![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 25, 2023, 1:36 PM IST
ಮುಂಬಯಿ: ʼದಿ ಕೇರಳ ಸ್ಟೋರಿʼ ನಟಿ ಅದಾ ಶರ್ಮಾ ಸಿನಿಮಾ ರಿಲೀಸ್ ಆದಾಗಿನಿಂದ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಸಿನಿಮಾದಲ್ಲಿನ ಅವರ ನಟನೆ ಬಗ್ಗೆ ಜನ ಶಹಬ್ಬಾಸ್ ಗಿರಿಯನ್ನು ಕೊಟ್ಟಿದ್ದು ಒಂದು ಕಡೆಯಾದರೆ, ಇನ್ನೊಂದೆಡೆ ಈ ಸಿನಿಮಾವನ್ನು ಆಯ್ದುಕೊಂಡ ಬಗ್ಗೆಯೂ ಕೆಲ ಜನ ಅವರ ವಿರುದ್ಧ ಕಿಡಿಕಾರಿದ್ದಾರೆ.
ವಿವಾದದ ಹೊರತಾಗಿಯೂ ಸುದೀಪ್ತೋ ಸೇನ್ ನಿರ್ದೇಶನದ ಸಿನಿಮಾ 200 ಕೋಟಿ ಕ್ಲಬ್ ಸೇರಿದೆ. ಸಿನಿಮಾವನ್ನು ಅಭೂತಪೂರ್ವವಾಗಿ ಯಶಸ್ಸುಗೊಳಿಸಿದ ಪ್ರೇಕ್ಷಕರಿಗೆ ನಟಿ ಅದಾ ಶರ್ಮಾ ಧನ್ಯವಾದವನ್ನು ಹೇಳಿದ್ದಾರೆ.
ಸಿನಿಮಾ ರಿಲೀಸ್ ಆದಾಗಿನಿಂದ ಸಿನಿಮಾ ತಂಡಕ್ಕೆ ಕೆಲವರಿಂದ ಬೆದರಿಕೆಗಳು ಬಂದಿರುವುದು ವರದಿಯಾಗಿತ್ತು. ಇದೀಗ ನಟಿ ಅದಾ ಶರ್ಮಾ ಅವರ ವೈಯಕ್ತಿಕ ಫೋನ್ ನಂಬರ್ ನ್ನು ಹ್ಯಾಕರ್ ವೊಬ್ಬ ಲೀಕ್ ಮಾಡಿದ್ದಾನೆ ಎನ್ನಲಾಗಿದೆ.
‘jhamunda_bolte’ ಎಂಬ ಬಳಕೆದಾರ ಇನ್ಸ್ಟಾಗ್ರಾಮ್ ನಲ್ಲಿ ನಟಿಯ ಫೋನ್ ನಂಬರ್ ಲೀಕ್ ಮಾಡಿದ್ದಾನೆ. ಕೆಲವರು ನಟಿಯ ನಂಬರ್ ಪಡೆದು ನಟಿಗೆ ನಾನಾ ರೀತಿಯಲ್ಲಿ ಮೆಸೇಜ್ ಗಳನ್ನು ಮಾಡಿ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ಹ್ಯಾಕರ್ ಶರ್ಮಾ ನನ್ನಿಂದ ಬೇಸರದಲ್ಲಿದ್ದಾರೆ. ಇನ್ನೊಮ್ಮೆ ಮುಸ್ಲಿಂಮರ ವಿರುದ್ಧದ ಸಿನಿಮಾ ಬಂದರೆ ರಿಜೆಕ್ಟ್ ಮಾಡಿ ಎಂದು ಮತ್ತೊಂದು ಪೋಸ್ಟ್ ಮಾಡಿದ್ದಾನೆ. ಹೊಸ ನಂಬರ್ ಬಳಸಿದರೆ ಅದನ್ನು ಕೂಡ ಲೀಕ್ ಮಾಡುತ್ತೇನೆ ಎಂದು ಬೆದರಿಕೆಯನ್ನು ಹಾಕಿದ್ದಾನೆ.
ನಟಿಯ ಅಭಿಮಾನಿಗಳು ಅಕೌಂಟ್ ಬಗ್ಗೆ ಕೂಡಲೇ ರಿಪೋರ್ಟ್ ಮಾಡಿದ ಬಳಿಕ ಆತನ ಅಕೌಂಟ್ ಸ್ಥಗಿತಗೊಂಡಿದೆ. ಕೆಲವೇ ಕ್ಷಣವಿದ್ದ ನಟಿಯ ನಂಬರ್ ಪೋಸ್ಟ್ ವೈರಲ್ ಆಗಿದೆ.
ಆದರೆ ನಟಿ ಅದಾ ಶರ್ಮಾ ಈ ಬಗ್ಗೆ ಇನ್ನು ಯಾವ ಪ್ರತಿಕ್ರಿಯೆ ನೀಡಿಲ್ಲ.
ʼದಿ ಕೇರಳ ಸ್ಟೋರಿʼ ಯಶಸ್ಸಿನಲ್ಲಿರುವ ನಟಿ ಅದಾ ಶರ್ಮಾ ಶೀಘ್ರದಲ್ಲಿ ತನ್ನ ಮುಂದಿನ ಚಿತ್ರದ ಬಗ್ಗೆ ಅನೌನ್ಸ್ ಮಾಡಲಿದ್ದಾರೆ.
View this post on Instagram
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.