನು ಕೇಳುವುದಕ್ಕೆ ನೀವು ಯಾರು?’ ಎಂದು ತಿರುಗೇಟು ನೀಡಿದರು.

ಇಬ್ಬರ ಮಧ್ಯೆ ಜಟಾಪಟಿ ನಡೆಯುವುದು ನಿಶ್ಚಿತ ಎಂದರಿತ ಶಾಸಕರು ತತ್‌ಕ್ಷಣ ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ತಡೆದರು. ಇಬ್ಬರು ಪರಸ್ಪರ ದುರುಗುಟ್ಟಿ ನೋಡುತ್ತ ಹೊರ ನಡೆದರು. ಬಾಗಿಲ ಬಳಿ ಬಂದಾಗ ಎಂ.ಬಿ. ಪಾಟೀಲರ ಕೈಯನ್ನು ಕುಲುಕುವ ರೀತಿ ಹಿಡಿದ ಸುರೇಶ್‌, “ಸ್ವಲ್ಪ ಬಿಗಿಯಾಗಿರಿ’ ಎಂದು ಸೂಚ್ಯವಾಗಿ ಎಚ್ಚರಿಕೆ ನೀಡಿದರು. “ನೀವು ನನ್ನ ಕಚೇರಿಗೆ ಬನ್ನಿ, ಅಲ್ಲಿ ಮಾತಾಡೋಣ’ ಎಂದು ಪಾಟೀಲ್‌ ಪ್ರತಿಕ್ರಿಯೆ ನೀಡಿ ತೆರಳಿದರು ಎಂದು ಪ್ರತ್ಯಕ್ಷದರ್ಶಿ ಶಾಸಕರು ತಿಳಿಸಿದ್ದಾರೆ.

ಏನಿದು ವಿವಾದ?
ಸೋಮವಾರ ಮೈಸೂರಿನಲ್ಲಿ ಮಾತನಾಡಿದ್ದ ಎಂ.ಬಿ. ಪಾಟೀಲ್‌, “ಮುಂದಿನ ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ’ ಎಂದು ಹೇಳಿದ್ದರು. ಈ ಹೇಳಿಕೆ ಕಾಂಗ್ರೆಸ್‌ನಲ್ಲಿ ತಲ್ಲಣ ಸೃಷ್ಟಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಡಿ.ಕೆ. ಸುರೇಶ್‌, “ನಾನು ತೀಕ್ಷ್ಣವಾಗಿ ಪ್ರತಿಕ್ರಿಯಿಸಬಲ್ಲೆ, ಎಂ.ಬಿ. ಪಾಟೀಲ್‌ ಅವರೇ ನಿಮಗೆ ಇದೆಲ್ಲ ಬೇಡ’ ಎಂದು ಎಚ್ಚರಿಕೆ ನೀಡಿದ್ದರು.

“ನನ್ನ ಡಿಕ್ಷನರಿಯಲ್ಲೇ ಇಲ್ಲ’
ಘಟನೆಯ ಬಳಿಕ, “ಡಿ.ಕೆ. ಸುರೇಶ್‌ ನಿಮಗೆ ವಾರ್ನಿಂಗ್‌ ಮಾಡಿದರೇ?’ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಎಂ.ಬಿ. ಪಾಟೀಲ್‌, “ನನ್ನ ತಂದೆ -ತಾಯಿಯೇ ನನಗೆ ವಾರ್ನಿಂಗ್‌ ಮಾಡಿಲ್ಲ. ವಾರ್ನ್ ಮಾಡಿಸಿಕೊಳ್ಳುವಷ್ಟು ವೀಕ್‌ ನಾನಲ್ಲ. ವಾರ್ನಿಂಗ್‌ ತೆಗೆದುಕೊಳ್ಳುತ್ತೇನೆ ಎಂಬ ಪದ ನಮ್ಮ ಡಿಕ್ಷನರಿಯಲ್ಲೇ ಇಲ್ಲ. ಬೇಕಿದ್ದರೆ ವಾರ್ನಿಂಗ್‌ ಕೊಡುತ್ತೇವೆ’ ಎಂದು ತಿರುಗೇಟು ನೀಡಿದರು.

“ನಮ್ಮಿಬ್ಬರ ಮಧ್ಯೆ ಯಾವುದೇ ವಾಕ್ಸಮರ ನಡೆದಿಲ್ಲ. ಸುರೇಶ್‌ ಅವರು ಎಂ.ಬಿ. ಪಾಟೀಲರೇ ಎಂದು ಬಹುವಚನದಲ್ಲೇ ಕರೆದಿದ್ದಾರೆ. ಬಳಿಕ ಗಟ್ಟಿಯಾಗಿರಿ ಎಂದು ಹೇಳಿದರು. ಕಚೇರಿಗೆ ಬನ್ನಿ ಅಲ್ಲಿ ಮಾತಾಡೋಣ ಎಂದು ಹೇಳಿ ನಾನು ಬಂದಿದ್ದೇನೆ. ಇದನ್ನು ಬಿಟ್ಟು ಬೇರೆ ಏನೂ ನಡೆದಿಲ್ಲ. ಆರು ಬಾರಿ ಶಾಸಕನಾಗಿ, ಐದು ವರ್ಷ ಜಲಸಂಪನ್ಮೂಲ ಸಚಿವನಾಗಿ, ಗೃಹ ಸಚಿವನಾಗಿ ನಾನು ಕೆಲಸ ಮಾಡಿದ್ದೇನೆ. ನಾನು ಹಿರಿಯ ನಾಯಕ. ಮೂವತ್ತು ವರ್ಷದಿಂದ ರಾಜಕಾರಣದಲ್ಲಿದ್ದೇನೆ’ ಎಂದು ಪಾಟೀಲ್‌ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

cmCM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.